-ಸಚಿವ ಶರಣಬಸಪ್ಪಗೌಡ ದರ್ಶನಪುರ ಸಲಹೆ । ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ನಾಡಿನಲ್ಲಿ ವೀರಶೈವ ಲಿಂಗಾಯತ ಸಮಾಜಕ್ಕೆ ಭವ್ಯ ಇತಿಹಾಸವಿದೆ, ಪ್ರಸಕ್ತ ದಿನಗಳಲ್ಲಿ ಸಮಾಜದಲ್ಲಿರುವ ಎಲ್ಲಾ ಒಳಪಂಗಡಗಳ ಜನರು ಎಲ್ಲಾ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಕೆಲಸ ಮಾಡುವುದು ಅನಿವಾರ್ಯ. ಅದರಿಂದ ಮಾತ್ರ ಸಮಾಜ ಸದೃಢ ಸಂಘಟನೆಯಾಗಿ, ಬದಲಾವಣೆ ಕಾಣಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಪುರ ಸಲಹೆ ನೀಡಿದರು.
ನಗರದ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಅಖಿತ ಭಾರತ ವೀರಶೈವ ಲಿಂಗಾಯತ ಮಹಾಸಭಭಾ ಜಿಲ್ಲಾ ಹಾಗೂ ತಾಲೂಕು ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಮ್ಮ ಸಮಾಜದ ಜನರು ಕೃಷಿಯನ್ನೆ ಅವಲಂಬಿಸಿ ಜೀವನ ಸಾಗಿಸುತ್ತಿದ್ದಾರೆ. ಇಂದು ನಾವು ಎಲ್ಲಾ ಕ್ಷೇತ್ರಗಳಲ್ಲಿ ಪೈಪೋಟಿ ಕಾಣುತ್ತಿದ್ದೇವೆ. ನಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉದ್ಯೋಗದಲ್ಲಿ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳುವುದು ಅವಶ್ಯಕ. ಈ ನಿಟ್ಟಿನಲ್ಲಿ ಎಲ್ಲರೂ ಗಂಭೀರ ಚಿಂತನೆ ಮಾಡಬೇಕು ಎಂದು ತಿಳಿಸಿದರು.
ನಗರದಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆ ಮಾಡಬೇಕೆಂಬುದು ಎಲ್ಲರ ಆಶಯವಾಗಿದೆ. ಅದಕ್ಕೆ ಎದುರಾಗಿರುವ ಸಮಸ್ಯೆ ಪರಿಹಾರಕ್ಕೆ ಸ್ಥಳೀಯ ಶಾಸಕರು ಹಾಗೂ ಮುಖಂಡರು ಈಗಾಗಲೇ ಚರ್ಚಿಸಿದ್ದಾರೆ. ಅದು ಕೂಡ ನೆರವೇರಲಿದೆ. ಸಮಾಜದಲ್ಲಿ ಮಾನವ ಸಂಪನ್ಮೂಲಕ್ಕೆ ಏನು ಕೊರತೆಯಿಲ್ಲ. ನೀವು ಎಲ್ಲರ ಸಹಕಾರ ಪಡೆದು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿ, ಎಲ್ಲರ ಮೆಚ್ಚುಗೆ ಗಳಿಸುವಂತೆ ತಿಳಿಸಿದರು.
ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಮತ್ತು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಮಾತನಾಡಿ, ಈಗಾಗಲೇ ರಾಜ್ಯ ಸರ್ಕಾರ ಮಾಡಿಸಿರುವ ಜನಗಣತಿಯಲ್ಲಿ ಲೋಪದೋಷಗಳಿವೆ. ಆ ತಂಡ ಸರಿಯಾಗಿ ಕೆಲಸ ಮಾಡಿಲ್ಲ. ಪರಿಣಾಮ ಸಮಾಜದ ಎಲ್ಲಾ ಪಕ್ಷದ ಶಾಸಕರು ಹಾಗೂ ಮುಖಂಡರು ಆಕ್ಷೇಪಿಸಿದ್ದಾರೆ ಎಂದು ತಿಳಿಸಿದರು.
ಬಸವಣ್ಣನವರು ಬಸವಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪಿಸುವೆ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಪರಿಣಾಮ ನಾವು ಜನರ ಆಶೀರ್ವಾದದಿಂದ ವಿಧಾನಸೌಧದಲ್ಲಿ ನಿಮ್ಮ ಪರ ಧ್ವನಿ ಎತ್ತುತ್ತಿದ್ದೇವೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನಾಯಕ ಮಾಲಿ ಪಾಟೀಲ್, ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಚೆನ್ನಪ್ಪಗೌಡ ಮೋಸಂಬಿ, ಹಿರಿಯ ಮುಖಂಡರಾದ ಶರಣಪ್ಪಗೌಡ ಮಲ್ಹಾರ, ಎಸ್.ಬಿ. ಪಾಟೀಲ್, ರಾಚನಗೌಡ ಮುದ್ನಾಳ, ಪಾರ್ವತಿ ಕರಡ್ಡಿ ಮಲ್ಹಾರ, ಬಸವರಾಜಪ್ಪ ಜೈನ್, ಸಿದ್ಧಪ್ಪ ಹೊಟ್ಟಿ, ಅಯ್ಯಣ್ಣ ಹುಂಡೇಕಾರ, ಆರ್. ಮಹಾದೇವಪ್ಪ ಅಬ್ಬೆತುಮಕೂರ, ಸೋಮಶೇಖರ ಮಣ್ಣೂರು, ಶಹಾಪುರ ತಾಲೂಕಾಧ್ಯಕ್ಷ ಸಿದ್ದಣ್ಣ ಆರಬೋಳ, ಸುರಪುರ ತಾಲೂಕಾಧ್ಯಕ್ಷ ಪ್ರಕಾಶ ಅಂಗಡಿ ಕನ್ನಳ್ಳಿ, ಯಾದಗಿರಿ ತಾಲೂಕಾಧ್ಯಕ್ಷ ರಾಜಶೇಖರ ಪಾಟೀಲ್ ಚಾಮನಳ್ಳಿ, ಸುರೇಶ ಜಾಕಾ ಮುಖಂಡರಿದ್ದರು.
------
-----
26ವೈಡಿಆರ್9: ಯಾದಗಿರಿ ನಗರದ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಅಖಿತ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಮಾತನಾಡಿದರು.