ಕನ್ನಡಪ್ರಭ ವಾರ್ಚೆ ಕೆ.ಆರ್.ಪೇಟೆ
ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಒಳಾಂಗಣ ಮೈದಾನದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಂತೆ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಶಾಲೆ, ಸರ್ಕಾರಿ ಶಾಲೆಗಳು ಉಳಿಯಲು ಇಂತಹ ಹಲವು ಕಾರ್ಯಕ್ರಮ ಶಿಕ್ಷಕರು ರೂಪಿಸಬೇಕಿದೆ ಎಂದರು.
ಮಕ್ಕಳಿಗೆ ಕೇವಲ ಪಠ್ಯ ಸಾಕು ಎನ್ನದೆ ಪಠ್ಯೇತರ ಚಟುವಟಿಕೆಗಳಿಗೆ ಗಮನವಿರಲಿ. ಖುಷಿಯಿಂದ ಮಕ್ಕಳು ಶಾಲೆಗೆ ಬರಲು ಪಠ್ಯದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗೆ ಮುಂದಾಗಬೇಕು ಎಂದರು.ಮನೆಯಿಂದ ಪೋಷಕರ ಬಳಿ ಮಕ್ಕಳು ಬೋಂಡಾ, ವಡೆ, ಚಕ್ಕುಲಿ, ನಿಪ್ಪಟ್ಟಿನಂತಹ ವಿವಿಧ ತಿಂಡಿ ತಿನಿಸು ಮಾಡಿಸಿಕೊಂಡು ಆಗಮಿಸಿದ್ದರು. ಕೋಸು, ಬದನೆ, ತೆಂಗಿನಕಾಯಿ, ಪಪ್ಪಾಯಿ, ಕೊತ್ತಂಬರಿ, ವಿವಿಧ ತರಕಾರಿ, ಸೊಪ್ಪುಗಳನ್ನು ತಂದಿದ್ದರು. ಎಲ್ಲವನ್ನು ಅಚ್ಚುಕಟ್ಟಾಗಿ ಒಂದೆಡೆ ಜೋಡಿಸಿ ವ್ಯಾಪಾರಕ್ಕೆ ಇಳಿದರು. ವ್ಯಾಪಾರಿಗಳನ್ನು ಮೀರಿಸುವಂತೆ ಕೂಗಿಕೊಂಡು ತಮ್ಮದೆ ಆದ ಶೈಲಿಯಲ್ಲಿ ವ್ಯಾಪಾರದಲ್ಲಿ ಮಗ್ನರಾದರು.
ಮನೆಯಿಂದಲೇ ಬಟ್ಟೆ ಬ್ಯಾಗ್ ತರಬೇಕು ಎನ್ನುವುದು ತಿಳಿಯುವುದಿಲ್ಲವೇ, ಪ್ಲಾಸ್ಟಿಕ್ ಹಾನಿಕಾರಕ. ಪರಿಸರ ಸ್ನೇಹಿಯಾಗಿ ಬದುಕಲು ಮುಂದಾಗಬೇಕು ಎಂದು ಪ್ರಶ್ನಿಸಿದರು. ಕೆಲವು ಗಂಟೆ ನಡೆದ ಮಿನಿ ವ್ಯಾಪಾರ ಮಾರುಕಟ್ಟೆಯಲ್ಲಿ ಎಲ್ಲ ವಸ್ತುಗಳನ್ನು ಮಕ್ಕಳು ಮಾರಾಟ ಮಾಡಿ ಖುಷಿಪಟ್ಟರು.