ಗ್ರಾಮೀಣ ಭಾಗಕ್ಕೆ ಎನ್‌ಎಸ್‌ಎಸ್ ಶಿಬಿರ ಸಹಕಾರಿ

KannadaprabhaNewsNetwork |  
Published : Dec 29, 2025, 01:15 AM IST
60 | Kannada Prabha

ಸಾರಾಂಶ

ವಾರ್ಷಿಕ ವಿಶೇಷ ಶಿಬಿರಗಳ ಪ್ರಯೋಜನವನ್ನು ಶಿಬಿರಾರ್ಥಿಗಳು ಸದುಪಯೋಗಿಸಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಗುರುಪಾದಸ್ವಾಮಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಸುತ್ತೂರು

ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ವಾರ್ಷಿಕ ವಿಶೇಷ ಶಿಬಿರಗಳ ಪ್ರಯೋಜನವನ್ನು ಶಿಬಿರಾರ್ಥಿಗಳು ಸದುಪಯೋಗಿಸಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಗುರುಪಾದಸ್ವಾಮಿ ತಿಳಿಸಿದರು.

ನಂಜನಗೂಡು ತಾಲೂಕಿನ ಚಿಕ್ಕಯ್ಯನಛತ್ರ ಹೋಬಳಿಯ ಹದಿನಾರು ಗ್ರಾಮದಲ್ಲಿ ಜೆಎಸ್‌ಎಸ್ ಮಹಿಳಾ ಪಾಲಿಟೆಕ್ನಿಕ್ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಅವರು ಶನಿವಾರ ಉದ್ಘಾಟಿಸಿ ಮಾತನಾಡಿದರು. ಜೆಎಸ್‌ಎಸ್ ಸಂಸ್ಥೆ ಈ ರೀತಿಯ ಶಿಬಿರಗಳನ್ನು ಹಮ್ಮಿಕೊಂಡು ಜನರಲ್ಲಿ ಅರಿವು ಮೂಡಿಸುತ್ತಿರುವುದು ಅತ್ಯಂತ ಸಂತಸಕರ ವಿಚಾರವಾಗಿದೆ. ಶಿಬಿರದಲ್ಲಿ ಪಾಲ್ಗೊಂಡಿರುವ ಎಲ್ಲಾ ಶಿಬಿರಾರ್ಥಿಗಳು ಶಿಸ್ತು, ಸಲಹೆ- ಸೂಚನೆಯನ್ನು ಶ್ರದ್ದಾಭಕ್ತರಾಗಿ ಪಾಲಿಸಬೇಕು ಎಂದರು.

ಜಿಪಂ ಮಾಜಿ ಸದಸ್ಯ ಎಚ್‌.ಎನ್. ನಂಜಪ್ಪ, ಜೆಎಸ್‌ಎಸ್ ಮಹಿಳಾ ಪಾಲಿಟೆಕ್ನಿಕ್‌ ಪ್ರಾಂಶುಪಾಲ ವಿ.ಬಿ. ಲೋಕೇಶ್, ಉಪನ್ಯಾಸಕಾರಾದ ಜಿ. ಅನುಷಾ, ಮನೋಹರ್, ಎಸ್. ಮಧುಸೂಧನ್, ಯೋಗೇಶ್ವರಿ, ಗಿರೀಶ್, ಗ್ರಾಪಂ ಸದಸ್ಯ ನಾಗರಾಜು, ಸಿದ್ದಪ್ಪ, ಹದಿನಾರು ಗ್ರಾಪಂ ಅಧ್ಯಕ್ಷೆ ಸಣ್ಣತಾಯಮ್ಮ, ಮುಖಂಡರಾದ ಮಲ್ಲಿಕಾರ್ಜುನ್, ನಂಜುಂಡಸ್ವಾಮಿ, ಮೋಹನ್, ಆನಂದ್ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತ್ಯಾಗ, ಬಲಿದಾನ, ಆದರ್ಶಗಳ ಮೇಲೆ ಹುಟ್ಟಿದ ಕಾಂಗ್ರೆಸ್: ಎಸ್.ಆರ್. ಪಾಟೀಲ
ರೈತ ಸೃಷ್ಟಿಯ ಮೊದಲ ವಿಜ್ಞಾನಿ, ಜಮೀನು ಪ್ರಯೋಗಾಲಯ: ಮಾಜಿ ಸಚಿವ ನಿರಾಣಿ