ಹಕ್ಕಿಜ್ವರ: ಚಿಕ್ಕಬಳ್ಳಾಪುರದಲ್ಲಿ ಸಾಮೂಹಿಕ ಕೋಳಿ ಹತ್ಯೆ

KannadaprabhaNewsNetwork |  
Published : Mar 02, 2025, 01:15 AM IST
ಕೋಳಿ | Kannada Prabha

ಸಾರಾಂಶ

ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿಯಲ್ಲಿ ಕಾಣಿಸಿಕೊಂಡಿರುವ ಹಕ್ಕಿಜ್ವರ ನಿಯಂತ್ರಣಕ್ಕೆ ಮುಂದಾಗಿರುವ ಜಿಲ್ಲಾಡಳಿತ, ಮುಂಜಾಗ್ರತಾ ಕ್ರಮವಾಗಿ ವರದಹಳ್ಳಿ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಎಚ್5 ಎನ್1 ವೈರಸ್ ಸೋಂಕು ಶಂಕಿತ 442 ನಾಟಿ ಕೋಳಿಗಳನ್ನು ನಾಶಪಡಿಸಿ ವಿಲೇವಾರಿ ಮಾಡಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿಯಲ್ಲಿ ಕಾಣಿಸಿಕೊಂಡಿರುವ ಹಕ್ಕಿಜ್ವರ ನಿಯಂತ್ರಣಕ್ಕೆ ಮುಂದಾಗಿರುವ ಜಿಲ್ಲಾಡಳಿತ, ಮುಂಜಾಗ್ರತಾ ಕ್ರಮವಾಗಿ ವರದಹಳ್ಳಿ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಎಚ್5 ಎನ್1 ವೈರಸ್ ಸೋಂಕು ಶಂಕಿತ 442 ನಾಟಿ ಕೋಳಿಗಳನ್ನು ನಾಶಪಡಿಸಿ ವಿಲೇವಾರಿ ಮಾಡಿದೆ.

ಗ್ರಾಮದ ಸುತ್ತಮುತ್ತಲ 10 ಕಿ.ಮೀ. ವ್ಯಾಪ್ತಿಯಲ್ಲಿ ಕೋಳಿ ಸಾಕಾಣಿಕೆ ಮೇಲೆ ನಿರ್ಬಂಧ ಹೇರಲಾಗಿದೆ. ಹೊರಗಡೆಯಿಂದ ವರದಹಳ್ಳಿ ಸುತ್ತಮುತ್ತಲಿನ ಗ್ರಾಮಗಳಿಗೆ ಕೋಳಿಗಳನ್ನು ತರದಂತೆ ನಾಕಾಬಂಧಿ ಹಾಕಲಾಗಿದೆ. ರೋಗ ನಿಯಂತ್ರಣದ ಮುಂಜಾಗ್ರತಾ ಕ್ರಮದ ಭಾಗವಾಗಿ ಸರ್ಕಾರದ ಮಾರ್ಗಸೂಚಿಯಂತೆ ಕೋಳಿಗಳ ಸಾಮೂಹಿಕ ಹತ್ಯೆ ನಡೆಸಲಾಗಿದೆ. ಇದುವರೆಗೆ ಗ್ರಾಮದ ಜನರಲ್ಲಿ ಯಾವುದೇ ಕೆಮ್ಮು, ಶೀತ, ನೆಗಡಿ, ಜ್ವರದಂತಹ ಪ್ರಕರಣಗಳು ಕಂಡು ಬಂದಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.ಬಳ್ಳಾರಿಯಲ್ಲಿ 8000 ಕೋಳಿ ಸಾವು:ಈ ಮಧ್ಯೆ, ಬಳ್ಳಾರಿ ಜಿಲ್ಲೆ ಕುರೆಕುಪ್ಪ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿ ಹಕ್ಕಿಜ್ವರಕ್ಕೆ 2 ಸಾವಿರ ಕೋಳಿಗಳು ಮೃತಪಟ್ಟ ಹಿನ್ನೆಲೆಯಲ್ಲಿ, ಕೋಳಿ ಫಾರಂನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದರ ಬೆನ್ನಲ್ಲೇ ಇದೀಗ ಬಳ್ಳಾರಿ ತಾಲೂಕು ಕಪ್ಪಗಲ್ಲು ಗ್ರಾಮದಲ್ಲಿನ ಖಾಸಗಿ ಫಾರ್ಮ್‌ನಲ್ಲಿ ಕಳೆದ ಮೂರು ದಿನಗಳಲ್ಲಿ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಮೇಲ್ನೋಟಕ್ಕೆ ಹಕ್ಕಿಜ್ವರ ಎಂಬ ಅನುಮಾನ ವ್ಯಕ್ತವಾಗಿದ್ದು, ವೈಜ್ಞಾನಿಕ ಪದ್ಧತಿಯಲ್ಲಿ ಗುಂಡಿ ಅಗೆದು ಸತ್ತ ಕೋಳಿಗಳನ್ನು ಹಾಕಿ ಮುಚ್ಚಲಾಗಿದೆ.

ಹಕ್ಕಿಗಳ ಕಳೆಬರದ ಮಾದರಿಗಳನ್ನು ಮಧ್ಯಪ್ರದೇಶದ ಭೋಪಾಲ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಸೆಕ್ಯುರಿಟಿ ಅನಿಮಲ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಹನುಮಂತಪ್ಪ ನಾಯಕ್ ಕಾರ್‌ಬಾರಿ ತಿಳಿಸಿದ್ದಾರೆ.

ಮಾನ್ವಿ: ಸತ್ತ ಹಕ್ಕಿಗಳಲ್ಲಿ ಪತ್ತೆಯಾಗದ ಹಕ್ಕಿ ಜ್ವರ:ರಾಯಚೂರು: ಮಾನ್ವಿ ತಾಲೂಕಿನಲ್ಲಿ ಹಕ್ಕಿಗಳ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದ ಸತ್ತ ಹಕ್ಕಿಗಳ ಕಳೇಬರದ ವರದಿ ಬಂದಿದ್ದು, ಅದರಲ್ಲಿ ಹಕ್ಕಿಜ್ವರದ ಅಂಶ ನೆಗೆಟಿವ್‌ ಎಂದು ಬಂದಿದೆ. ಇದರಿಂದಾಗಿ ಜಿಲ್ಲಾಡಳಿತ, ಜನ ಕೊಂಚ ನಿರಾಳರಾಗಿದ್ದಾರೆ. ಜಿಲ್ಲೆಯ ಮಾನ್ವಿ, ರಬ್ಬಳಕಲ್‌ ಸೇರಿ ಇತರ ಪ್ರದೇಶಗಳಲ್ಲಿ ಬೆಳ್ಳಕ್ಕಿ, ರತ್ನಪಕ್ಷಿ, ಕಾಗೆ ಸೇರಿ ವಿವಿಧ ಪ್ರಭೇದದ ಸುಮಾರು 30ಕ್ಕೂ ಹೆಚ್ಚು ಪಕ್ಷಿಗಳು ಸಾವನಪ್ಪಿದ್ದವು. ಇದು ಜನರಲ್ಲಿ ಆತಂಕ ಹುಟ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಪಶು ವೈದ್ಯಕೀಯ ಇಲಾಖೆಯ ಅಧಿಕಾರಿಗಳು ಪಕ್ಷಿಗಳ ಕಳೆಬರವನ್ನು ಬೆಂಗಳೂರಿನ ಐಎಎಚ್ ವಿಬಿ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ