ವಿಮಾನಯಾನ ಮಾಡಿಸಿದ ನೆಚ್ಚಿನ ಶಿಕ್ಷಕನ ವರ್ಗಕ್ಕೆ ಮಕ್ಕಳು ಕಣ್ಣಿರು!

KannadaprabhaNewsNetwork |  
Published : Jan 04, 2026, 02:30 AM IST
ವಿಮಾನಯಾನ ಪ್ರವಾಸ ಮಾಡಿಸಿದ್ದ ಶಿಕ್ಷಕ. | Kannada Prabha

ಸಾರಾಂಶ

ಇತ್ತೀಚಿಗೆ ಸ್ವಂತ ₹5 ಲಕ್ಷ ಖರ್ಚಿನಲ್ಲಿ 24 ವಿದ್ಯಾರ್ಥಿಗಳನ್ನು ವಿಮಾನಯಾನದ ಮೂಲಕ ಬೆಂಗಳೂರು ಪ್ರವಾಸ ಮಾಡಿಸಿದ್ದ ತಮ್ಮ ನೆಚ್ಚಿನ ಶಿಕ್ಷಕನ ವರ್ಗಾವಣೆ ಖಂಡಿಸಿದ ವಿದ್ಯಾರ್ಥಿಗಳು ಬಿಸಿಯೂಟ ತ್ಯಜಿಸಿ ಕಣ್ಣಿರು ಹಾಕಿದ ಅಪರೂಪದ ಘಟನೆ ಕೊಪ್ಪಳ ಜಿಲ್ಲೆಯ ಬಹದ್ದೂರಬಂಡಿ ಗ್ರಾಮದಲ್ಲಿ ನಡೆದಿದೆ.

ಕನ್ನಡಪ್ರಭ ವಾರ್ತೆ ಕೊಪ್ಪಳ

ಇತ್ತೀಚಿಗೆ ಸ್ವಂತ ₹5 ಲಕ್ಷ ಖರ್ಚಿನಲ್ಲಿ 24 ವಿದ್ಯಾರ್ಥಿಗಳನ್ನು ವಿಮಾನಯಾನದ ಮೂಲಕ ಬೆಂಗಳೂರು ಪ್ರವಾಸ ಮಾಡಿಸಿದ್ದ ತಮ್ಮ ನೆಚ್ಚಿನ ಶಿಕ್ಷಕನ ವರ್ಗಾವಣೆ ಖಂಡಿಸಿದ ವಿದ್ಯಾರ್ಥಿಗಳು ಬಿಸಿಯೂಟ ತ್ಯಜಿಸಿ ಕಣ್ಣಿರು ಹಾಕಿದ ಅಪರೂಪದ ಘಟನೆ ಕೊಪ್ಪಳ ಜಿಲ್ಲೆಯ ಬಹದ್ದೂರಬಂಡಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಬಹದ್ದೂರಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರನ್ನು ದಿಢೀರ್ ವರ್ಗಾವಣೆ ಮಾಡಿರೋದು ವಿದ್ಯಾರ್ಥಿಗಳ ಅಳುವಿಗೆ ಕಾರಣವಾಗಿದೆ. ‘ನಮಗೆ ನಮ್ಮ ನೆಚ್ಚಿನ ಶಿಕ್ಷಕರು ಬೇಕು. ಇಲ್ಲದಿದ್ದರೆ ನಮಗೆ ಶಾಲೆ ಬೇಡ’ ಎಂದು ಕಣ್ಣೀರಿಟ್ಟ ಮಕ್ಕಳು ಶಾಲೆಗೆ ಬೀಗ ಜಡಿದು ಪ್ರತಿಭಟನೆ ಮಾಡಿದ್ದಾರೆ. ಈ ವಿದ್ಯಾರ್ಥಿಗಳಿಗೆ ಬಹದ್ದೂರಬಂಡಿ ಗ್ರಾಮಸ್ಥರು ಸಾಥ್‌ ನೀಡಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ನಮಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ. ಎಸ್‌ಡಿಎಂಸಿ ಅಧ್ಯಕ್ಷರು, ಶಿಕ್ಷಣ ಇಲಾಖಾಧಿಕಾರಿಗಳು ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರೂ, ಮಕ್ಕಳು ತಮಗೆ ಬೀರಪ್ಪ ಸರ್​ ಬೇಕೇಬೇಕು ಎಂದು ಹಠ ಹಿಡಿದಿದ್ದಾರೆ.

ಶಿಕ್ಷಕ ಬಿರಪ್ಪ ಅವರು, ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳನ್ನು ವಿಮಾನದ ಮೂಲಕ ಬೆಂಗಳೂರಿಗೆ ಕರೆದೊಯ್ದು ಮಾದರಿಯಾಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಸುರಕ್ಷತೆಗೆ ಸಾರಿಗೆ ಇಲಾಖೆ ಎಐ ಆಧರಿತ ಕ್ಯಾಮೆರಾ ಅಳವಡಿಕೆ
ಮಂಡ್ಯ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸ್ವತಂತ್ರ ಸ್ಪರ್ಧೆ - ಸುಮಲತಾ ಪರ ನಾರಾಯಣಗೌಡ ಬ್ಯಾಟಿಂಗ್‌