ಕನ್ನಡಪ್ರಭ ವಾರ್ತೆ ಮೈಸೂರು
ಕೆಎಸ್ಎಫ್ ಅಕಾಡೆಮಿಯು ವಿಜಯನಗರ ಎರಡನೇ ಹಂತದ ಕೃಷಿಕ್ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಕೆ-ಸಿಇಟಿ, ನೀಟ್ ಕ್ರ್ಯಾಸ್ ಕೋರ್ಸ್ ತರಬೇತಿಯಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ನಗರ, ಪಟ್ಟಣ ಪ್ರದೇಶಗಳಲ್ಲಿ ಕಾನ್ವೆಂಟ್ಗಳಲ್ಲಿ ಓದಿದ ಮಕ್ಕಳ ಜೊತೆ ಗ್ರಾಮೀಣ ಪ್ರದೇಶದ ಮಕ್ಕಳು ಸ್ಪರ್ಧಿಸಲು ಸಾಧ್ಯವಿಲ್ಲ. ಅವರಿಗೆ ತರಬೇತಿ ನೀಡಬೇಕು ಎಂಬ ಉದ್ದೇಶದಿಂದ ಟ್ರಸ್ಟ್ ಅನ್ನು ಆರಂಭಿಸಲಾಗಿದೆ. ಆದ್ದರಿಂದ ಗ್ರಾಮೀಣ ವಿದ್ಯಾರ್ಥಿಗಳು ಸವಾಲನ್ನು ಗಟ್ಟಿತನದಿಂದ ಎದುರಿಸಬೇಕು. ವೈದ್ಯರು, ಎಂಜಿನಿಯರುಗಳು ಮಾತ್ರವಲ್ಲದೇ ಐಎಎಸ್, ಐಪಿಎಸ್ ಮೊದಲಾದ ಪರೀಕ್ಷೆಗಳನ್ನು ಪಾಸು ಮಾಡಬೇಕು ಎಂದರು.
ಈಗ ಸಿಇಟಿ, ನೀಟ್ ತರಬೇತಿ ಪಡೆದವರು ಮುಂದೆ ಐಎಎಸ್, ಐಪಿಎಸ್ ಪರೀಕ್ಷೆ ತೆಗೆದುಕೊಳ್ಳಲು ಬಯಸಿದರೆ ಸಂಸ್ಥೆಯ ಬಾಗಿಲು ಸದಾ ತೆರೆದಿರುತ್ತದೆ. ಇದನ್ನು ಸದುಪಯೋಗ ಮಾಡಿಕೊಳ್ಳಿ ಎಂದರು.ಅಧ್ಯಕ್ಷತೆ ವಹಿಸಿದ್ದ ಕೃಷಿಕ್ ಸರ್ವೋದ ಫೌಂಡೇಶನ್ ಟ್ರಸ್ಟ್ ಮೈಸೂರು ಶಾಖೆ ಅಧ್ಯಕ್ಷ ಡಾ.ಎನ್.ಎಸ್. ರಾಮೇಗೌಡ ಮಾತನಾಡಿ, ಟ್ರಸ್ಟ್ ರಾಜ್ಯ ಮಟ್ಟದಲ್ಲಿ ಪ್ರತಿ ವರ್ಷ ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಮಕ್ಕಳಿಗೆ 80 ಲಕ್ಷ ರು. ವಿದ್ಯಾರ್ಥಿ ವೇತನ ನೀಡುತ್ತಿದೆ. ಮೈಸೂರು ಕೇಂದ್ರವು 10 ಲಕ್ಷ ರು. ವಿದ್ಯಾರ್ಥಿ ವೇತನ ನೀಡುತ್ತಿದೆ. ಇದರ ಸದುಪಯೋಗ ಪಡೆದು, ಇಲ್ಲಿ ತರಬೇತಿ ಪಡೆದವರು ಮುಂದೆ ಸಂಸ್ಥೆಯ ರಾಯಭಾರಿಗಳಂತೆ ಕಾರ್ಯನಿರ್ವಹಿಸಬೇಕು ಎಂದರು.
ಮುಖ್ಯ ಅತಿಥಿಯಾಗಿದ್ದ ರಾಜ್ಯ ಸರ್ಕಾರದ ನಿವೃತ್ತ ವಿಶೇಷ ಕಾರ್ಯದರ್ಶಿ ಡಾ.ಪಿ.ಬೋರೇಗೌಡ ಮಾತನಾಡಿ, ಇಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳ ಫಾಲೋಅಪ್ ಕೆಲಸ ಆಗಬೇಕು. ಪ್ರೌಢಶಾಲಾ ಹಂತದಿಂದಲೇ ಈ ಸಂಸ್ಥೆಗೆ ವಿದ್ಯಾರ್ಥಿಗಳನ್ನು ಸಂಪರ್ಕಿಸುವ ಕೆಲಸ ಆಗಬೇಕು. ಬನ್ನೂರು- ಮಲಿಯೂರುನಿಂದ ತಾವು ಹಾಗೂ ಎನ್. ನಂಜೇಗೌಡರು ಸೇರಿ ಪೈ ಲಟ್ ಕಾರ್ಯಕ್ರಮ ಆರಂಭಿಸುವುದಾಗಿ ಹೇಳಿದರು.
ಈಗ ಚೆನ್ನಾಗಿ ಓದಿದರೆ ಎಲ್ಲಿ ಬೇಕಾದರೂ ಉದ್ಯೋಗ ಸಿಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಗುರುಹಿರಿಯರಿಗೆ ಗೌರವ ನೀಡಬೇಕು. ತಂದೆ- ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಸಮಾಜದ ಋಣವನ್ನು ತೀರಿಸಬೇಕು ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ರಾಮೇಗೌಡ, ರೇವಣ್ಣ, ನಂದೀಶ್, ರಾಘವೇಂದ್ರ, ಕೃಷ್ಣಯ್ಯ, ಸಾಹಿತಿ ಟಿ. ಸತೀಶ್ ಜವರೇಗೌಡ, ಕೆಎನ್ಸಿ ಶಾಲೆ ಸಂಸ್ಥಾವಕ ಡಾ.ಕೆ.ಎನ್. ಚಂದ್ರಶೇಖರ್ ಮೊದಲಾದವರು ಇದ್ದರು.