ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಈ ಪ್ರಕರಣದಲ್ಲಿ ರಾಜ್ಯದ ಹಣ ಬೇರೆ ರಾಜ್ಯಕ್ಕೆ ಹೋಗಿರುವುದರಿಂದ ಸರ್ಕಾರ ಎಸ್ಐಟಿ ತನಿಖೆ ನೀಡಿರುವುದು ಸರಿಯಲ್ಲ. ಈ ಕೂಡಲೇ ಪ್ರಕರಣದಲ್ಲಿ ಸಿಬಿಐಗೆ ವಹಿಸಬೇಕು. ಸಚಿವ ನಾಗೇಂದ್ರರ ರಾಜೀನಾಮೆ ಪಡೆಯಬೇಕು. ಸಂಬಂಧಿಸಿದ ಅಧಿಕಾರಿಗಳ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕೆ.ಎಸ್.ಈಶ್ವರಪ್ಪನವರ ರಾಜೀನಾಮೆ ಪಡೆಯಲಾಗಿತ್ತು. ಅದೇ ಮಾದರಿಯಲ್ಲಿ ಇಲ್ಲಿಯೂ ಶಿಕ್ಷೆಯಾಗಬೇಕು. ಹಿಂದುಳಿದ ವರ್ಗದವರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಉಳಿದ ನಿಗಮಗಳಿಗೆ ಬಿಡುಗಡೆ ಮಾಡಿರುವ ಹಣದ ಮೇಲೆ ನಿಗಾ ಇಡಬೇಕು. ಯಾವುದೇ ನಿಗಮ ದಲ್ಲಿಯೂ ಇಂತಹ ಅವ್ಯವಹಾರ ನಡೆಯದಂತೆ ಎಚ್ಚರ ವಹಿಸುವಂತೆ ಆಗ್ರಹಿಸಿದರು.ಈಡಿಗ ಸಮುದಾಯಕ್ಕೆ ಅನ್ಯಾಯವಾಗಿದೆ. ಸಂಪುಟ ಪುನರ್ ರಚನೆಯಲ್ಲಿ ಇನ್ನೊಂದು ಮಂತ್ರಿ ಸ್ಥಾನ ನೀಡಬೇಕು. ಪ್ರಜ್ವಲ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಭಾವ ಚಿತ್ರಗಳಿಗೆ ಹೊಡೆಯುವ ಕೆಲಸ ಯಾರು ಮಾಡಬಾರದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ವೆಂಕಟೇಶ್ ಮೂರ್ತಿ, ಆರ್. ಪ್ರತಾಪ್, ಶಿವಾಜಿ, ನೂತನ್ ಇದ್ದರು.ಕುಟುಂಬಸ್ಥರಿಗೆ ಸಾಂತ್ವನ
ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ನಿವಾಸಕ್ಕೆ ಪ್ರಣಾವನಂದ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಿಮ್ಮ ಪತಿಯ ಸಾವಿಗೆ ನ್ಯಾಯ ಸಿಗಬೇಕು. ನಿಮ್ಮ ಜೊತೆ ನಾವು ಇರುತ್ತೇವೆ. ಸೂಕ್ತ ಪರಿಹಾರಕ್ಕೆ ಸರ್ಕಾರದ ಮೇಲೆ ಒತ್ತಡ ತರುತ್ತೇವೆ ಎಂದು ಚಂದ್ರಶೇಖರ್ ಪತ್ನಿ ಕವಿತಾ ಹಾಗೂ ಅವರ ಮಕ್ಕಳಿಗೆ ಸಾಂತ್ವನ ಹೇಳಿದರು.