ಮಕ್ಕಳಿಲ್ಲದ ಕೊರಗು ನೋವಿನ ಸಂಗತಿ : ಆಶಿಶ್

KannadaprabhaNewsNetwork |  
Published : Oct 25, 2024, 12:51 AM IST
ದತ್ತು ಮಗು ಹಸ್ತಾಂತರ ಕಾರ್ಯಕ್ರಮದಲ್ಲಿ ಆಶಿಶ್ ತೋಸ್ನಿವಾಲ ಮಾತನಾಡಿದರು. | Kannada Prabha

ಸಾರಾಂಶ

ಮಕ್ಕಳಿಲ್ಲದ ದಂಪತಿಗಳ ಮಡಿಲಿಗೆ ಮಗು ನೀಡುವದು ಪುಣ್ಯದ ಕೆಲಸವಾಗಿದೆ

ಗದಗ: ಮಕ್ಕಳಿಲ್ಲದ ದಂಪತಿಗಳ ಕೊರಗು ಬಹುನೋವಿನ ಸಂಗತಿಯಾಗಿದ್ದು, ಇಂತಹ ದಂಪತಿಗಳ ಮಡಿಲಿಗೆ ದತ್ತು ಮಗು ಹಸ್ತಾಂತರಿಸುವುದು ಅವಿಸ್ಮರಣೀಯ ಸಂಗತಿಯಾಗಿದೆ ಎಂದು ಗುತ್ತಿಗೆದಾರ ಆಶಿಶ್ ತೋಸ್ನಿವಾಲ ಹೇಳಿದರು.

ಅವರು ಗುರುವಾರ ಬೆಟಗೇರಿಯ ಸೇವಾ ಭಾರತಿ ಟ್ರಸ್ಟ್‌ನ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆಯಲ್ಲಿ ಪೋಷಣೆಗೊಂಡ ಗಂಡು ಮಗುವನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಮಕ್ಕಳಿಲ್ಲದ ದಂಪತಿಗಳಿಗೆ ಕಾನೂನು ಚೌಕಟ್ಟಿನಲ್ಲಿ ದತ್ತು ಮಗು ಹಸ್ತಾಂತರಿಸಿ ಮಾತನಾಡಿದರು.

ಮನ ಮಿಡಿಯುವ, ಮನ ಕಲಕುವ ಸನ್ನಿವೇಶ ಇದಾಗಿದ್ದು, ಮಕ್ಕಳಿಲ್ಲದ ದಂಪತಿಗಳ ಮಡಿಲಿಗೆ ಮಗು ನೀಡುವದು ಪುಣ್ಯದ ಕೆಲಸವಾಗಿದೆ. ಪಾಲಕ ಪೋಷಕರಿಲ್ಲದ ಮಗುವಿಗೆ ಭವಿಷ್ಯ ರೂಪಿಸುವ ಹಾಗೂ ಮಕ್ಕಳಿಲ್ಲದ ಕೊರಗಿನಲ್ಲಿದ್ದ ದಂಪತಿ ಸಂತೃಪ್ತ ಭಾವನೆ ಹೊಂದುವದು ವರ್ಣಿಸಲು ಆಗದ್ದು, ಇದರಿಂದ ದಂಪತಿಗಳಿಗೆ ಹಾಗೂ ಮಗುವಿಗೆ ಸಂತೃಪ್ತ ಭಾವನೆ ಮೂಡಲು ಸಾಧ್ಯ. ದತ್ತು ಪಡೆದವರು ಮಗುವಿಗೆ ಉನ್ನತ ಶಿಕ್ಷಣ, ಸಂಸ್ಕಾರ, ಸಂಸ್ಕೃತಿ ನೀಡಿ ಉತ್ತಮ ಭವಿಷ್ಯ ರೂಪಿಸಬೇಕು ಎಂದರು.

ಮೇಘಾ ತೋಸ್ನಿವಾಲ ಮಾತನಾಡಿ, ಪರಿತ್ಯಕ್ತ ಮಕ್ಕಳಿಗೆ ಪೋಷಕರನ್ನು ಹಾಗೂ ಮಕ್ಕಳಿಲ್ಲದ ದಂಪತಿಗಳ ಮಡಿಲಿಗೆ ಮಗು ನೀಡಲು ಸಂಪರ್ಕ ಕೊಂಡಿಯಾಗಿ ಕಾರ್ಯ ಮಾಡುವ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆಯ ಕಾರ್ಯ ಶ್ಲ್ಯಾಘನೀಯ ಎಂದರು.

ವ್ಯಾಪಾರಸ್ಥ ನವೀನ ಅಕ್ಕಿ ಮಾತನಾಡಿ, ಗದಗ ಪರಿಸರದಲ್ಲಿ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆ ಉತ್ತಮ ಮಾನವೀಯ- ಸಾಮಾಜಿಕ ಕಾರ್ಯ ಮಾಡುತ್ತಿರುವದು ಶ್ಲ್ಯಾಘನೀಯ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಬೆಲ್ಲದ, ಸಮಾಜದಲ್ಲಿ ಪರಿತ್ಯಕ್ತ ಮಕ್ಕಳ ಸಂಖ್ಯೆ ಶೂನ್ಯವಾಗಬೇಕು, ಆ ರೀತಿಯ ವಾತಾವರಣ ನಿರ್ಮಾಣಗೊಳ್ಳಲಿ. ಸಂಸ್ಕಾರ ಮತ್ತು ಸಂಸ್ಕೃತಿಯ ತಳಹದಿಯ ಮೇಲೆ ಮೌಲ್ಯಯುತ ಜೀವನ ಎಲ್ಲರೂ ನಡೆಸುವಂತಾಗಲಿ ಎಂದರು.

ಆಶಿಶ್ ಹಾಗೂ ಮೇಘಾ ದಂಪತಿಗಳು ರಾಣೆಬೆನ್ನೂರಿನ ರುದ್ರಪ್ಪ ಹಾಗೂ ಲತಾ ದಂಪತಿಗಳಿಗೆ ಮಗು ಹಸ್ತಾಂತರಿಸಿ ಮಗುವಿನ ಭವಿಷ್ಯಕ್ಕೆ ಶುಭ ಕೋರಿದರು.

ಮಂಜುನಾಥ ಚನ್ನಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಅರುಣ ರಾಜಪುರೋಹಿತ ನಿರೂಪಿಸಿದರು, ನಾಗವೇಣಿ ಕಟ್ಟಿಮನಿ ಪ್ರಾರ್ಥಿಸಿ ವಂದಿಸಿದರು. ಸಮಾರಂಭದಲ್ಲಿ ಲಲಿತಾಬಾಯಿ ಮೇಹರವಾಡೆ, ರಾಜೇಶ ಖಟವಟೆ, ಗುರುಸಿದ್ಧಪ್ಪ ಕೊಣ್ಣೂರ, ಸಂಸ್ಥೆಯ ಸಿಬ್ಬಂದಿ ಸೇರಿದಂತೆ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಗಳಿಂದ ಮಕ್ಕಳ ಶಿಕ್ಷಣ ಕಸಿಯುವ ಹುನ್ನಾರ
ಭಾರತದ ಭವಿಷ್ಯ ವರ್ಗ ಕೋಣೆಯಲ್ಲಿದೆ