ಮುಖ್ಯಮಂತ್ರಿಗಳಿಂದ ಇಂದು ಕೃಷಿ ಮೇಳ ಉದ್ಘಾಟನೆ

KannadaprabhaNewsNetwork |  
Published : Dec 05, 2025, 12:30 AM IST
4ಕೆಎಂಎನ್ ಡಿ27 | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷಿ ಮೇಳ ಉದ್ಘಾಟನೆಗೆ ಡಿ.5ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಮಲ್ಲನಾಯಕ ಕಟ್ಟೆ ಹೆಲಿಪ್ಯಾಡ್‌ನಿಂದ ವಿ.ಸಿ.ಫಾರ್ಮ್ ಆಗಮಿಸಲಿದ್ದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷಿ ಮೇಳ ಉದ್ಘಾಟನೆಗೆ ಡಿ.5ರಂದು ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಮಲ್ಲನಾಯಕ ಕಟ್ಟೆ ಹೆಲಿಪ್ಯಾಡ್‌ನಿಂದ ವಿ.ಸಿ.ಫಾರ್ಮ್ ಆಗಮಿಸಲಿದ್ದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿದರು.

ತಾಲೂಕಿನ ವಿ‌.ಸಿ.ಫಾರ್ಮ್ ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಕೃಷಿ ಮೇಳ ನಡೆಯಲಿರುವ ಸ್ಥಳ ಪರಿಶೀಲಿಸಿ ನಂತರ ಕೃಷಿ ವಿವಿಯಲ್ಲಿ ಬೆಳೆಸಲಾಗಿರುವ ಕೃಷಿ ಪ್ರಾತ್ಯಕ್ಷಿಕೆಗಳನ್ನು ಪರಿ ವೀಕ್ಷಣೆ ಮಾಡಿದರು.

ಕೃಷಿ ಮೇಳದ ಮಳಿಗೆಗಳು, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಆಹಾರ ವ್ಯವಸ್ಥೆ, ವೇದಿಕೆಯ ವ್ಯವಸ್ಥೆ ಮುಂತಾದವುಗಳ ಕುರಿತು ಮಾಹಿತಿ ಪಡೆದರು. ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿಗಳಾದ ತಿಮ್ಮಯ್ಯ, ಗಂಗಾಧರ ಮತ್ತು ತಹಸೀಲ್ದಾರ್ ವಿಶ್ವನಾಥ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಬಿಜಿ ನಗರಿಂದ ಕೊಪ್ಪವರೆಗೆ ಸಾರಿಗೆ ಬಸ್ ಸಂಚಾರಕ್ಕೆ ಸಚಿವರಿಂದ ಚಾಲನೆ

ಮದ್ದೂರು:

ತಾಲೂಕಿನ ಕೊಪ್ಪದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದ ನಂತರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಬಿಜಿ ನಗರದಿಂದ ಕೊಪ್ಪವರೆಗೆ ಸಾರಿಗೆ ಬಸ್ ಸಂಚಾರಕ್ಕೆ ಚಾಲನೆ ನೀಡಿದರು.

ಪ್ರತಿ ಸಂಜೆ 4:30ಕ್ಕೆ ಬಿಜಿ ನಗರ ಬಿಟ್ಟು ನಾಗಮಂಗಲ, ದೇವಲಾಪುರ ಕೌಡ್ಲೆ ಮಾರ್ಗವಾಗಿ ಕೊಪ್ಪ ಭಾಗದ ಪ್ರಯಾಣಿಕರಿಗೆ ಹಾಗೂ ಬಿಜಿ ನಗರದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಹಾಗೂ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಸಾರಿಗೆ ಸೇವೆ ಆರಂಭಿಸಲಾಯಿತು.

ಈ ವೇಳೆ ಶಾಸಕ ದಿನೇಶ್ ಗೂಳಿಗೌಡ, ಡೀಸಿ ಡಾ.ಕುಮಾರ್, ಜಿಪಂ ಸಿಇಒ ಕೆ.ಆರ್.ನಂದಿನಿ, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಜೋಗಿಗೌಡ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಾಣಾಧಿಕಾರಿ ಶರಣಬಸವರಾಜ ಉಪಸಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಡಿತ ಬಿಟ್ಟು ನವ ಜೀವನಕ್ಕೆ ಕಾಲಿಟ್ಟ ಸಮೂಹ; ಹೆಗ್ಗಡೆಯವರ ಸಂಕಲ್ಪ ಸಾರ್ಥಕ
ಮಕ್ಕಳಲ್ಲಿ ಪತ್ರಿಕೆಗಳು, ಸಾಹಿತ್ಯ ಪುಸ್ತಕ ಓದುವ ಹವ್ಯಾಸ ಬೆಳೆಸಿ: ಟಿ.ಸತೀಶ್ ಜವರೇಗೌಡ