ಚಿಕ್ಕಾಟೀಲಿ ಮೂರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ

KannadaprabhaNewsNetwork |  
Published : Aug 11, 2025, 12:30 AM IST
10ಜಿಪಿಟಿ6ಗುಂಡ್ಲುಪೇಟೆ ತಾಲೂಕಿನ ಬೇಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಾಯಿ ಕಚ್ಚಿಸಿಕೊಂಡ ಇಬ್ಬರು ಮಕ್ಕಳು. | Kannada Prabha

ಸಾರಾಂಶ

ಬೀದಿ ನಾಯಿ ಕಚ್ಚಿ ಮೂವರು ಮಕ್ಕಳು ಗಾಯಗೊಂಡ ಘಟನೆ ತಾಲೂಕಿನ ಚಿಕ್ಕಾಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಚಿಕ್ಕಾಟಿ ಗ್ರಾಮದ ಸುಜನ್‌ (10), ಸಮೃದ್ಧಿ(7), ಮದನ್ (‌6)ಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಸಮೃದ್ಧಿಗೆ ತುಸು ಗಾಯಗೊಂಡಿದೆ ಎನ್ನಲಾಗಿದೆ.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಬೀದಿ ನಾಯಿ ಕಚ್ಚಿ ಮೂವರು ಮಕ್ಕಳು ಗಾಯಗೊಂಡ ಘಟನೆ ತಾಲೂಕಿನ ಚಿಕ್ಕಾಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಚಿಕ್ಕಾಟಿ ಗ್ರಾಮದ ಸುಜನ್‌ (10), ಸಮೃದ್ಧಿ(7), ಮದನ್ (‌6)ಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಸಮೃದ್ಧಿಗೆ ತುಸು ಗಾಯಗೊಂಡಿದೆ ಎನ್ನಲಾಗಿದೆ.

ಗಾಯಗೊಂಡ ಮೂವರು ಮಕ್ಕಳನ್ನು ಪೋಷಕರು ಹಾಗೂ ಯುವಕರು ಬೇಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ವೈದ್ಯರು ನಾಯಿ ಚುಚ್ಚು ಮದ್ದು ನೀಡಿ, ಹೆಚ್ಚಿನ ಚಿಕಿತ್ಸೆಗೆ ಮೈಸೂರು ಕೆ.ಆರ್.ಆಸ್ಪತ್ರೆಗೆ ಕಳುಹಿಸಿದ್ದಾರೆ.

ಬೀದಿ ನಾಯಿ ಕಚ್ಚಿ ಗಾಯಗೊಂಡ ಮೂವರು ಮಕ್ಕಳನ್ನು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಆ್ಯಂಬ್ಯುಲೆನ್ಸ್‌ ಮೂಲಕ ಕಳುಹಿಸುವುದಕ್ಕೆ ಮಂಜು ಅವರು 108 ಕರೆ ಮಾಡಿದರೂ ಕರೆ ಸ್ವೀಕರಿಸದ ಕಾರಣ ಸಾರಿಗೆ ಬಸ್‌ ನಲ್ಲಿ ಮೈಸೂರಿಗೆ ಕಳುಹಿಸಿದ್ದಾರೆ.

ಮಂಜು ಮಾತನಾಡಿ, ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಗ್ರಾಪಂ ಕೂಡಲೇ ಬೀದಿ ನಾಯಿಗಳ ಸೆರೆ ಹಿಡಿಯಬೇಕು. ಆ್ಯಂಬ್ಯುಲೆನ್ಸ್‌ ಸಂಖ್ಯೆ 108ಗೆ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಮಕ್ಕಳಿಗೆ ತುರ್ತು ಚಿಕಿತ್ಸೆ ಇರುವುದರಿಂದಲೇ ಮೈಸೂರು ಆಸ್ಪತ್ರೆಗೆ ಹೋಗಿ ಎಂದು ವೈದ್ಯರು ಹೇಳಿದ್ದಾರೆ. ಆದರೂ ಆ್ಯಂಬ್ಯುಲೆನ್ಸ್‌ ಸಿಗದೆ ಸಾರಿಗೆ ಬಸ್‌ ನಲ್ಲಿ ಕಳುಹಿಸಲು ಕಾರಣವಾದ ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌