ಕನ್ನಡಪ್ರಭ ವಾರ್ತೆ ಹಾಸನ
ನಗರದ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರಣಿ ಹೃದಯಾಘಾತ ಸಾವಿನ ಹಿನ್ನೆಲೆ ಅಸುರಕ್ಷಿತ ಆಹಾರ, ಬೀದಿ ಬದಿ ಆಹಾರಗಳ ಬಗ್ಗೆ ಸರಿಯಾದ ಪರಿಶೀಲನೆ ಆಗಬೇಕು. ಗೋಬಿ ಮಂಚೂರಿಯಲ್ಲಿ ಅತಿ ಹೆಚ್ಚು ಹಾನಿಕಾರಕ ಇರುತ್ತದೆ. ಹೂ ಕೋಸು ಬೆಳೆಯುವಾಗ ಭಾರೀ ಪ್ರಮಾಣದ ಕ್ರಿಮಿನಾಶಕ ಬಳಸುತ್ತಾರೆ. ಇದನ್ನ ಅಡುಗೆ ತಯಾರಿ ಮಾಡುವಾಗ ಸರಿಯಾಗಿ ಬೇಯಿಸೋದಿಲ್ಲ. ಅರ್ಧಂಬರ್ಧ ಬೇಯಿಸಿ ಜನರಿಗೆ ತಿನ್ನಿಸುತ್ತಾರೆ. ಇದನ್ನ ತಿಂದ ಜನರ ಹೊಟ್ಟೆಗೆ ವಿಷ ನೇರವಾಗಿ ಹೋಗುತ್ತದೆ ಎಂದ ಸಚಿವರು, ಜೊತೆಗೆ ನೀರಿನ ಘಟಕಗಳ ಬಗ್ಗೆ ಕೂಡ ಗಮನ ನೀಡಬೇಕಾಗಿದೆ. ಸುರಕ್ಷಿತವಾದ ನೀರು ಕುಡಿಯದೆ ಹೋದರೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಶುದ್ಧ ನೀರು ತಯಾರಿಸೊ ಕೇಂದ್ರಗಳ ಮೇಲೆ ನಿಗಾ ಇಡಿ ಎಂದು ಸಚಿವರು ಆರೋಗ್ಯ ಇಲಾಖೆ ಸುರಕ್ಷತಾ ಅಧಿಕಾರಿಗಳಿಗೆ ಆದೇಶಿಸಿದರು.೨೪ ಸಾವಿರ ಮಕ್ಕಳ ಸ್ಕ್ರೀನಿಂಗ್:
ಜಿಲ್ಲೆಯಲ್ಲಿ ಸರಣಿ ಹೃದಯಾಘಾತ ಸಾವು ಪ್ರಕರಣ ವಿಚಾರವಾಗಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ೪೬ ದಿನಕ್ಕೆ ೨೪ ಜನರ ಸಾವು ಎಂದು ವರದಿ ಆಗಿದೆ. ೨೪ ಜನರಲ್ಲಿ ನಾಲ್ಕು ನಾನ್ ಕಾರ್ಡಿಯಾಕ್ ಸಾವು ಎಂದು ವರದಿ ಇದೆ. ಏಳು ಜನರಲ್ಲಿ ಹೃದಯಾಘಾತ ಸಾವು ಎಂದು ವರದಿ ಇರುವುದಾಗಿ ಕೆಡಿಪಿ ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅನಿಲ್ ಮಾಹಿತಿ ನೀಡಿದರು. ಹೃದಯಾಘಾತ ತಡೆಗೆ ಶಾಲಾ ಮಕ್ಕಳ ಆರೋಗ್ಯ ತಪಾಸಣೆಗೆ ಮುಂದಾಗಿದ್ದು, ೨೪ ಸಾವಿರ ಮಕ್ಕಳನ್ನ ಸ್ಕ್ರೀನಿಂಗ್ ಮಾಡಲಾಗಿದೆ. ಇದರಲ್ಲಿ ೪೦ ಮಕ್ಕಳಿಗೆ ಸಮಸ್ಯೆ ಇರೋ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದನ್ನ ಹೆಚ್ಚಿನ ಪರಿಶೀಲನೆ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.೯ ಸಾವಿರ ರು. ಹಣ ವಸೂಲಿ:
ಸಂಶೋಧನೆ ಮಾಡಿ:
ಇನ್ನು ತೋಟಗಾರಿಕ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ಜಿಲ್ಲೆಯ ಅರಸೀಕೆರೆ ಮತ್ತು ಚನ್ನರಾಯಪಟ್ಟಣದಲ್ಲಿ ಹೆಚ್ಚು ತೆಂಗು ಬೆಳೆಗಾರರು ಇದ್ದು, ಕಾಟಚಾರಕ್ಕೆ ನಮಗೆ ಮಾಹಿತಿ ನೀಡಬೇಡಿ. ಒಂದು ತೆಂಗಿನ ಮರದಲ್ಲಿ ಹತ್ತು ಕಾಯಿ ಸಿಗುತ್ತಿಲ್ಲ. ಹೊಂಬಾಳೆ ಒಳಗೆ ಕಪ್ಪಾಗಿ ಹೋಗುತ್ತಿದೆ. ಇಂತಹ ರೋಗ ಜೀವನದಲ್ಲಿ ಬಂದಿರಲಿಲ್ಲ. ನೀವು ಸುಮ್ಮನೆ ಗೌಪ್ಯವಾಗಿ ಕೂರಬೇಡಿ. ಸಂಶೋಧನೆ ಮಾಡಿ ಈ ರೋಗ ನಿಲ್ಲಿಸಲು ಕ್ರಮಕೈಗೊಳ್ಳಿ ಎಂದು ತೋಟಗಾರಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಭೆಗೆ ಯಾವ ಇಲಾಖೆಯ ಅಧಿಕಾರಿಗಳು ಬಂದಿರುವುದಿಲ್ಲ ಮೊದಲು ಹಾಜರಾತಿ ಹಾಕಿ ಎಂದು ಸಭೆ ಆರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ವಿಧಾನ ಪರಿಷತ್ತು ಸದಸ್ಯ ವಿವೇಕಾನಂದ್, ಶಾಸಕ ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ತು ಮಾಜಿ ಸದಸ್ಯ ಗೋಪಾಲಸ್ವಾಮಿ, ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಎಡಿಸಿ ಕೆ.ಟಿ. ಶಾಂತಲಾ, ಜಿಪಂ ಆಡಳಿತಾಧಿಕಾರಿ ನವೀನ್ ರಾಜಸಿಂಗ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣೀಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಕಾರಿ ಮೊಹಮ್ಮದ್ ಸುಜೀತಾ ಇತರರು ಉಪಸ್ಥಿತರಿದ್ದರು.------------------------------------------------------
* ಬಾಕ್ಸ್ ನ್ಯೂಸ್ಶುದ್ಧ ಕುಡಿಯುವ ನೀರು ಎಂದು ಜನರಿಗೆ ಅಸುರಕ್ಷಿತ ಕ್ಯಾನ್ ನೀರನ್ನು ಕುಡಿಸಲಾಗುತ್ತಿದೆ. ನಗರ ಸೇರಿದಂತೆ ಹಲವೆಡೆಗಳಲ್ಲಿ ಕ್ಯಾನ್ ನೀರಿನದ್ದೇ ದಂಧೆಯಾಗಿದೆ. ಮಾಮೂಲಿ ನೀರನ್ನೇ ತುಂಬಿಕೊಂಡು ಬಂದು ಹೆಚ್ಚಿನ ಹಣಕ್ಕೆ ಮಾರಾಟ ಮಾಡಲಾಗುತ್ತಿದೆ. ಇದು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಹಾಗಾಗಿ ಇಂತಹ ನೀರಿನ ಘಟಕಗಳ ಮೇಲೆ ದಾಳಿ ಮಾಡಿ ಪರಿಶೀಲಿಸುವಂತೆ ಸಚಿವರು ಸೂಚನೆ ನೀಡಿದರು.