ಚಿಕ್ಕಮಗಳೂರು: ರಾಷ್ಟ್ರೀಯ ಬಸವ ಪ್ರತಿಷ್ಠಾನದ ದಶಮಾನೋತ್ಸವ ಸಮಾರಂಭ ಆ.26 ರಂದು ಶ್ರೀಲಂಕಾದ ಕೊಲಂಬೋ ನಗರದಲ್ಲಿ ಆಯೋಜಿಸಿದ್ದು, ಈ ಸಮಾರಂಭದಲ್ಲಿ ಸಾಹಿತಿ ಚಟ್ನಳ್ಳಿ ಮಹೇಶ್ ಪ್ರಧಾನ ಉಪನ್ಯಾಸಕರಾಗಿ ಭಾಗವಹಿಸಲಿದ್ದಾರೆ.
ಆ. 31 ರಿಂದ ಸೆ. 3 ರವರೆಗೆ ಅಮೇರಿಕಾದ ರೀಚಮೆಂಡ್ ನಗರದಲ್ಲಿ ನಡೆಯುವ 12ನೇ ಅಕ್ಕಾ ವಿಶ್ವ ಕನ್ನಡ ಸಮ್ಮೇಳನಕ್ಕೂ ಸಾಹಿತಿ ಚಟ್ನಳ್ಳಿ ಮಹೇಶ್ ರವರನ್ನು ಆಹ್ವಾನಿಸಿದ್ದು, ಅವರು 20 ದಿನಗಳ ಕಾಲ ಅಮೇರಿಕಾ ಪ್ರವಾಸಕ್ಕೆ ತೆರಳಿ ಅಲ್ಲಿನ ವಿವಿಧ ಕಡೆ ಕನ್ನಡ ಸಾಹಿತ್ಯದ ಸತ್ವ ಮತ್ತು ಸಮೃದ್ಧ ತತ್ವದ ಬಗ್ಗೆ ಭಾಷಣ ಮಾಡಲಿದ್ದಾರೆ. ಈ ಎರಡೂ ದೇಶಗಳಿಗೆ ಸಾಂಸ್ಕೃತಿಕ ರಾಯಭಾರಿಯಾಗಿ ತೆರಳುತ್ತಿರುವ ಚಟ್ನಳ್ಳಿ ಮಹೇಶ್ ರವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ, ಅಜ್ಜಂಪುರ ಸೂರಿ ಪ್ರತಿಷ್ಠಾನ, ಜಿಲ್ಲಾ ಜಾನಪದ ಪರಿಷತ್, ವೀರಶೈವ ಮಹಾಸಭಾ, ಹೀಗೆ ಹಲವು ಸಂಘ ಸಂಸ್ಥೆಗಳು ಶುಭ ಕೋರಿವೆ.
ಪೋಟೋ ಫೈಲ್ ನೇಮ್ 19 ಕೆಸಿಕೆಎಂ 2