ಹಾನಗಲ್ಲ: ₹650 ಕೋಟಿಗೂ ಅಧಿಕ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಹಲವು ಸಚಿವರು ಮೇ 4ರಂದು ತಾಲೂಕಿನ ಅಕ್ಕಿಆಲೂರಿಗೆ ಬೆಳಗ್ಗೆ 11 ಗಂಟೆಗೆ ಆಗಮಿಸುತ್ತಿರುವ ಹಿನ್ನೆಲೆ ಭರದ ಸಿದ್ಧತೆ ಕೈಗೊಳ್ಳಲಾಗಿದೆ.ಇಲ್ಲಿನ ಎಪಿಎಂಸಿ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣಗೊಂಡಿದೆ. 10 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ. ಎಪಿಎಂಸಿ ಆವರಣದ ಎದುರಿನ ಕೃಷಿಭೂಮಿಯಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಎನ್ಡಿಪಿಯು ಕಾಲೇಜಿನ ಮೈದಾನದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಬೆಂಗಳೂರಿನ ಎಚ್ಎಎಲ್ನಿಂದ ಹುಬ್ಬಳ್ಳಿಗೆ ವಿಶೇಷ ವಿಮಾನದ ಮೂಲಕ ಆಗಮಿಸಿ, ಬಳಿಕ ಹೆಲಿಕ್ಯಾಪ್ಟರ್ ಮೂಲಕ ನೇರವಾಗಿ ಅಕ್ಕಿಆಲೂರಿಗೆ ಆಗಮಿಸಲಿದ್ದಾರೆ. ಎಲ್ಲೆಡೆ ಫ್ಲೆಕ್ಸ್, ಬಂಟಿಂಗ್ಸ್: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರ ಆಗಮನದ ಹಿನ್ನೆಲೆಯಲ್ಲಿ ಹಾನಗಲ್ಲ ಮತ್ತು ಅಕ್ಕಿಆಲೂರಿನಾದ್ಯಂತ ಪ್ರಮುಖ ರಸ್ತೆ, ವೃತ್ತ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಬಂಟಿಂಗ್ಸ್ ಅಳವಡಿಸಲಾಗಿದೆ. ಅಲ್ಲಲ್ಲಿ ಆಳೆತ್ತರದ ಕಟೌಟ್ ಹಾಕಲಾಗಿದೆ. ಎಲ್ಲೆಡೆ ಸಡಗರ, ಸಂಭ್ರಮ ಮನೆ ಮಾಡಿದೆ.ಎಸ್ಸೆಸ್ಸೆಲ್ಸಿ: ಶಿಗ್ಗಾಂವಿ ತಾಲೂಕಿಗೆ 5ನೇ ಸ್ಥಾನ
ದ್ವಿತೀಯ ಸ್ಥಾನವನ್ನು ಹಿರೇಮಣಕಟ್ಟಿ ಸರ್ಕಾರಿ ಪ್ರೌಢಶಾಲೆಯ ನವೀನ ಗಂಗಪ್ಪ ಅಳಗವಾಡಿ ೬೧೩(ಶೇ. ೯೮.೦೮) ಪಡೆದಿದ್ದಾರೆ. ಗಂಜಿಗಟ್ಟಿಯ ಎಂಡಿಆರ್ಎಸ್ನ ಭಾಗ್ಯಾ ಗದಿಗೆಪ್ಪ ಸೋಮಣ್ಣವರ ೬೧೩(ಶೇ. ೯೮.೦೮) ಪಡೆದಿದ್ದಾರೆ.ತೃತಿಯ ಸ್ಥಾನವನ್ನು ಶಿಗ್ಗಾಂವಿಯ ಚೆನ್ನಪ್ಪ ಕುನ್ನೂರ ಪ್ರೌಢಶಾಲೆಯ ಸಿಂಧು ಮಂಜಪ್ಪ ಮಹರಾಜಪೇಟ ೬೧೨(ಶೇ ೯೭.೯೨) ಹಾಗೂ ಬನ್ನೂರ ಸರ್ಕಾರಿ ಪ್ರೌಢಶಾಲೆಯ ಗಾಯತ್ರಿ ಪೊಲೀಸಗೌಡ್ರ ೬೧೨(ಶೇ. ೯೭.೯೨) ಹೊಸೂರ ಸರ್ಕಾರಿ ಪ್ರೌಢಶಾಲೆಯ ನಾಗರತ್ನಾ ಇಂದೂರ ೬೧೨(ಶೇ. ೯೭.೯೨) ಅಂಕ ಪಡೆದಿದ್ದಾರೆ.