ದೇವಾಲಯಕ್ಕೆ ಧಗ್ರಾಯೋದಿಂದ ಒಂದು ಲಕ್ಷ ರು. ವಿತರಣೆ

KannadaprabhaNewsNetwork |  
Published : Aug 03, 2024, 12:33 AM IST
67 | Kannada Prabha

ಸಾರಾಂಶ

ತಮಗೆಲ್ಲರಿಗೂ ತಿಳಿದಿರುವಂತೆ ಶ್ರೀ ಕ್ಷೇತ್ರಕ್ಕೆ ಸುಮಾರು 800 ವರ್ಷಗಳ ಇತಿಹಾಸವಿದ್ದು,

ಕನ್ನಡಪ್ರಭ ವಾರ್ತೆ ಮೂಗೂರು

ಟಿ. ನರಸೀಪುರ ವಲಯದ ಬೆನಕನಹಳ್ಳಿ ಕಾರ್ಯ ಕ್ಷೇತ್ರದ ಚಿಕ್ಕಭುಹಳ್ಳಿ ಗ್ರಾಮದ ಗ್ರಾಮ ದೇವತೆ ಶ್ರೀ ಮಾರಮ್ಮ ದೇವಿ ದೇವಾಲಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನಿಂದ ಗ್ರಾಮಸ್ಥರು ಹಾಗೂ ಸಮಿತಿಯವರ ಬೇಡಿಕೆಯಂತೆ ವರಪ್ರಸಾದ ರೂಪದಲ್ಲಿ ಒಂದು ಲಕ್ಷ ರು. ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ವಿತರಿಸಿದರು.

ನಂತರ ಮಾತನಾಡಿದ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಮಾತನಾಡಿ, ತಮಗೆಲ್ಲರಿಗೂ ತಿಳಿದಿರುವಂತೆ ಶ್ರೀ ಕ್ಷೇತ್ರಕ್ಕೆ ಸುಮಾರು 800 ವರ್ಷಗಳ ಇತಿಹಾಸವಿದ್ದು, ಅಂದಿನಿಂದ ಇಂದಿನವರೆಗೂ ಚತುರ್ವಿಧ ದಾನಗಳಾದ, ಅನ್ನದಾನ, ಅಭಯದಾನ, ಔಷಧ ದಾನ, ಅಕ್ಷರ ದಾನ, ನಡೆಸಿಕೊಂಡು ಬರುತ್ತಿದ್ದು, ಕಳೆದ ನಾಲ್ಕು ದಶಕಗಳಿಂದ, ಗ್ರಾಮ ಅಭಿವೃದ್ಧಿಗೆ ಬೇಕಾದಂತಹ, ಸಮಾಜಮುಖಿ ಕಾರ್ಯಕ್ರಮಗಳು ಹಾಗೂ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು, ಜನ ಮಂಗಳ ಕಾರ್ಯಕ್ರಮ, ಸುಜ್ಞಾನ ನಿಧಿ ಕಾರ್ಯಕ್ರಮ ಹಾಗೂ ಇನ್ನೂ ಅನೇಕ ರೀತಿಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎನ್. ಪ್ರಭುಸ್ವಾಮಿ, ದೇವಾಲಯದ ಸಮಿತಿ ಅಧ್ಯಕ್ಷ ಶಿವಸ್ವಾಮಿ. ವಲಯ ಮೇಲ್ವಿಚಾರಕರು ದೇವರಾಜು. ಸೇವಾ ಪ್ರತಿನಿಧಿ ಪ್ರಕಾಶ್ ಹಾಗೂ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ