ಕನ್ನಡಪ್ರಭ ವಾರ್ತೆ ರಾಮನಗರ
ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳುವ ಮುನ್ನ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವ್ಯಾರು ಕುಮಾರಸ್ವಾಮಿ ಅವರನ್ನು ಚನ್ನಪಟ್ಟಣ ಬಿಟ್ಟು ಹೋಗಿ ಅಂತ ಹೇಳಿಲ್ಲ. ನಿಮ್ಮ ಅನುಕೂಲಕ್ಕೆ ಕ್ಷೇತ್ರ ಬಿಡುವುದಾದರೆ, ಜನರ ಅನುಕೂಲ ನೋಡುವವರು ಯಾರು ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿಗೆ ರಾಮನಗರ, ಚನ್ನಪಟ್ಟಣ ಬಗ್ಗೆ ಪ್ರೀತಿ ಇದ್ದರೆ ಅಭಿವೃದ್ಧಿ ಕಾರಣಕ್ಕಾಗಿಯಾದರೂ ಕ್ಷೇತ್ರ ಬಿಡಬೇಕು. ನಿಮ್ಮ ಅನುಕೂಲಕ್ಕೆ ಲೋಕಸಭಾ ಸದಸ್ಯರಾದಿರಿ, ನಿಮ್ಮ ತೆವಲಿಗೆ ನೀವು ಬದಲಾದರೆ ನಾವು ನಿಮ್ಮ ಹಿಂದೆ ಬರಬೇಕೆ ಎಂದು ಚನ್ನಪಟ್ಟಣ ಜನರೇ ಕೇಳುತಿದ್ದಾರೆ. ರಾಮನಗರದಿಂದ ಚನ್ನಪಟ್ಟಣಕ್ಕೆ ಬಂದರು. ಚನ್ನಪಟ್ಟಣದಿಂದ ಮಂಡ್ಯಕ್ಕೆ ಬಂದಿದ್ದಾಯಿತು. ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಮತ್ತೊಮ್ಮೆ ಕ್ಷೇತ್ರ ಬದಲಾಯಿಸುತ್ತಾರೆ ಎಂದು ಕಿಡಿಕಾರಿದರು.ಅಭಿವೃದ್ಧಿಗಾಗಿ ಕೈ ಬೆಂಬಲಿಸಿ:
ಕುಮಾರಸ್ವಾಮಿ ಅವರನ್ನು ನಾವ್ಯಾರು ಟಾರ್ಗೆಟ್ ಮಾಡುತ್ತಿಲ್ಲ. ನಾವು ಇಲ್ಲಿವರೆಗೂ ಅವರನ್ನು ಬೈದಿಲ್ಲ. ನಾವು ಅವರನ್ನು ವಿರೋಧಿಗಳು ಎಂದು ಎಲ್ಲಿಯೂ ಹೇಳಿಲ್ಲ. ಅವರೇ ನಮ್ಮನ್ನು ಬೈದುಕೊಂಡು ತಿರುಗಾಡುತ್ತಿದ್ದಾರೆ.
ಗೌಡರ ಮಾತಿಗೆ ಕೌಂಟಲ್ ಕೊಡಲ್ಲ:ನಿಖಿಲ್ ನನ್ನ ಮಗನಿದ್ದಂತೆ, ಅವರಿಗೆ ವಿರುದ್ಧವಾಗಿ ಮಾತನಾಡುವ ಅಗತ್ಯವಿಲ್ಲ. ದೇವೇಗೌಡರು ಹಿರಿಯ ರಾಜಕಾರಣಿಗಳು ಅವರಿಗೆ ಯಾರ ಬಗ್ಗೆಯಾದರೂ ಮಾತನಾಡುವ ಹಿರಿತನವಿದೆ. ಅವರು ಯಾರಿಗೆ ಬೇಕಾದರೂ ಸೊಕ್ಕು ಮುರಿಯುತ್ತೇನೆ, ಜಾಡಿಸಿ ಒದೆಯುತ್ತೇನೆ ಎಂದು ಹೇಳಬಹುದು. ಅವರ ಮಾತುಗಳೇ ಅವರಿಗೆ ಮುಳುವಾಗಲಿದೆ. ಅವರ ಮಾತಿಗೆ ನಾವು ಕೌಂಟರ್ ಕೊಡಲು ಆಗುವುದಿಲ್ಲ ಎಂದು ಹೇಳಿದರು.
ರಾಜಕಾರಣದಲ್ಲಿ ಪಕ್ಷಾಂತರ ಸಾಮಾನ್ಯ. ಜನತಾದಳವೇ ಅನೇಕ ಪಕ್ಷಗಳಾಗಿ ಬದಲಾವಣೆ ಆಗಿದೆ. ಅದೂ ಪಕ್ಷಾಂತರದ ಮಾದರಿಯೇ ಆಗಿತ್ತು. ಪಕ್ಷದಿಂದ ಯಾರಾದರೂ ಹೊರಗೆ ಹೋದರೆ, ಅದು ಅವರಿಗೆ ನಷ್ಟ. ಪಕ್ಷ ಬದಲಾವಣೆಗೆ ಯೋಗೇಶ್ವರ್ ಅವರನ್ನು ದೂರಿದರೆ ತಪ್ಪು. ಅನೇಕ ಕಾರಣಗಳಿಂದ ಅವರು ಪಕ್ಷ ಬದಲಿಸಿದ್ದಾರೆ. ಈಗ ಬಿಜೆಪಿ ಬಿಡಲು ಕುಮಾರಸ್ವಾಮಿ ಕಾರಣ ಎಂದು ದೂರಿದರು.ನಿಖಿಲ್ ಗೆ ಚನ್ನಪಟ್ಟಣದಲ್ಲಿ ಅನ್ಯಾಯ ಆಗಿಲ್ಲ. ಚನ್ನಪಟ್ಟಣಕ್ಕೂ ನಿಖಿಲ್ ಗೆ ಎದುರಾದ ಹಿಂದಿನ ಸೋಲಿಗೂ ಯಾವುದೇ ಸಂಬಂಧ ಇಲ್ಲ, ಎರಡು ಬಾರಿ ಚನ್ನಪಟ್ಟಣದಿಂದ ಗೆದ್ದ ಕುಮಾರಸ್ವಾಮಿ ಕ್ಷೇತ್ರದ ಜನರ ಕೈಗೂ ಸಿಗಲಿಲ್ಲ, ಗೆಲ್ಲಿಸಿದ ಜನರ ಸಮಸ್ಯೆಗೂ ಸ್ಪಂದಿಸಲಿಲ್ಲ. ಆದರೆ, ಯೋಗೇಶ್ವರ್ ಅವರಿಗೆ ಎರಡು ಬಾರಿ ಸೋಲುಂಡು ಅನ್ಯಾಯ ಆಗಿದೆ. 4 ಬಾರಿ ಆಯ್ಕೆಯಾಗಿ ಸಚಿವರಾಗಿ , ವಿಧಾನ ಪರಿಷತ್ ಸದಸ್ಯರಾಗಿ ಚನ್ನಪಟ್ಟಣ ಅಭಿವೃದ್ಧಿ ಮಾಡಿದ್ದಾರೆ. ಚನ್ನಪಟ್ಟಣ ಅಭಿವೃದ್ಧಿಗೆ ಶ್ರಮಿಸಿದವರಿಗೆ ಕಾಂಗ್ರೆಸ್ ಅವಕಾಶ ನೀಡಿದೆ. ರಾಜಕೀಯದಲ್ಲಿ ಪಕ್ಷ ಬದಲಾವಣೆ ಸಹಜ ಪ್ರಕ್ರಿಯೆ, ಇದಕ್ಕೆ ಯೋಗೇಶ್ವರ್ ದೂರುವುದರಲ್ಲಿ ಅರ್ಥವಿಲ್ಲ, ಭವಿಷ್ಯದಲ್ಲೂ ಯೋಗೇಶ್ವರ್ ಕಾಂಗ್ರೆಸ್ ನಲ್ಲೇ ಉಳಿಯುತ್ತಾರೆ ಎಂದು ಚಲುವರಾಯಸ್ವಾಮಿ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಇದ್ದರು.