ಬ್ಲಾಸಮ್ ಶಾಲಾ ವಾರ್ಷಿಕೋತ್ಸವದಲ್ಲಿ ಮಕ್ಕಳೇ ಅತಿಥಿಗಳು

KannadaprabhaNewsNetwork |  
Published : Dec 28, 2025, 02:30 AM IST
ಕೆ ಕೆ ಪಿ ಸುದ್ದಿ 01:ನಗರದ ಅಂಬೇಡ್ಕರ್ ಭವನದಲ್ಲಿ ಬ್ಲಾಸಮ್ ಶಾಲಾ ವಾರ್ಷಿಕೋತ್ಸವ ಸಮಾರಂಭ | Kannada Prabha

ಸಾರಾಂಶ

2025ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ರಾಜ್ಯಪುರಸ್ಕಾರ ಪಡೆದ ವಿದ್ಯಾರ್ಥಿನಿಯರನ್ನು ಭಾರತ ಸೇನೆಯ ಪರಮ ವೀರರು ಎಂಬ ಪುಸ್ತಕ ಮತ್ತು ನೆನಪಿನ ಕಾಣಿಕೆ ಕೊಟ್ಟು ಗೌರವಿಸಿದರು.

ಕನ್ನಡಪ್ರಭ ವಾರ್ತೆ ಕನಕಪುರ

ಡಾ.ಬಿ.ಆರ್.ಅಂಬೇಡ್ಕರ್ ಪುರಭವನದಲ್ಲಿ ಡಾ ಬಿ.ಶಶಿಧರ್ ರವರ ಬ್ಲಾಸಮ್ ಶಾಲೆಯು 34ನೇ ಶಾಲಾ ವಾರ್ಷಿಕೋತ್ಸವವನ್ನು ವಿಶಿಷ್ಟ ಹಾಗೂ ಸಂಭ್ರಮದಿಂದ ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟರು.

ಶ್ರೀ ಸಿದ್ಧಲಿಂಗೇಶ್ವರ ಎಜುಕೇಷನಲ್ ಟ್ರಸ್ಟ್‌ ನ ಚೇರ್ಮನ್‌ ಡಾ.ಶ್ವೇತಾ ಶಶಿಧರ್ ಮಾತನಾಡಿ, ಟ್ರಸ್ಟ್ ನ ಸಂಸ್ಥಾಪಕ, ನಮ್ಮ ತಂದೆ ಡಾ. ಬಿ. ಶಶಿಧರ್ ರವರ ಮಹದಾಸೆಯಂತೆ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ದೃಷ್ಟಿಯಿಂದ ಹಾಗೂ ಮಕ್ಕಳು ಪುಸ್ತಕ ಪ್ರೇಮಿಗಳಾಗಬೇಕೆಂದು ಮಕ್ಕಳಿಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಯಂಗ್ ರೀಡರ್ ಅವಾರ್ಡ್ ಗೆ ಪದ್ಮಶ್ರೀ ವಿಜೇತ ಕನ್ನಡಿಗರು- 2024-25 ಮತ್ತು ಆಪರೇಷನ್ ಸಿಂದೂರ ಎಂಬ ವಿಷಯಗಳ ಬಗ್ಗೆ ಸ್ಪರ್ಧೆಯನ್ನು ಏರ್ಪಡಿಸಿ, 9ನೇ ತರಗತಿಯ ಹರ್ಷಿತಾ ಎನ್. ಮತ್ತು 6ನೇ ತರಗತಿಯ ಕಣ್ಮಯಿ ಶೆಟ್ಟಿ ಪಿ. ರವರನ್ನು ವಿಜೇತರೆಂದು ಆಯ್ಕೆಮಾಡಿ ಉತ್ತಮ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಉತ್ತಮ ಸಾಧಕಿ ಪ್ರಶಸ್ತಿಗೆ ಭಾಜನರಾದ ಸುರಕ್ಷಾ ಸಿ. ರವರನ್ನು ಗುರುತಿಸಿ, ಡಾ.ಬಸವರಾಜೇಂದ್ರ ಮೆಡಿಕಲ್ ಟ್ರಸ್ಟ್ ವತಿಯಿಂದ ಇದೇ ವೇಳೆ ಸನ್ಮಾನಿಸಲಾಯಿತು.

ಹತ್ತನೇ ತರಗತಿಯ ವಿದ್ಯಾರ್ಥಿ ಇಂದೂಧರ ಎಸ್. ರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯಲ್ಲಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರಾಂಶುಪಾಲರು ಮತ್ತು ಶಿಕ್ಷಕರ ವೃಂದ ಸದಾ ಸಹಕರಿಸುತ್ತಾ ಬಂದಿದ್ದಾರೆ ಎಂದರು.

9ನೇ ತರಗತಿಯ ಅಮೋಘ ಕೆ. ಮಾತನಾಡಿ, ನಮ್ಮ ಶಾಲೆಯಲ್ಲಿ ಉಚಿತವಾಗಿ ನಡೆಸುವಂತಹ ಭರತನಾಟ್ಯ, ಸಂಗೀತ ಮತ್ತು ಚಿತ್ರಕಲೆ ತರಗತಿಗಳಿಗೆ ಸೇರಲು ಅವಕಾಶ ಮಾಡಿಕೊಟ್ಟಿರುವ ಪ್ರಾಂಶುಪಾಲರಾದ ಗಂಗಾಂಬಿಕಾ ಹಾಗೂ ಶಿಕ್ಷಕರ ವೃಂದದವರಿಗೆ ಧನ್ಯವಾದ ಅರ್ಪಿಸಿದರು.

6ನೇ ತರಗತಿ ವಿದ್ಯಾರ್ಥಿ, ಮುಖ್ಯ ಅತಿಥಿ ಕಣ್ಮಯಿ ಶೆಟ್ಟಿ ಪಿ. ಮಾತನಾಡಿ, ನಮ್ಮ ಶಾಲೆಯಲ್ಲಿ ನಡೆಯುವ ಶಾಲಾ ವಾರ್ಷಿಕೋತ್ಸವ ಮತ್ತು ಎಲ್ಲಾ ರಾಷ್ಟ್ರೀಯ ಹಬ್ಬಗಳಿಗೂ ಮಕ್ಕಳನ್ನೇ ಅತಿಥಿಗಳಾಗಿ ಆಯ್ಕೆ ಮಾಡುತ್ತಿರುವುದು ವಿಶಿಷ್ಟವಾಗಿದೆ. ಅಂತರ ಶಾಲಾ ಮಟ್ಟದ ಚೆಸ್, ಗಾಯನ ಸ್ಪರ್ಧೆ, ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ವಿಜ್ಞಾನ ವಸ್ತುಪ್ರದರ್ಶನ, ರಸಪ್ರಶ್ನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿ ಗಳನ್ನು ಪಡೆಯಲು ನಮ್ಮ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರ ವೃಂದದ ಪ್ರೋತ್ಸಾಹವೇ ಕಾರಣ ಎಂದು ಹೇಳಿದರು.

ಕಾರ್ಯಕ್ರಮದ ಮತ್ತೊಬ್ಬ ಮುಖ್ಯ ಅತಿಥಿಯಾಗಿದ್ದ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ದೇವಿಕಾ ವಿ.ಪಿ. ಮಾತನಾಡಿ, ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ನನಗೆ ಈ ಅವಕಾಶ ಕಲ್ಪಿಸಿ ಕೊಟ್ಟ ಶಾಲೆಗೆ ನಾನು ಕೃತಜ್ಞ ನಾಗಿರುತ್ತೇನೆ ಎಂದರು.

2025ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ರಾಜ್ಯಪುರಸ್ಕಾರ ಪಡೆದ ವಿದ್ಯಾರ್ಥಿನಿಯರನ್ನು ಭಾರತ ಸೇನೆಯ ಪರಮ ವೀರರು ಎಂಬ ಪುಸ್ತಕ ಮತ್ತು ನೆನಪಿನ ಕಾಣಿಕೆ ಕೊಟ್ಟು ಗೌರವಿಸಿದರು. ಪಿ.ಕೆ.ಜಿ ಯಿಂದ 10ನೇ ತರಗತಿವರೆಗಿನ ಮಕ್ಕಳು ಹಿಂದೂಸ್ಥಾನಿ ಗಾಯನ, ಭರತನಾಟ್ಯ, ನಾಟಕ, ಮೈಮ್ ಸೆಮಿಕ್ಲಾಸಿಕ್ ನೃತ್ಯ, ಕಂಸಾಳೆ ಹಾಗೂ ವಿವಿಧ ನೃತ್ಯಗಳ ಮೂಲಕ ಪ್ರೇಕ್ಷಕರ ಮನಸೂರೆಗೊಶಿಸಿದರು.

10ನೇ ತರಗತಿಯ ವೈಭವ್ ವಿ. ಸ್ವಾಗತ, ಕಾವ್ಯ ಕೆ.ಜಿ. ಮತ್ತು ಚಂದನ ಎಸ್. ಶಾಲಾ ವರದಿ ಮಂಡಿಸಿದರು. ನಮ್ರತಾ ಎಲ್ ವಂದಿಸಿದರು, ತನುಶ್ರೀ ಜೆ. ನಾಯಕ್, ಪುಣ್ಯಶ್ರೀ ಕೆ., ರಿಹಾನ್ ಅಲ್ಲಾಭಕ್ಷ್ ಅವಟಿ ಹಾಗೂ ಮಾನ್ವಿತಾ ಜೆ. ನಿರೂಪಿಸಿದರು. ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮಗಳ ಮಧ್ಯದಲ್ಲಿ ಆಪರೇಷನ್ ಸಿಂದೂರ ಬಗ್ಗೆ ಸವಿವರವಾಗಿ ತಿಳಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ