ಕನ್ನಡಪ್ರಭ ವಾರ್ತೆ ಕೊರಟಗೆರೆ
ತಾಲೂಕಿನ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯ, ಕೊರಟಗೆರೆ ಸಾರ್ವಜನಿಕ ಆಸ್ಪತ್ರೆ, ಪೋಲಿಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ತುಮಕೂರು ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆಗೆ ಸಂಭಂಧಪಟ್ಟಂತೆ ಯಾವೆಲ್ಲಾ ಕೆಲಸ ಕಾರ್ಯಗಳು ಆಗುತ್ತಿವೆ, ಕಾಯ್ದೆಗಳು ಮಕ್ಕಳ ಪರವಾಗಿ ಫೋಕ್ಸ್ ಕಾಯ್ದೆ, ಆರ್ಟಿಇ ಕಾಯ್ದೆ ಸೇರಿದಂತೆ ಇನ್ನಿತರ ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆಯ ಬಗ್ಗೆ ಆ.1ರಂದು ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲಾಗಿತ್ತು, ಆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದಂತೆ ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ ತಳಮಟ್ಟದಲ್ಲಿ ಹೇಗೆ ಅನುಷ್ಠಾನವಾಗುತ್ತಿದೆ ಎಂಬುದರ ಬಗ್ಗೆ ಪರಿಶೀಲಿಸಲು ಶುಕ್ರವಾರದಿಂದ ತುಮಕೂರು ಜಿಲ್ಲೆಯ ಶಿರಾ, ಪಾವಗಡ, ಕೊರಟಗೆರೆ ತಾಲೂಕಿನಲ್ಲಿ ಪ್ರವಾಸವನ್ನು ನಡೆಸಿದೆ. ಈ ವೇಳೆಯಲ್ಲಿ ಸರ್ಕಾರಿ ಶಾಲೆ, ಅಂಗನವಾಡಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ಹೇಳಿದರು.ಮಕ್ಕಳ ರಕ್ಷಣಾ ನೀತಿ ಅನುಷ್ಠಾನದ ಕಾರ್ಯಸೂಚಿಗಳನ್ನು ಈಗಾಗಲೇ ಹೊರಡಿಸಲಾಗಿದೆ, ಪ್ರತಿ ಶಾಲೆಗಳಲ್ಲೂ ಮಕ್ಕಳ ಸುರಕ್ಷತಾ ಸಮಿತಿ, ಮಕ್ಕಳ ಸಹಾಯ ಗುಂಪು ರಚನೆ ಮಾಡಬೇಕು. ಮಕ್ಕಳು ದೂರುಗಳನ್ನು ಸಲ್ಲಿಸಲು ದೂರು ಪೆಟ್ಟಿಗೆಗಳನ್ನು ಕಡ್ಡಾಯವಾಗಿ ಶಾಲೆಗಳಲ್ಲಿ ಇಡಬೇಕು. ಎಲ್ಲಾ ಖಾಸಗಿ ಶಾಲೆಗಳ ಆರಂಭಕ್ಕೂ ಮುನ್ನಾ ಆಡಳಿತ ಮಂಡಳಿಗಳು ಮಕ್ಕಳ ರಕ್ಷಣಾ ಬದ್ಧತೆ ಪತ್ರಕ್ಕೆ ಸಹಿಯನ್ನು ಕಡ್ಡಾಯವಾಗಿ ಹಾಕಬೇಕು, ಮುಂದಿನ ಸಭೆಯಲ್ಲಿ ಇಂದು ಚರ್ಚಿಸಲಾದ ವಿಷಯಗಳು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬಂದು ನಿರಂತರ ಪ್ರಗತಿ ಪರಿಶೀಲನಾ ಸಭೆ ನಡೆಸುವುದು ಅಷ್ಟೇ ಮುಖ್ಯ, ತಾಲೂಕು ಆಡಳಿತವು ಮಕ್ಕಳನ್ನು ರಕ್ಷಣೆ ಮಾಡುವಲ್ಲಿ ಹೆಚ್ಚಿನ ಬದ್ಧತೆಯನ್ನು ತೋರಬೇಕು,
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಂಜುನಾಥ್, ತಾ.ಪಂ ಇಒ ಅಪೂರ್ವಾ, ಸಿಪಿಐ ಸುರೇಶ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನುಷಾ, ಜಿಲ್ಲಾ ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿತ್ರಾ, ಸಿಡಿಪಿಒ ಅಂಬಿಕಾ, ವಲಯ ಅರಣ್ಯಾಧಿಕಾರಿ ರವಿ ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.ಸಾರಿಗೆ ಇಲಾಖೆ ಬಸ್ಗಳ ಸಂಖೈ ಹೆಚ್ಚಿಸಬೇಕು:
ಆಕಸ್ಮಿಕವಾಗಿ ಬೆಳಿಗ್ಗೆ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಮಕ್ಕಳ ವಾರ್ಡ್ ಪರಿಶೀಲನೆಯ ನಂತರ ಎನ್ಆರ್ಸಿ ವಾರ್ಡ್ಗೆ ಹೋದಾಗ ಬೀಗ ಹಾಕಿತ್ತು, ನಂತರ ಓಪನ್ ಮಾಡಸಿ ನೋಡಿದರೆ ದೂಳು ತುಂಬಿಕೊಂಡಿದ್ದನ್ನು ಕಂಡು ಸ್ಥಳದಲ್ಲೇ ತನಿಖಾಧಿಕಾರಿಗೆ ವಾರ್ಡ್ನ್ನು ಶುಚಿ ಮಾಡುವಂತೆ ತಿಳಿಸಿದ್ದು, ಬಾಣಂತಿಯರ ವಾರ್ಡ್ಗೂ ಹೋದ ವೇಳೆ ಬಿಸಿ ನೀರಿನ ವ್ಯವಸ್ಥೆ ಇಲ್ಲಾ ಎಂದು ಬಾಣಂತಿಯರು ಹೇಳಿದ ಕೂಡಲೇ ಇದರ ವ್ಯವಸ್ಥೆಯನ್ನು ಕಲ್ಪಿಸುವಂತೆ ಅಧಿಕಾರಿಗೆ ತಿಳಿಸಲಾಗಿದೆ ಎಂದು ಹೇಳಿದರು.