ದಾವಣಗೆರೆ: ಜಿಲ್ಲೆಯಲ್ಲಿ ಅತಿ ಹೆಚ್ಚು ಅಡಕೆ ಬೆಳೆ ಪ್ರದೇಶ ಚನ್ನಗಿರಿ ತಾಲೂಕು ಅಡಕೆ ನಾಡು ಎಂದು ಪ್ರಸಿದ್ದಿ ಆಗಿದೆ. ಇಂತಹ ಪ್ರದೇಶಕ್ಕೆ ಕಳಂಕ ಬರುವಂತೆ ಕೇಂದ್ರ ಸರ್ಕಾರ ಮತ್ತು ಈ ಜಿಲ್ಲೆಯ ಲೋಕಸಭಾ ಪ್ರತಿನಿಧಿ ನಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪಿಸಿದರು.
ಕೇಂದ್ರ ಸರ್ಕಾರ ಅಡಕೆಯನ್ನು ಬೇರೆ ರಾಷ್ಟ್ರಗಳಿಂದ ಆಮದು ಮಾಡಿಕೊಂಡಿತು. ಇದಕ್ಕೆ ಸಂಸದರು ಕನಿಷ್ಠ ಪಕ್ಷ ವಿರೋಧಿಸಲಿಲ್ಲ. ಈ ಬಾರಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದ್ದು, ಅಡಕೆಗೆ ಸ್ಥಿರ ಬೆಲೆ, ಅಡಕೆ ಸಂಸ್ಕರಣಾ ಘಟಕ ಆರಂಭ ಸೇರಿದಂತೆ ಅಡಕೆ ಬೆಳೆ-ವ್ಯವಹಾರಕ್ಕೆ ಪೂರಕ ವಾತಾವರಣ ನಿರ್ಮಿಸುತ್ತೇವೆ ಎಂದರು.
ಮಾಜಿ ಶಾಸಕರಾದ ವಡ್ನಾಳ್ ರಾಜಣ್ಣ, ಶಾಸಕ ಶಿವಗಂಗಾ ಬಸವರಾಜ್, ಬ್ಲಾಕ್ ಅಧ್ಯಕ್ಷರಾದ ಜಬಿವುಲ್ಲಾ, ಶ್ರೀನಿವಾಸ್, ಮುಖಂಡರಾದ ಹೊದಿಗೆರೆ ರಮೇಶ್, ವೀರೇಶ್ ನಾಯ್ಕ, ವಡ್ನಾಳ್ ಜಗದೀಶ್, ಶಿವಗಂಗಾ ಶ್ರೀನಿವಾಸ್, ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.- - - -24ಕೆಡಿವಿಜಿ47, 48ಃ:
ಚನ್ನಗಿರಿ ತಾಲೂಕು ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮತಯಾಚನೆ ಮಾಡಿದರು.