ತವರು ಜಿಲ್ಲೆಯ ಮೇಲೆ ಸಿದ್ದರಾಮಯ್ಯ ಮಮಕಾರ: ಮೈಸೂರಿಗೆ ಬಜೆಟ್ ನಲ್ಲಿ ಭರಪೂರ ಕೊಡುಗೆ

KannadaprabhaNewsNetwork |  
Published : Feb 17, 2024, 01:19 AM IST
36 | Kannada Prabha

ಸಾರಾಂಶ

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ ನಿರ್ಮಾಣಕ್ಕೆ 54 ಕೋಟಿ ರು, ಮಹಾರಾಣಿ ಕಲಾ ಮತ್ತು ವಾಣಿಜ್ಯ ಹಾಸ್ಟೆಲ್ ಕಟ್ಟಡಕ್ಕೆ ನಿರ್ಮಾಮಕ್ಕೆ116 ಕೋಟಿ ರು. ನೀಡಿದ್ದಾರೆ. ಮೈಸೂರಿನಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ ನಿರ್ಮಾಣ, ಮೈಸೂರಿನ 40 ಹಾಸಿಗೆ ಸಾಮರ್ಥ್ಯದ ನೆಪ್ರೋ ಯುರಾಜಲಿ ಆಸ್ಪತ್ರೆ 100 ಹಾಸಿಗೆಗಳ ಸಾಮರ್ಥ್ಯಕ್ಕೆ ಉನ್ನತೀಕರಣ, ಮೈಸೂರು ವೈದ್ಯಕೀಯ ಕಾಲೇಜಿನ ಶತಮಾನೋತ್ಸವ ಅಂಗವಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರು. ವೆಚ್ಚದಲ್ಲಿ ಹೊರ ರೋಗಿಗಳ ಕಟ್ಟಡ ನಿರ್ಮಿಸಲಾಗುವುದು.

ಪ್ರಮುಖ ಅಂಶಗಳು

- ಲ್ಯಾನ್ಸಡೌನ್ ಕಟ್ಟಡ, ದೇವರಾಜ ಮಾರುಕಟ್ಟೆ ಕಟ್ಟಡ ಪಾರಂಪಾರಿಕ ಶೈಲಿಯಲ್ಲಿ ಅಭಿವೃದ್ಧಿ

- ವರುಣದಲ್ಲಿ ಜಿಟಿಟಿಸಿ, ನಾಲೆಗಳ ಅಭಿವೃದ್ಧಿ

-ಕೆಸ್ತೂರು ಕೊಪ್ಪಲು, ದೇವನೂರು ಏತ ನೀರಾರಿ, ಮರದೂರು ಕೆರೆ ತುಂಬಿಸುವ ಯೋಜನೆ

- ಮಹಾರಾಣಿ ಕಾಲೇಜು ಕಟ್ಟಡ, ಹಾಸ್ಟೆಲ್ ನಿರ್ಮಾಣಕ್ಕೆ ನೆರವು

- ಆಧುನಿಕ ಕ್ರಿಟಿಕಲ್ಲ್‌ ಕೇರ್ ಬ್ಲಾಕ್ ನಿರ್ಮಾಣ. ನೆಫ್ರೋ ಯುರಾಜಲಿ ಹಾಸಿಗೆ ಸಾಮರ್ಥ್ಯ ಹೆಚ್ಚಳ

- ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರು. ವೆಚ್ಚದ ಒಪಿಡಿ ನಿರ್ಮಾಣ

--------

ಅಂಶಿ ಪ್ರಸನ್ನಕುಮಾರ್

ಕನ್ನಡಪ್ರಭ ವಾರ್ತೆ ಮೈಸೂರು

ದಾಖಲೆಯ 15ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನ ಮೇಲೆ ಮಮಕಾರ ತೋರಿಸಿದ್ದು, ಹಲವಾರು ಕೊಡುಗೆಗಳನ್ನು ಪ್ರಕಟಿಸಿದ್ದಾರೆ.

ಸ್ವಕ್ಷೇತ್ರ ವರುಣದಲ್ಲಿ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರ- ಜಿಟಿಟಿಸಿ ಆರಂಭಿಸುವುದಾಗಿ ಹೇಳಿದ್ದಾರೆ. ಮಾರುಕಟ್ಟೆಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್ ಜಿ ಘಟಕ ಸ್ಥಾಪಿಸಲಾಗುವುದು ಎಂದಿದ್ದಾರೆ.

ಹುಣಸೂರು ತಾ. ಮರದೂರು ಕೆರೆ ತುಂಬಿಸುವ ಯೋಜನೆ, ವರುಣ ವಿಧಾನಸಭಾ ಕ್ಷೇತ್ರದ ನಾಲೆಗಳ ಅಭಿವೃದ್ಧಿ ಕೆ.ಆರ್. ನಗರ ತಾಲೂಕು ಕೆಸ್ತೂರು ಕೊಪ್ಪಲು, ನಂಜನಗೂಡು ತಾಲೂಕು ದೇವನೂರು ಏತ ನೀರಾವರಿ ಯೋಜನೆ, ಟಿ. ನರಸೀಪುರ ತಾ. ಮಾಧವಮಂತ್ರಿ ನಾಲಾ ಆಧುನೀಕರಣ ಘೋಷಿಸಿದ್ದಾರೆ.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ ನಿರ್ಮಾಣಕ್ಕೆ 54 ಕೋಟಿ ರು, ಮಹಾರಾಣಿ ಕಲಾ ಮತ್ತು ವಾಣಿಜ್ಯ ಹಾಸ್ಟೆಲ್ ಕಟ್ಟಡಕ್ಕೆ ನಿರ್ಮಾಮಕ್ಕೆ116 ಕೋಟಿ ರು. ನೀಡಿದ್ದಾರೆ.

ಮೈಸೂರಿನಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ ನಿರ್ಮಾಣ, ಮೈಸೂರಿನ 40 ಹಾಸಿಗೆ ಸಾಮರ್ಥ್ಯದ ನೆಪ್ರೋ ಯುರಾಜಲಿ ಆಸ್ಪತ್ರೆ 100 ಹಾಸಿಗೆಗಳ ಸಾಮರ್ಥ್ಯಕ್ಕೆ ಉನ್ನತೀಕರಣ, ಮೈಸೂರು ವೈದ್ಯಕೀಯ ಕಾಲೇಜಿನ ಶತಮಾನೋತ್ಸವ ಅಂಗವಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರು. ವೆಚ್ಚದಲ್ಲಿ ಹೊರ ರೋಗಿಗಳ ಕಟ್ಟಡ ನಿರ್ಮಿಸಲಾಗುವುದು.

ಮೈಸೂರಿನಲ್ಲಿ ಇಂಟಿಗ್ರೆಟೆಡ್ ಟೌನ್ ಶಿಪ್ ಅಭಿವೃದ್ಧಿ, ಪೆರಿಪೆರಲ್ ವರ್ತುಲ ರಸ್ತೆ ಪಿಪಿಪಿ ಅಥವಾ ಟೌನ್ ಪ್ಲಾನಿಂಗ್ ಮಾದರಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರಿ. ಲ್ಯಾನ್ಸ್ ಡೌನ್ ಕಟ್ಟಡ, ದೇವರಾಜ ಮಾರುಕಟ್ಟೆ ಕಟ್ಟಡವನ್ನು ಪಾರಂಪರಿಕ ಶೈಲಿಯಲ್ಲಿ ಅಭಿವೃದ್ಧಿ, ಮೈಸೂರು ಹೊರವಲಯದ ಜಂಕ್ಷನ್ ನಲ್ಲಿ ಮೇಲುಸೇತುವೆ ನಿರ್ಮಾಣ. ಕುಕ್ಕರಹಳ್ಲಿ ಬಳಿ, ಕೆಆರ್ಎಸ್ ರಸ್ತೆಯಲ್ಲಿ ರೈಲ್ವೆ ಮೇಲು, ಕೆಳ ಸೇತುವೆ ನಿರ್ಮಾಣ, ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಗೆ ಈಗಾಗಲೇ 126 ಕೋಟಿ ರು. ನೀಡಿದ್ದು, ಬಾಕಿ 43 ಕೋಟಿ ರು. ನೀಡಿ, ಕಾಮಗಾರಿ ಪ್ರಾರಂಭಿಸಲಾಗುವುದು.

-ಮೈಸೂರು ವಿಭಾಗದಲ್ಲಿ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್, - ಬದನವಾಳಿಲ್ಲಿ ಖಾದಿ ಚಟುವಟಿಕೆಗೆ ಪ್ಕೋತ್ಸಾಹ

ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದಲ್ಲಿ ತಾರಾಲಯ ಸ್ಥಾಪಿಸಲಾಗುವುದು, ಹುಣಸೂರಿನಲ್ಲಿ ಸ್ವಯಂಚಾಲಿತಾ ಚಾಲನಾ ಪರೀಕ್ಷಾ ಪಥ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಹ್ಯುಮನ್ ಮಿಲ್ಕ್ ಬ್ಯಾಂಕ್ ಘಟಕ ಸ್ಥಾಪಿಸಲಾಗುವುದು. ಪರಿಸರ ಪ್ರವಾಸೋದ್ಯಮವನ್ನು ಬಂಡೀಪುರ ಮತ್ತು ಕಬಿನಿಯಲ್ಲಿ 25 ಕೋಟಿ ರು. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್‌ ಸೆಂಟರ್‌ಗಳನ್ನು ಅರಣ್ಯ ವಸತಿ ಮತ್ತು ವಿಹಾರಧಾಮ ಸಂಸ್ಥೆಯ ಮೂಲಕ ನಿರ್ಮಿಸಲಾಗುವುದು ಎಂದು ಘೋಷಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!