ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಸಂಯುಕ್ತ ಕಾಲೇಜಿನಲ್ಲಿ ಶನಿವಾರ ಸಂಜೆ ಆಯೋಜಿಸಲಾಗಿದ್ದ ಕ್ರೀಡಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸೋಮವಾರಪೇಟೆ ಕುಶಾಲನಗರ ತಾಲೂಕುಗಳಲ್ಲಿ ಮಡಿಕೇರಿ ಜನಪ್ರಿಯ ಶಾಸಕ ಡಾ.ಮಂತರ್ಗೌಡ ಅವರ ನಿರ್ದೇಶನ ಮತ್ತು ಉತ್ತೇಜನದ ಮೇರೆಗೆ ಆರು ಶ್ರೇಷ್ಠಗುಣ ಮಟ್ಟದ ವಾಲಿಬಾಲ್ ಮೈದಾನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.ಸೋಮವಾರಪೇಟೆ ಜಯವೀರ ಮಾತೆ ದೇವಾಲಯದ ಧರ್ಮಗುರುಗಳಾದ ರೆ.ಪಾ.ಅವಿನಾಶ್ ಮಾತನಾಡಿ, ಸಂತೋಷವನ್ನು ಅಂಗಡಿಯಲ್ಲಿ ಖರೀದಿಸಲು ಆಗುವುದಿಲ್ಲ. ಸಂತೋಷವನ್ನು ನಮ್ಮೊಳಗೆ ಉಳಿಸಿಕೊಳ್ಳಬೇಕಾದರೆ ನಾವು ದೈಹಿಕವಾಗಿ ಸದೃಢರಾಗಿರಬೇಕು. ದೈಹಿಕವಾಗಿ ಸದೃಢರಾಗಿಬೇಕಾದರೆ ಕ್ರೀಡೆ ಅತ್ಯವಶ್ಯಕ ಪಠ್ಯ ವಿಷಯಗಳಲ್ಲಿ ಸಾಧಿಸಿದ ಸಾಧನೆಯನ್ನು ಕ್ರೀಡಾಕ್ಷೇತ್ರದಲ್ಲಿ ಸಾಧಿಸಬಹುದು ಎಂಬುದನ್ನು 18 ವರ್ಷದ ಬಾಲಕ ಜಿ.ಬುಟ್ಟೇಶ್ ಸಾಧಿಸಿ ತೋರಿಸಿದ್ದಾನೆ. ಆತನ ತಂದೆ ತನ್ನ ವೃತ್ತಿಯನ್ನೇ ಮರೆತು ಮಗನ ಭವಿಷ್ಯಕ್ಕಾಗಿ ತ್ಯಾಗ ಮಾಡಿದ್ದಾರೆಂದು ಅವರು ಬಣ್ಣಿಸಿದರು.
ಮಕ್ಕಳ ಮೇಲೆ ತಮ್ಮ ಕನಸುಗಳನ್ನು ಏರುವ ಮೂಲಕ ಪೋಷಕರು ತಮ್ಮ ಸ್ವಾರ್ಥ ಮತ್ತು ತಪ್ಪನ್ನು ಪ್ರದರ್ಶಿಸುತ್ತಿದ್ದಾರೆಂದು ಫಾ.ವಿಜಯಕುಮಾರ್ ವಿಷಾದಿಸಿದರು.
ಸಮಾರಂಭದ ವೇದಿಕೆಯಲ್ಲಿ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಜೋವಿಟಾ ವಾಸ್ , ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸೇಲ್ವರಾಜ್ ಹಾಗೂ ಸಹ ಶಿಕ್ಷಕರು ಇದ್ದರು.ಕ್ರೀಡಾ ಸಮಾರಂಭದ ಮೊದಲಿಗೆ ಧ್ವಜಾರೋಹಣ ನಡೆಸಿ ಪಾರಿವಾಳವನ್ನು ಹಾರಿ ಬಿಡುವ ಮೂಲಕ ಸಮಾರಂಭಕ್ಕೆ ಅತಿಥಿಗಳು ಚಾಲನೆ ನೀಡಿದರು.
ಶಾಲಾ ಮಕ್ಕಳಿಂದ ನಡೆಸಿದ ವ್ಯಾಯಾಮ, ನೃತ್ಯ ಹಾಗೂ ಸಾಹಸ ಪ್ರದರ್ಶನಗಳು ನೆರೆದಿದ್ದ ಪೋಷಕರ ಹಾಗೂ ಸಾರ್ವಜನಿಕರು ಮನಸೂರೆಗೊಳಿಸಿತ್ತು.