ರಾಮನಾಮ ಜಪದಿಂದ ಮನದ ಕ್ಲೇಷ ದೂರ

KannadaprabhaNewsNetwork |  
Published : Feb 08, 2025, 12:35 AM IST
ನರೇಗಲ್ಲ ಶ್ರೀದತ್ತಾತ್ರೇಯ ದೇವಸ್ಥಾನದಲ್ಲಿ ದತ್ತಾವಧೂತ ಮಹಾರಾಜರು ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿದರು. | Kannada Prabha

ಸಾರಾಂಶ

ಒಮ್ಮೆಲೆ ಎಲ್ಲರೂ ಬಂದು ಸೇರಿ ಜಪ ಮಾಡಲು ತುಂಬಾ ಅನಾನುಕೂಲವಾಗುತ್ತದೆ. ಅದಕ್ಕಾಗಿ ಒಂದು ಯೋಜನೆ ತಯಾರಿಸಲಾಗಿದೆ

ನರೇಗಲ್ಲ: ರಾಮನಾಮ ಜಪ ಪಠಿಸುವುದರಿಂದ ಮನದ ಕ್ಲೇಷ ದೂರವಾಗುತ್ತದೆ. ರಾಮನಾಮ ಜಪ ಮಾಡುವುದರಿಂದ ಮೋಕ್ಷ ಮಾರ್ಗವೂ ಸುಲಭವಾಗುತ್ತದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಹೆಬ್ಬಳ್ಳಿಯಲ್ಲಿ 15 ಕೋಟಿ ಶ್ರೀ ರಾಮನಾಮ ಜಪ ಸಂಕಲ್ಪ ಮಾಡಲಾಗಿದೆ ಎಂದು ಶ್ರೀ ದತ್ತಾವಧೂತ ಮಹಾರಾಜರು ಹೇಳಿದರು.

ಸ್ಥಳೀಯ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ನೆರೆದಿದ್ದ ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿದ ಅವರು, ಒಮ್ಮೆಲೆ ಎಲ್ಲರೂ ಬಂದು ಸೇರಿ ಜಪ ಮಾಡಲು ತುಂಬಾ ಅನಾನುಕೂಲವಾಗುತ್ತದೆ. ಅದಕ್ಕಾಗಿ ಒಂದು ಯೋಜನೆ ತಯಾರಿಸಲಾಗಿದೆ. ಅದರ ಪ್ರಕಾರ ನರೇಗಲ್ಲದ ಭಕ್ತರು ತಮ್ಮಲ್ಲಿಯೆ ಹತ್ತು-ಹದಿನೈದು ಜನರ ಒಂದು ಗುಂಪನ್ನು ಮಾಡಿಕೊಳ್ಳಬೇಕು.ಈ ಗುಂಪಿನ ಸದಸ್ಯರು ತಮಗೆ ಅನುಕೂಲವಾದ ದಿನದಂದು ಹೆಬ್ಬಳ್ಳಿಗೆ ಬಂದು ಅಲ್ಲಿ ತಮಗೆ ಅನುಕೂಲವಾದಷ್ಟು ಜಪ ಮಾಡಬಹುದು. ಯಾರೇ ಬಂದರೂ ಕನಿಷ್ಠ ಒಂದು ತಾಸಿನ ಜಪವನ್ನಾದರೂ ಮಾಡಬೇಕು, ಒಂದು ತಾಸಿಗೆ ಮೂರು ಸಾವಿರ ಜಪಗಳಾಗುತ್ತವೆ. ಯಾರು ಸಂಪೂರ್ಣವಾಗಿ ಒಂದು ತಾಸು ಜಪ ಮಾಡುತ್ತಾರೆಯೋ ಅವರ ಲೆಕ್ಕವನ್ನು ಮಾತ್ರ ತೆಗೆದುಕೊಳ್ಳಲಾಗುತ್ತದೆ. ಬೇಕೆನಿಸಿದವರು ಎರಡು ಮೂರು ತಾಸುಗಳ ಜಪ ಮಾಡಬಹುದು ಎಂದು ತಿಳಿಸಿದರು.

ನೀವು ನಿಮ್ಮ ಮನೆಯಲ್ಲಿ ನಿತ್ಯವೂ ಸದ್ಗುರು ಶ್ರೀ ಬ್ರಹ್ಮಾನಂದರು ರಚಿಸಿರುವ ಮೋಕ್ಷಪ್ರಾಪ್ತಿಯ ಗುಟ್ಟನ್ನು ಪಠಿಸಬೇಕು.ಇದರಿಂದ ಶ್ರೀ ಬ್ರಹ್ಮಾನಂದರಿಗೆ ನಿಜವಾಗಿಯೂ ಬ್ರಹ್ಮಾನಂದವಾಗುತ್ತದೆ. ಇದರ ಸಂಖ್ಯೆಯನ್ನೇನೂ ನೀವು ಹೆಬ್ಬಳ್ಳಿಗೆ ಕೊಡುವುದು ಬೇಡ. ಆದರೆ ಮನೆಯಲ್ಲಿನ ಪ್ರತಿಯೊಬ್ಬರೂ ನಿತ್ಯವೂ ಒಂದು ಸಾರಿಯಾದರೂ ಇದನ್ನು ಪಠಿಸಿರಿ ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಅರುಣ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿ, ನರೇಗಲ್ಲ ಭಕ್ತರಿಗೆ ದತ್ತಾವಧೂತ ಮಹಾರಾಜರು ಏನೇ ಅಪ್ಪಣೆ ಕೊಡಿಸಿದರೂ ಅದನ್ನು ಅತ್ಯಂತ ಪ್ರಾಂಜಲ ಮನಸ್ಸಿನಿಂದ ನೆರವೇರಿಸುತ್ತೇವೆ. ಇದಕ್ಕೆ ನಮಗೆ ಶ್ರೀ ದತ್ತಾತ್ರೇಯನ ಆಶೀರ್ವಾದವಿದೆ. ಗುರುಗಳ ಇಂದಿನ ಮಾತುಗಳು ನಮಗಂತೂ ವಿಶೇಷ ಆನಂದವನ್ನುಂಟು ಮಾಡಿವೆ ಎಂದರು.

ಶ್ರೀವಲ್ಲಭಭಟ್ಟ ಸದರಜೋಷಿ, ರಂಗಣ್ಣನವರು ಕುಲಕರ್ಣಿ, ಅಧ್ಯಕ್ಷ ಡಾ. ನಾಗರಾಜ ಗ್ರಾಮಪುರೋಹಿತ, ಎ.ಜಿ. ಕುಲಕರ್ಣಿ, ಆನಂದ ಕುಲಕರ್ಣಿ, ಅರುಣ ಗ್ರಾಮಪುರೋಹಿತ, ಪ್ರಶಾಂತ ಗ್ರಾಮಪುರೋಹಿತ, ಅಜಿತ ಕುಲಕರ್ಣಿ,ರಘುನಾಥ ಕೊಂಡಿ, ಎಸ್.ಎಚ್.ಕುಲಕರ್ಣಿ, ಆದರ್ಶ ಕುಲಕರ್ಣಿ, ಮಂಜುನಾಥ ಕುಲಕರ್ಣಿ, ನ್ಯಾ. ದೇಸಾಯಿ, ಜಗನ್ನಾಥ ಸೂರಭಟ್ಟನವರ ಹಾಗೂ ಸುಮಂಗಲೆಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಮಂತ್ರಿ
ಮುಂಬೈ ಮೇಯರ್‌ ಹುದ್ದೆಗೆ ಶಿಂಧೆ ಲಡಾಯಿ?