ಮದ್ದೂರು ಗಣೇಶ ಗಲಾಟೆಗೆ ಪೂರ್ಣ ಮುಸ್ಲಿಮರೇ ಕಾರಣ: ಸಚಿವ ಚಲುವ

Published : Sep 11, 2025, 01:06 PM IST
n chaluvarayaswamy

ಸಾರಾಂಶ

ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ಗಲಾಟೆ ಪೂರ್ಣ ಪ್ರಮಾಣದಲ್ಲಿ ಮುಸ್ಲಿಂ ಕಡೆಯಿಂದಲೇ ಆಗಿದ್ದು, ಗಲಭೆಗೆ ಕಾರಣರಾದವರನ್ನು ಬಂಧಿಸಲಾಗಿದೆ.

 ಚಿಕ್ಕಮಗಳೂರು :  ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ಗಲಾಟೆ ಪೂರ್ಣ ಪ್ರಮಾಣದಲ್ಲಿ ಮುಸ್ಲಿಂ ಕಡೆಯಿಂದಲೇ ಆಗಿದ್ದು, ಗಲಭೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ಹಿಂದೂಗಳ ಮೇಲೆ ಎಫ್‌ಐಆರ್‌ ಹಾಕಿಲ್ಲ ಯಾರನ್ನೂ ಬಂಧನ ಮಾಡಿಲ್ಲ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

 ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಂಧಿತರಲ್ಲಿ ಇಬ್ಬರು ಚನ್ನಪಟ್ಟಣದವರು, ಉಳಿದವರೆಲ್ಲ ಮದ್ದೂರು ಪಟ್ಟಣದವರು. ಪ್ರಕರಣದಲ್ಲಿ ಸ್ವಲ್ಪ ಮಟ್ಟಿಗೆ ಕಾನೂನು ಸುವ್ಯವಸ್ಥೆಯಲ್ಲಿ ವೈಫಲ್ಯವಾಗಿರುವ ಅನುಮಾನವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿಯುವವರೆಗೂ ಏನೂ ಹೇಳುವುದಿಲ್ಲ. 

ಈ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನವರು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಅವರಿಗೆ ಶಾಂತಿ ಬೇಕಿಲ್ಲ. ಅದಕ್ಕೆ ಶಾಂತಿ ಸಭೆಗೆ ಬಂದಿಲ್ಲ ಎಂದರು. ನನ್ನ ಮಾಹಿತಿ ಪ್ರಕಾರ ಮದ್ದೂರಲ್ಲಿ ಇನ್ನೂ ನಾಲ್ಕೈದು ಸಾಮೂಹಿಕ ಗಣಪತಿ ಇವೆ. ಆದರೆ, ನಂಬರ್ ಜಾಸ್ತಿ ಮಾಡಲು ಬಿಜೆಪಿ-ಜೆಡಿಎಸ್‌ ನಾಯಕರು ಬೆಂಗಳೂರಿನಿಂದ ಗಣೇಶ ಮೂರ್ತಿ ಖರೀದಿ ಮಾಡಿ ತಂದಿದ್ದಾರೆ ಎಂದು ಹೇಳಿದರು.

PREV
Stay informed with the latest news from Chikkamagaluru district (ಚಿಕ್ಕಮಗಳೂರು ಸುದ್ದಿ) — covering local politics, coffee‑region updates, civic issues, environment, tourism, culture, crime and community affairs on Kannada Prabha News..
Read more Articles on

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ಸಹವಾಸ ದೋಷದಿಂದ ಮಕ್ಕಳಲ್ಲಿ ದುಶ್ಚಟದ ಪ್ರಮಾಣ ಹೆಚ್ಚುತ್ತಿದೆ: ಬಾಲಕೃಷ್ಣ ಭಟ್ ಕಳವಳ