ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ, ಪರಿಣಾಮಕಾರಿ ಜಾಗೃತಿ ಮೂಡಿಸಿ: ಬೆನ್ನೂರ್

KannadaprabhaNewsNetwork |  
Published : Jul 20, 2025, 01:15 AM IST
19ಕೆಎಂಎನ್ ಡಿ21 | Kannada Prabha

ಸಾರಾಂಶ

ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳು ತುಂಬಾ ಗಂಭೀರ ಸ್ವರೂಪದಾಗಿದ್ದಾಗಿದೆ. ತಂದೆ, ತಾಯಿ, ಸಂಬಂಧಿಕರ ಅಭಿಪ್ರಾಯದ ಮೇರೆಗೆ ಬಾಲ್ಯ ವಿವಾಹ ನಡೆಯುತ್ತವೆ. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಬಾಲ್ಯ ವಿವಾಹದಿಂದಾಗುವ ಗಂಭೀರ ಪರಿಣಾಮಗಳ ಬಗ್ಗೆ ಹಾಗೂ ಕಾಯ್ದೆ ಬಗ್ಗೆ ತಿಳಿವಳಿಕೆ ನೀಡಿದಾಗ ಮಾತ್ರ ತಡೆಗಟ್ಟಲು ಸಾಧ್ಯ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ. ಈ ಬಗ್ಗೆ ಮಕ್ಕಳು ಪೋಷಕರಿಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಬೆನ್ನೂರ್ ಸಲಹೆ ನೀಡಿದರು.

ತಾಲೂಕಿನ ಬಲ್ಲೆನಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಬಲ್ಲೆನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಯೋಜಿಸಿದ್ದ ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳು ತುಂಬಾ ಗಂಭೀರ ಸ್ವರೂಪದಾಗಿದ್ದಾಗಿದೆ. ತಂದೆ, ತಾಯಿ, ಸಂಬಂಧಿಕರ ಅಭಿಪ್ರಾಯದ ಮೇರೆಗೆ ಬಾಲ್ಯ ವಿವಾಹ ನಡೆಯುತ್ತವೆ. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಬಾಲ್ಯ ವಿವಾಹದಿಂದಾಗುವ ಗಂಭೀರ ಪರಿಣಾಮಗಳ ಬಗ್ಗೆ ಹಾಗೂ ಕಾಯ್ದೆ ಬಗ್ಗೆ ತಿಳಿವಳಿಕೆ ನೀಡಿದಾಗ ಮಾತ್ರ ತಡೆಗಟ್ಟಲು ಸಾಧ್ಯ ಎಂದರು.

ಬಾಲ್ಯ ವಿವಾಹದಿಂದ ಹೆಣ್ಣು ಮಕ್ಕಳ ಮೇಲೆ ಮಾನಸಿಕ, ದೈಹಿಕವಾಗಿ ಗಂಭೀರ ಪರಿಣಾಮ ಬೀರಿ ಜೀವನ ಹಾಳಾಗುವಂತೆ ಮಾಡುತ್ತದೆ. ಇಂತಹ ಪ್ರಕರಣಗಳು ಕಂಡು ಬಂದರೆ 1098/112 ಸಹಾಯವಾಣಿ ಮೂಲಕ ವಿಷಯಗಳನ್ನು ಅಧಿಕಾರಿಗಳಿಗೆ ತಿಳಿಸಬೇಕು ಎಂದರು.

ಬಾಲ್ಯ ವಿವಾಹ ಕಂಡುಬಂದಲ್ಲಿ ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡುವವರು ಸೇರಿದಂತೆ ಅಪ್ರಾಪ್ತರ ಪೋಷಕರಿಗೆ, ಜವಾಬ್ದಾರಿ ಹೊತ್ತವರಿಗೆ, ಇತರರ ವಿರುದ್ಧ ಪ್ರಕರಣ ದಾಖಲಿಸುತ್ತಾರೆ. ಬಾಲ್ಯ ವಿವಾಹವಾದಲ್ಲಿ ಸಣ್ಣ ವಯಸ್ಸಿನಲ್ಲೇ ಗರ್ಭಿಣಿಯಾಗಿ ಕಡಿಮೆ ತೂಕದ ಮಗ ಮಗುವಿನ ಜನನ, ತಾಯಿ ಮರಣ, ಶಿಶು ಮರಣ, ಬುದ್ಧಿಮಾಂದ್ಯತೆ ಮಗು ಹುಟ್ಟುವ ಸಾಧ್ಯತೆ ಇದೆ. ಎಲ್ಲರೂ ಸೇರಿ ಈ ಬಾಲ್ಯ ವಿವಾಹವನ್ನು ತಡೆಗಟ್ಟಿ ಬಾಲ್ಯ ವಿವಾಹ ಮುಕ್ತ ತಾಲೂಕನ್ನಾಗಿ ಘೋಷಿಸಲು ನಾವೆಲ್ಲರೂ ಸನ್ನದ್ಧರಾಗೋಣ ಎಂದು ಕರೆ ನೀಡಿದರು.

ನಂತರ ಬಾಲ್ಯ ವಿವಾಹ ತಡೆ ಕುರಿತು ಮಕ್ಕಳಿಂದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಎಂ.ಸೆಲ್ವಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪದ್ಮ, ಆಶಾ ಕಾರ್ಯಕರ್ತೆ ಸುಗುಣ ಹಾಗೂ ಸಹ ಶಿಕ್ಷಕರು, ಶಾಲಾ ಮಕ್ಕಳು ಹಾಜರಿದ್ದರು.

PREV

Latest Stories

ಒಂದೇ ದಿನ ಹಂಪಿಗೆ 25 ಸಾವಿರಕ್ಕೂ ಅಧಿಕ ಪ್ರವಾಸಿಗರ ಆಗಮನ
ಕಿನ್ನಿಗೋಳಿಯಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ
ರಾಬಕೋ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ?