ಚಿರತೆ ಮರಿ ದರ್ಶನ: ಆತಂಕದ ವಾತಾವರಣ

KannadaprabhaNewsNetwork |  
Published : Feb 19, 2024, 01:38 AM IST
18ಖಾನಾಪುರ4ಖಾನಾಪುರ ತಾಲೂಕಿನ ಹಲಸಿವಾಡಿ ಗ್ರಾಮದ ಬಳಿ ಕೃಷಿಕರು ಕೃಷಿ ಕಾರ್ಯ ಕೈಗೊಂಡ ಸಂದರ್ಭದಲ್ಲಿ ಚಿರತೆಯೊಂದು ಜನರ ಸಮೀಪದಲ್ಲೇ ಹಾದುಹೋಗುತ್ತಿರುವ ದೃಶ್ಯವನ್ನು ರೈತರೊಬ್ಬರು ತಮ್ಮ ಮೊಬೈಲ್ ನಲ್ಲಿ ಸರೆಹಿಡಿದಿದ್ದಾರೆ.  | Kannada Prabha

ಸಾರಾಂಶ

ತಾಲೂಕಿನ ನಂಜಿನಕೊಡಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲಸಿವಾಡಿ ಗ್ರಾಮದ ಹೊರವಲಯದ ಕೃಷಿ ಜಮೀನಿನಲ್ಲಿ ಭಾನುವಾರ ಚಿರತೆ ಮರಿ ಕಾಣಿಸಿಕೊಂಡಿದೆ. ಈ ದೃಶ್ಯವನ್ನು ರೈತ ಮೊಬೈಲ್‌ನಲ್ಲಿ ಸರೆಹಿಡಿದಿದ್ದಾರೆ.

ಕನ್ನಡಪ್ರಭ ವಾರ್ತೆ ಖಾನಾಪುರ

ತಾಲೂಕಿನ ನಂಜಿನಕೊಡಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲಸಿವಾಡಿ ಗ್ರಾಮದ ಹೊರವಲಯದ ಕೃಷಿ ಜಮೀನಿನಲ್ಲಿ ಭಾನುವಾರ ಚಿರತೆ ಮರಿ ಕಾಣಿಸಿಕೊಂಡಿದೆ. ಈ ದೃಶ್ಯವನ್ನು ರೈತ ಮೊಬೈಲ್‌ನಲ್ಲಿ ಸರೆಹಿಡಿದಿದ್ದಾರೆ.

ಗ್ರಾಮದ ಜಮೀನಿನಲ್ಲಿ ರೈತರು ಕೃಷಿ ಕಾರ್ಯ ಕೈಗೊಂಡಿದ್ದ ವೇಳೆ ಚಿರತೆ ಮರಿ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಆದರೆ, ಭಾನುವಾರ ಸಂಜೆವರೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದತ್ತ ಸುಳಿಯಲಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜನವಸತಿ ಪ್ರದೇಶದ ಬಳಿ ಚಿರತೆ ಕಾಣಿಸಿಕೊಂಡ ಕಾರಣ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಚಿರತೆಯಿಂದ ಗ್ರಾಮದ ಜನರಿಗೆ ಅಥವಾ ಜಾನುವಾರುಗಳಿಗೆ ಯಾವುದೇ ಅನಾಹುತಗಳು ಸಂಭವಿಸುವ ಮೊದಲು ಅದನ್ನು ಸೆರೆ ಹಿಡಿದು ಮರಳಿ ಅರಣ್ಯಕ್ಕೆ ಅಟ್ಟುವ ಕೆಲಸ ಮಾಡಬೇಕು ಎಂದು ಹಲಸಿವಾಡಿ ಗ್ರಾಮದ ನಾಗರಿಕರು ಆಗ್ರಹಿಸಿದ್ದಾರೆ.

ಚಿರತೆ ಕಾಣಿಸಿಕೊಂಡ ಹಲಸಿವಾಡಿ ಗ್ರಾಮದ ಬಳಿ ಸೋಮವಾರ ತೆರಳಿ ಪರಿಶೀಲಿಸಲಾಗುತ್ತದೆ. ಬಹುಶಃ ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬಂದಿರಬಹುದು. ಮರಿ ಚಿರತೆ ಎಂದು ಹೇಳಲಾಗುತ್ತಿದ್ದು, ತನ್ನ ಪಾಲಕರಿಂದ ತಪ್ಪಿಸಿಕೊಂಡು ಇತ್ತ ಬಂದಿರುವ ಸಾಧ್ಯತೆಗಳೂ ಇವೆ. ಈ ಘಟನೆ ಕುರಿತು ಪರಿಶೀಲಿಸುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಬಿಎ ಬಜೆಟ್‌ಗೆ ರಾಜ್ಯ, ಕೇಂದ್ರ ಸರ್ಕಾರದಿಂದ ₹4196 ಕೋಟಿ ನೀರಿಕ್ಷೆ
ಕಾದಂಬರಿಗಳು ಕನ್ನಡ ಸಾಹಿತ್ಯ ಲೋಕದ ವಿಶೇಷ ಕೊಡುಗೆ