ರಾಮನಗರ: ಸರ್ವ ಧರ್ಮ ಸಂದೇಶ ಸಾರುವ ನಾಡಿನ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ಕರಗ ಮಹೋತ್ಸವವನ್ನು ಈ ಬಾರಿ ರಾಮನಗರದಲ್ಲಿ ಆಗಸ್ಟ್ 4ರಂದು ನಾಡಹಬ್ಬದಂತೆ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.
ಆ.2ರಂದು ಮಡಿಲಕ್ಕಿ ಸೇವೆ :
ಆಗಸ್ಟ್ 2ರಂದು ಕ್ಷೇತ್ರದ ಜನರ ಹೆಸರಿನಲ್ಲಿ ಸಂಕಲ್ಪ ಮಾಡಿ ಪ್ರತಿ ವರ್ಷದಂತೆ ಈ ಬಾರಿಯೂ ಭಕ್ತ ಸಂರಕ್ಷಣಾರ್ಥ ನೆಲೆಸಿರುವ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಬನ್ನಿಮಹಂಕಾಳಿ ಅಮ್ಮ ಸೇರಿದಂತೆ ಒಟ್ಟು 16 ಶಕ್ತಿ ದೇವತೆಗಳಿಗೆ ಮಡಿಲಕ್ಕಿ ಸೇವೆ ಸಮರ್ಪಣೆ ಮಾಡಿ, ವಿಶೇಷ ಪೂಜೆ ನೆರವೇರಿಸುತ್ತೇನೆ ಎಂದು ತಿಳಿಸಿದ್ದಾರೆ.ಕೋಮು ಸಾಮರಸ್ಯ ಸಂದೇಶ ಸಾರುವ ಐತಿಹಾಸಿಕ ಕರಗವನ್ನು ಹಬ್ಬವಾಗಿ ಪ್ರತಿವರ್ಷ ಆಚರಿಸಲ್ಪಡುವ ಮೂಲಕ ರಾಮನಗರದ ಹಿರಿಮೆಯನ್ನು ಎಲ್ಲೆಡೆ ಪಸರಿಸಿದೆ. ಮೈಸೂರಿಗೆ ದಸರಾ ಹಬ್ಬವಿದ್ದಂತೆ, ರಾಮನಗರಕ್ಕೆ ಚಾಮುಂಡೇಶ್ವರಿ ಅಮ್ಮನವರ ಕರಗ ಹೆಚ್ಚು ಪ್ರಸಿದ್ಧಿಯಾಗಿದೆ. ಹೀಗಾಗಿ ಇಡೀ ನಗರವನ್ನು ವಿದ್ಯುತ್ ದೀಪ ಹಾಗೂ ಪ್ರಮುಖ ವೃತ್ತಗಳನ್ನು ಹೂವಿನ ಅಲಂಕಾರದಿಂದ ಶೃಂಗರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ಈಗಾಗಲೇ ಸಿದ್ದವಾಗುತ್ತಿದೆ. ಸಾವಿರಾರು ಮಂದಿ ಪ್ರೇಕ್ಷಕರು ಆಗಮಿಸುವ ನಿರೀಕ್ಷೆ ಇದ್ದು, ಎಲ್ಲರಿಗೂ ಆಸನದ ವ್ಯವಸ್ಥೆ ಮಾಡಲಾಗುತ್ತದೆ. ವಿಶೇಷವಾಗಿ ಮಹಿಳಾ ಪ್ರೇಕ್ಷಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ಬಾರಿಯೂ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಲಿವೆ. ಈ ಧಾರ್ಮಿಕ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತಾದಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಭಕ್ತರಿಗೆ ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲಸೌಕರ್ಯಗಳ ಕೊರತೆ ಎದುರಾಗದಂತೆ ಕ್ರಮ ವಹಿಸಲಾಗಿದೆ. ಕರಗ ಸಂಚರಿಸುವ ರಸ್ತೆಗಳ ದುರಸ್ಥಿ ಕಾರ್ಯ ನಡೆಯುತ್ತಿದೆ.
ಕೋಟ್ ................
-ಇಕ್ಬಾಲ್ ಹುಸೇನ್, ಶಾಸಕರು, ರಾಮನಗರ
ಬೆಂಗಳೂರು ದಕ್ಷಿಣ ಜಿಲ್ಲೆಯ ಪಾಲಿಗೆ ಈ ವರ್ಷ ನೆನಪಿನಲ್ಲಿಡುವ ವರ್ಷವಾಗಿದೆ. ನಮ್ಮ ಜಿಲ್ಲೆಯ ಹೆಮ್ಮೆಯ ಸುಪುತ್ರ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದು, ಈ ವರ್ಷ ಮತ್ತಷ್ಟು ವಿಜೃಂಭಣೆಯಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವವನ್ನು ನಗರದ ಜಿಲ್ಲಾ ಕ್ರೀಡಾಂಗಣ ಮತ್ತು ಅರಳೀಮರ ವೃತ್ತ ಎರಡು ಕಡೆಗಳಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.
ಬಾಕ್ಸ್ ...............
ನಾನೇ ಖರ್ಚು ಭರಿಸುವೆ, ಯಾರೂ ಹಣ ಕೊಡಬೇಡಿತಾವು ಶಾಸಕರಾದ ನಂತರ ಈ ವರ್ಷ 4ನೇ ಬಾರಿಗೆ ಶ್ರೀ ಚಾಮುಂಡೇಶ್ವರಿ ಕರಗ ಮಹೋತ್ಸವವನ್ನು ಆಯೋಜಿಸುತ್ತಿದ್ದೇನೆ. ಪ್ರತಿಬಾರಿಗಿಂತಲೂ ಈ ವರ್ಷ ಕರಗ ಮಹೋತ್ಸವ ಅದ್ಧೂರಿಯಾಗಿ ಮೂಡಿ ಬರಲಿದೆ. ಕರಗ ಮಹೋತ್ಸವದ ಹೆಸರಿನಲ್ಲಿ ಯಾರಾದರು ದೇಣಿಗೆ ಇತ್ಯಾದಿ ಕೇಳಿದರೆ ಸರ್ಕಾರಿ ಅಧಿಕಾರಿಗಳು ಹಾಗೂ ಅಂಗಡಿ ಮುಂಗಟ್ಟುಗಳ ಮಾಲೀಕರು ಕೊಡಬೇಡಿ. ಎಷ್ಟೇ ಖರ್ಚಾದರೂ ನನ್ನ ಸ್ವಂತ ಹಣದಲ್ಲಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತೇನೆ. ನನಗೆ ಆ ಶಕ್ತಿಯನ್ನು ಶ್ರೀ ಚಾಮುಂಡೇಶ್ವರಿ ತಾಯಿ ಕರುಣಿಸಿದ್ದಾಳೆ. ಕರಗ ಆಚರಣೆಯಲ್ಲಿ ನಿಮ್ಮ ಪಾಲ್ಗೊಳ್ಳುವಿಕೆಯಷ್ಟೆ ನನಗೆ ಮುಖ್ಯ. ಎಲ್ಲರೂ ಸೇರಿ ಶಾಂತಿಯುತವಾಗಿ "ನಮ್ಮೂರ ಹಬ್ಬ - ರಾಮನಗರ ದಸರಾ "ವನ್ನು ಯಶಸ್ವಿಗೊಳಿಸೋಣ ಎಂದು ಶಾಸಕ ಇಕ್ಬಾಲ್ ಹುಸೇನ್ ವಿನಂತಿಸಿದ್ದಾರೆ.
29ಕೆಆರ್ ಎಂಎನ್ 4,5.ಜೆಪಿಜಿ4.ಶಾಸಕ ಇಕ್ಬಾಲ್ ಹುಸೇನ್.
5.ಶ್ರೀ ಚಾಮುಂಡೇಶ್ವರಿ ದೇವಿ.