ಕನ್ನಡಪ್ರಭ ವಾರ್ತೆ ಸಂಡೂರು
ಪಡಿತರವನ್ನು ತೂಗುವಾಗ ಡಬ್ಬಿಯಲ್ಲಿ ಪಡಿತರವನ್ನು ತುಂಬಿ ತೂಕಕ್ಕೆ ಹಾಕಿ ಕೊಡುತ್ತಾರೆ. ತೂಗುವ ಡಬ್ಬಿಯೇ ೮೦೦- ೯೦೦ ಗ್ರಾಂ ತೂಗುತ್ತದೆ. ಇದರಿಂದ ಸಾರ್ವಜನಿಕರಿಗೆ ಮೋಸ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದರು.
ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಸೋಮವಾರ ಆಹಾರ ನೀರಿಕ್ಷಕರಾದ ಪ್ರದೀಪ್ ಅವರು ಸ್ಥಳಕ್ಕೆ ತೆರಳಿ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರಲ್ಲದೆ, ಅಲ್ಲಿಯ ಪರಿಸ್ಥಿತಿಯನ್ನು ಪರಿಶೀಲಿಸಿದರು.ಈ ಕುರಿತು ಕನ್ನಡಪ್ರಭದೊಂದಿಗೆ ಪ್ರತಿಕ್ರಿಯಿಸಿದ ಆಹಾರ ನಿರೀಕ್ಷಕ ಪ್ರದೀಪ್ ಅವರು, ತೂಕದಲ್ಲಿ ಮೋಸ ಮಾಡಲಾಗುತ್ತದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಸೊಸೈಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಪಡಿತರ ವಿತರಿಸುವ ವ್ಯಕ್ತಿ ಸ್ಥಳದಲ್ಲಿ ಇರಲಿಲ್ಲ. ಆಸ್ಪತ್ರೆಗೆ ತೆರಳಿದ್ದನೆಂದು ತಿಳಿದುಬಂದಿದೆ. ವರದಿಯನ್ನು ಮುಂದಿನ ಕ್ರಮಕ್ಕಾಗಿ ನಮ್ಮ ಮೇಲಧಿಕಾರಿಗಳಿಗೆ ತಿಳಿಸಲಾಗುವುದು ಎಂದರು.