ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜ್‌ ಪ್ರೌಢಶಾಲೆ ವಿಭಾಗದಲ್ಲಿ ಮಕ್ಕಳ ದಿನಾಚರಣೆ

KannadaprabhaNewsNetwork |  
Published : Nov 15, 2024, 12:39 AM IST
23 | Kannada Prabha

ಸಾರಾಂಶ

ಸುಂಟಿಕಪ್ಪ ಸರ್ಕಾರಿ ಪ.ಪೂ.ಕಾಲೇಜ್‌ ಪ್ರೌಢಶಾಲಾ ವಿಭಾಗದಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಪರ್ಧೆಗಳ ವಿಜೇತರಿಗೆ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಗೌರವ ಸಲಹೆಗಾರ ಕೆ. ತಿಮ್ಮಪ್ಪ ಬಹುಮಾನ ವಿತರಿಸಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಉತ್ತಮ ನಾಳೆಗಳನ್ನು ಸೃಷ್ಟಿಸುವ ಜವಾಬ್ದಾರಿ ಮಕ್ಕಳ ಕೈಯ್ಯಲ್ಲಿದ್ದು, ಮಕ್ಕಳನ್ನು ಚೆನ್ನಾಗಿ ಪೋಷಿಸಿದಾಗ, ಗುಣಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಇದು ಸಾಧ್ಯ ಎಂದು ಕುಶಾಲನಗರ ತಾಲೂಕು ಪಕರ್ತಕರ್ತರ ಸಂಘದ ಗೌರವ ಸಲಹೆಗಾರ ಕೆ. ತಿಮ್ಮಪ್ಪ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿನ ಸರ್ಕಾರಿ ಪ.ಪೂ.ಕಾಲೇಜ್‌ ಪ್ರೌಢಶಾಲಾ ವಿಭಾಗದಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಇಂದಿನ ಮಕ್ಕಳೇ ನಾಳಿನ ನಾಡಿನ ಶಿಲ್ಪಿಗಳಾಗಿದ್ದು, ಇಡೀ ಜಗತ್ತು ನಿಮ್ಮ ಕೈಯ್ಯಲ್ಲಿದೆ. ಆದ್ದರಿಂದ ನಗು, ಆಟದ ಜೊತೆಗೆ ಮನವಿಟ್ಟು ಕಲಿತು ದೇಶದ ಉತ್ತಮ ನಾಗರಿಕರಾಗಬೇಕು. ಕಷ್ಟಪಟ್ಟು ಓದಿ ಸಾಧನೆ ಮಾಡಿದ ಮಹನೀಯರು. ನಮಗೆ ಮಾದರಿಯಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ಮಾತನಾಡಿ, ಮಹನೀಯರ ದಿನಾಚರಣೆಗಳಿಂದ ಅವರು ಮಾಡಿರುವ ಸಾಧನೆಗಳನ್ನು ಅರಿತು ಅವರಂತೆ ನಡೆಯಲು ಪ್ರೇರಣೆ ಸಿಗುತ್ತದೆ ಎಂದರು.

ಶಿಕ್ಷಕಿ ಚಿತ್ರಾ ಸ್ವಾಗತಿಸಿದರು. ಶಿಕ್ಷಕಿ ಲಿಯೋನಾ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಪ್ರಕಾಶ್ ವಂದಿಸಿದರು.

ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಿ.ಸಿ.ದಿನೇಶ್, ಪ್ರಧಾನ ಕಾರ್ಯದರ್ಶಿ ಎಂ.ಬಿ.ವಿನ್ಸೆಂಟ್, ನಿರ್ದೇಶಕ ಆಲ್ಫ್ರೆಡ್ ಡಿಸೋಜ, ಸಹ ಶಿಕ್ಷಕಿ ಶಾಂತಾ ಹೆಗಡೆ ಹಾಜರಿದ್ದು ಬಹುಮಾನ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಜ್ರ, ಚಿನ್ನ ಪತ್ತೆಗೆ 6.71 ಲಕ್ಷ ಹೆಕ್ಟೇರ್‌ ಭೂ ಗುರುತು
ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ