ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಯಾವುದೆ ಅಹಿತಕರ ಘಟನೆಗಳು ಜರುಗದಂತೆ ಬೆಟ್ಟದಲ್ಲಿ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಗ್ನಿ ಶಾಮಕದಳ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ದೇವಿರಮ್ಮ ದೀಪೋತ್ಸವದಲ್ಲಿ ಬಂದೋಬಸ್ತ್ಗಾಗಿ ಸುಮಾರು 800 ಮಂದಿ ಪೊಲೀಸರನ್ನು ನಿಯೋಜಿಸಲಾಗಿತ್ತು.
10 ಮಂದಿ ಅಸ್ವಸ್ಥ:ದೇವಿರಮ್ಮ ಬೆಟ್ಟದಲ್ಲಿರುವ ಬಿಂಡಿಗ ದೇವಿರಮ್ಮ ದರ್ಶನಕ್ಕೆ ಭಕ್ತರು ಬೆಟ್ಟ ಏರುವ ಸಂದರ್ಭದಲ್ಲಿ ಸುಮಾರು 10 ಮಂದಿ ಅಸ್ವಸ್ಥಗೊಂಡಿದ್ದಾರೆ. ದಕ್ಷಿಣ ಕನ್ನಡ ಮೂಲದ ಜಯಮ್ಮ (55) ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ಪೊಲೀಸರು ಹಗ್ಗದ ಮೂಲಕ ರಕ್ಷಣೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕೊಂಡಯ್ಯಲಾಗಿದೆ. ಇತರೆ 9 ಮಂದಿಗೆ ಮಲ್ಲೇನಹಳ್ಳಿಯಲ್ಲಿ ತಾತ್ಕಾಲಿಕವಾಗಿ ತೆರೆಯಲಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಸಿ.ಟಿ ರವಿಯಿಂದ ದೇವಿರಮ್ಮನ ದರ್ಶನ: ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರತಿ ವರ್ಷದಂತೆ ಈ ಬಾರಿಯೂ ಬೆಟ್ಟ ಗುರುವಾರ ಬೆಟ್ಟ ಏರಿ ದೇವಿರಮ್ಮನ ದರ್ಶನ ಪಡೆದರು. ಕಳೆದ 28 ವರ್ಷಗಳಿಂದ ಸಿ.ಟಿ ರವಿ ಅವರು ಬೆಟ್ಟವನ್ನು ಏರುತ್ತಿದ್ದಾರೆ.