ಕನ್ನಡಪ್ರಭ ವಾರ್ತೆ ಅರಸೀಕೆರೆ
ತೌಫಿಕ್ ಮತ್ತು ಫರಾನ್ ಎಂಬುವವರ ಮಕ್ಕಳು ಒಂದೇ ಶಾಲೆಯಲ್ಲಿ ಓದುತ್ತಿದ್ದರು. ಜ್ವರದಿಂದ ಬಳಲುತ್ತಿದ್ದ ತೌಫಿಕ್ ಅವರ ಮಗನ ಮೇಲೆ ಫರಾನ್ ಅವರ ಮಗ ತಣ್ಣೀರು ಸುರಿದಿದ್ದಾನೆ ಎಂಬ ವಿಚಾರದಿಂದ ವಾಗ್ವಾದ ಉಂಟಾಯಿತು. ಇದು ವಿಕೋಪಕ್ಕೆ ತಿರುಗಿ ತೌಫಿಕ್ ಮತ್ತು ಫರಾನ್ ಒಬ್ಬರ ಮೇಲೆ ಒಬ್ಬರು ಹಲ್ಲೆ ನಡೆಸಿದ್ದು, ತೌಫಿಕ್ ಸಾವನ್ನಪ್ಪಿದ್ದಾರೆ.ಘಟನೆ ವಿವರ:
ಆ. 25ರಂದು ತೌಫಿಕ್ ತಮ್ಮ ಮಗನಿಗೆ ಹೋಟೆಲ್ನಿಂದ ಇಡ್ಲಿ ತರಲು ಹೋಗಿದ್ದಾಗ ಫರಾನ್ ಎದುರಾಗಿದ್ದಾರೆ. ಈ ವೇಳೆ “ನಿನ್ನ ಮಗನು ನನ್ನ ಮಗನಿಗೆ ಹುಷಾರಿಲ್ಲದ ಸಮಯದಲ್ಲಿ ತಣ್ಣೀರು ಸುರಿದಿದ್ದಾನೆ, ಅವನಿಗೆ ಬುದ್ಧಿ ಹೇಳು " ಎಂದಿದ್ದಾರೆ. ಇದಕ್ಕೆ ಸಿಟ್ಟಾದ ಫರಾನ್ ತನ್ನ ಕಡೆಯವರಾದ ಆರ್ಮಿನ್, ಫೈರೋಜ್, ಇರ್ಮಾನ್, ಸಲ್ಮಾನ್, ಆಟೋ ಅಡ್ಡು, ಗೌಸ್, ನೂರ್, ಮುನ್ನ ಎಂಬುವವರನ್ನು ಕರೆತಂದು ತೌಫಿಕ್ರ ಮೇಲೆ ಹಲ್ಲೆ ನಡೆಸಿದರು. ಹಲ್ಲೆ ವೇಳೆ ತೌಫಿಕ್ ಮೆಟ್ಟಿಲುಗಳಿಂದ ಬಿದ್ದು ತಲೆಗೆ ಗಂಭೀರ ಗಾಯವಾಯಿತು. ತಕ್ಷಣ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ನಿಮ್ಹಾನ್ಸ್ಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ನಿಧನರಾದರು.ಮನೆ ಜಖಂ, ಕಾರಿಗೆ ಬೆಂಕಿ:
ಇನ್ಸ್ಪೆಕ್ಟರ್ ವಿರುದ್ಧ ಆಕ್ರೋಶ:
ಸ್ಥಳೀಯರು ನಗರಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ.ಜಿ.ಕೆ. ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೂರು ನೀಡಿದರೂ ಕ್ರಮವಿಲ್ಲ. ಬದಲಿಗೆ ಕೌಂಟರ್ ಕೇಸ್ ಹಾಕಿ ಆರೋಪಿಗಳನ್ನು ಬಿಡಲಾಗಿದೆ ಎಂದು ಆರೋಪಿಸಿ, ಬೇಜವಾಬ್ದಾರಿ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂಬ ಆಗ್ರಹಿಸಿದ್ದಾರೆ.ಘಟನೆ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ಮುಖಂಡ ಎನ್.ಆರ್. ಸಂತೋಷ್, ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ, ಆದರೆ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದರು.
===ಫೊಟೋ: ಮೃತ ತೌಫಿಕ್