ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ತಳಗವಾದಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹನುಮಂತಯ್ಯ ಅವರು ಉಪನ್ಯಾಸಕ ಹುದ್ದೆಯಿಂದ ಪ್ರಾಂಶುಪಾಲರ ಹುದ್ದೆಗೆ ಪದೋನ್ನತಿ ಹೊಂದಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಸವಲತ್ತುಗಳನ್ನು ನೀಡುತ್ತಿದೆ. ಅವುಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಿ ಅವರ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಉಪನ್ಯಾಸಕರ ಮೇಲಿದೆ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ನಂತರ ಸಿ.ಎಸ್.ಆರ್. ಫಂಡ್ ಮೂಲಕ ಶೈಕ್ಷಣಿಕ ವಲಯಕ್ಕೆ ಡಿಜಿಟಲ್ ಟಚ್ ನೀಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.ಎಪಿಎಂಸಿ ಮಾಜಿ ಸದಸ್ಯ ದಿಲೀಪ್ ಕುಮಾರ್ (ವಿಶ್ವ) ಮಾತನಾಡಿ, ನಮ್ಮ ಗ್ರಾಮದ ಹನುಮಂತಯ್ಯ ಅವರು ನಮ್ಮೂರಿನ ಸರ್ಕಾರಿ ಶಾಲೆ, ಕಾಲೇಜು ಪ್ರಗತಿಗೆ ಹಾಗೂ ಆರೋಗ್ಯ ಶಿಬಿರಗಳ ಆಯೋಜನೆಗೆ ಸಾಕಷ್ಟು ಶ್ರಮಿಸಿದ್ದಾರೆ. ಇದೀಗ ಪ್ರಾಂಶುಪಾಲರ ಹುದ್ದೆಗೆ ಪದೋನ್ನತಿ ಹೊಂದಿರುವುದು ಸಂತಸ ತಂದಿದೆ ಎಂದರು.
ಪ್ರಾಂಶುಪಾಲ ಮಂಜುನಾಥ್, ಪ್ರೌಢಶಾಲಾ ಮುಖ್ಯಶಿಕ್ಷಕ ಮಹೇಂದ್ರ, ಬಿ.ಟಿ.ರಾಮಲಿಂಗಯ್ಯ, ಉಪನ್ಯಾಸಕ ಪವಿತ್ರಾ, ನಾಗಶ್ರೀ, ರವಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಸವರಾಜು, ನಿರ್ದೇಶಕ ಜಯರಾಮು, ಮುಖಂಡರಾದ ನಿಂಗಣ್ಣ, ರಾಮಣ್ಣ, ಜಲ್ಲಿ ಚನ್ನಪ್ಪ, ಚಿಕ್ಕೇಗೌಡ, ರಾಮಣ್ಣ, ಬಸವರಾಜು, ಮರಿಸ್ವಾಮಿ ಭಾಗಿಯಾಗಿದ್ದರು.