ಚಿತ್ರಕಲೆಯಲ್ಲಿ ಅರಳಿದ ಮಕ್ಕಳ ಪರಿಸರ ಪ್ರಜ್ಞೆ

KannadaprabhaNewsNetwork |  
Published : Dec 09, 2025, 12:30 AM IST
ಕೆ ಕೆ ಪಿ ಸುದ್ದಿ 01: ನಗರದ ಬ್ಲಾಸಮ್ ಶಾಲೆಯಲ್ಲಿ ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ವತಿಯಿಂದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ತಾಲ್ಲೂಕಿನ ವಿವಿಧ ಶಾಲಾ ಮಕ್ಕಳು ಹಾಗೂ ಗಣ್ಯರು ಭಾಗವಹಿಸಿದ್ದರು.  | Kannada Prabha

ಸಾರಾಂಶ

ಕನಕಪುರ: ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ‌ ನ್ಯೂಸ್ ವತಿಯಿಂದ ಬ್ಲಾಸಮ್ ಶಾಲೆಯಲ್ಲಿ ಕನಕಪುರ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಸೋಮವಾರ ಯಶಸ್ವಿಯಾಗಿ ನೆರೆವೇರಿತು.

ಕನಕಪುರ: ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ‌ ನ್ಯೂಸ್ ವತಿಯಿಂದ ಬ್ಲಾಸಮ್ ಶಾಲೆಯಲ್ಲಿ ಕನಕಪುರ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಸೋಮವಾರ ಯಶಸ್ವಿಯಾಗಿ ನೆರೆವೇರಿತು.

ಕನ್ನಡ ಪ್ರಭ ಪತ್ರಿಕೆ ಹಿರಿಯ ವರದಿಗಾರ ಎಂ.ಅಪ್ರೋಜ್ ಖಾನ್ ಪ್ರಾಸ್ತಾವಿಕವಾಗಿ ಮಾತನಾಡಿ, ಶಾಲಾ ಮಕ್ಕಳಲ್ಲಿರುವ ಸೃಜನಾತ್ಮಕ ಮತ್ತು ಕಲಾತ್ಮಕ ಪ್ರತಿಭೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಗುರುತಿಸಲು ಕನ್ನಡಪ್ರಭ ಪತ್ರಿಕೆ ವೇದಿಕೆ ಕಲ್ಪಿಸುವುದು ಚಿತ್ರಕಲೆಯ ಪ್ರಮುಖ ಉದ್ದೇಶವಾಗಿದೆ. ಹಾಗಾಗಿ ಮಕ್ಕಳು ಸ್ಪರ್ಧೆಯ ಸೂಚನೆಗಳನ್ನು ಪಾಲನೆ ಮಾಡಿ ಸ್ಪರ್ಧೆಯಲ್ಲಿ ವಿಜೇತರಾಗಿ ಜಿಲ್ಲಾ‌ ಮತ್ತು ರಾಜ್ಯಮಟ್ಟವನ್ನು ಪ್ರತಿನಿಧಿಸುವಂತೆ ತಿಳಿಸಿದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸತೀಶ್ ಮಾತನಾಡಿ, ಇಂದಿನ ದಿನಗಳಲ್ಲಿ ಪತ್ರಿಕೆಗಳನ್ನು ಓದುವ ಅಭ್ಯಾಸ ಕಡಿಮೆ ಆಗುತ್ತಿದ್ದು, ದೃಶ್ಯ ಮಾಧ್ಯಮದ ಹಾವಳಿಯಲ್ಲಿ ಜನ ಸಾಮಾನ್ಯರು ಓದುವ ಸಮಯವನ್ನು ಕಳೆದುಕೊಂಡಿದ್ದಾರೆ. ಇಂತಹ ಸಮಯದಲ್ಲಿ ಪ್ರತಿನಿತ್ಯ ಹಲವು ವೈವಿದ್ಯಗಳೊಂದಿಗೆ ಕ್ರಿಯಾತ್ಮಕವಾಗಿ ಹಲವು ವಿಷಯಗಳನ್ನು ಕಟ್ಟಿ ಕೊಡುವ ಕನ್ನಡಪ್ರಭ ಪತ್ರಿಕೆ ಪರಿಸರದ ಬಗೆಗೆ ಕಾಳಜಿ ವಹಿಸಿಕೊಂಡು ಮಕ್ಕಳ ಪ್ರತಿಭೆ ಹೊರತರಲು ಚಿತ್ರಕಲಾ ಸ್ಪರ್ಧೆ ಆಯೋಜಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಕ್ಕಳು ತಮ್ಮ‌ ಮನಸ್ಸಿನಲ್ಲಿರುವ ಪ್ರತಿಬಿಂಬ ಹಾಗೂ ಪರಿಸರದ ಬಗೆಗಿರುವ ಕಾಳಜಿಯನ್ನು ಚಿತ್ರಕಲೆಯಲ್ಲಿ ಬಿಡಿಸುವ ಮೂಲಕ ತಾಲೂಕು ಮಟ್ಟದಲ್ಲಿ ಆಯ್ಕೆಯಾಗಿ, ಜಿಲ್ಲಾ‌ ಮತ್ತು ರಾಜ್ಯ ಮಟ್ಟದಲ್ಲಿ ಕನಕಪುರ ತಾಲೂಕಿನ ಕೀರ್ತಿಯನ್ನು ಪಸರಿಸಿ ಎಂದು ಸ್ಪರ್ಧಿಗಳಿಗೆ ಶುಭ ಕೋರಿದರು.

ತೀರ್ಪುಗಾರ ರಾಜೇಶ್ ದೇಸಾಯಿ ಮಾತನಾಡಿ, ಪರಿಸರ, ಸಾಲುಮರದ ತಿಮ್ಮಕ್ಕ, ವನ್ಯಜೀವಿ ಸಂರಕ್ಷಣೆ ವಿಷಯಗಳ ಬಗ್ಗೆ ನಡೆಯುತ್ತಿರುವ ಸ್ಪರ್ಧೆಯಲ್ಲಿ ವಿಜೇತರನ್ನು ವಿಷಯ, ಕ್ರಿಯಾತ್ಮಕತೆ, ಬಣ್ಣಗಳ ಬಳಕೆ ಮತ್ತು ನೀಟ್ ನೆಸ್ ವಿಷಯಗಳನ್ನು ಪರಿಗಣಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದು ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಬ್ಲಾಸಂ‌ ಶಾಲೆಯ ಪ್ರಾಂಶುಪಾಲೆ ಗಂಗಾಂಬಿಕಾ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವಿಷಯ ಪರಿವೀಕ್ಷಕ ನಾಗರಾಜು ಎಂ.ಸಿ, ಬಹುಜನ ಜಾಗೃತ ವೇದಿಕೆ ಜಿಲ್ಲಾಧ್ಯಕ್ಷ ನೀಲಿ ರಮೇಶ್, ಕನಕಪುರ ತಾಲೂಕು ವರದಿಗಾರ ಕೆ.ವಿ.ಮನು, ಸಾಹಿತಿ ನಮನ‌ ಚಂದ್ರು, ಡಾ.ಯು.ಸಿ.ಕುಮಾರ್, ಪತ್ರಕರ್ತರಾದ ಕಾ.ಪ್ರಕಾಶ್, ವೆಂಕಟೇಶ್, ತೀರ್ಪುಗಾರರಾದ ರಾಜೇಶ್ ದೇಸಾಯಿ, ಶಾಲಾ ಶಿಕ್ಷಕ ನಾಗೇಂದ್ರ ಉಪಸ್ಥಿತರಿದ್ದರು.

ಕೆ ಕೆ ಪಿ ಸುದ್ದಿ 01:

ಕನಕಪುರದ ಬ್ಲಾಸಮ್ ಶಾಲೆಯಲ್ಲಿ ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ವತಿಯಿಂದ ತಾಲೂಕು ಮಟ್ಟದ ಪ್ರೌಢಶಾಲಾ ಮಕ್ಕಳಿಗೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ತಾಲೂಕಿನ ವಿವಿಧ ಶಾಲಾ ಮಕ್ಕಳು ಹಾಗೂ ಗಣ್ಯರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್ಲರಿಗೂ ಸಮಾನತೆ ತಂದು ಕೊಟ್ಟ ಮಹಾನ್ ವ್ಯಕ್ತಿ ಅಂಬೇಡ್ಕರ್: ಲಿಂಗರಾಜಮೂರ್ತಿ
ಜೇಸಿ ಸಂಸ್ಥೆಯಿಂದ ದೇಶದ ಮುಂದಿನ ನಾಯಕರ ಉದಯ: ಪ್ರಜ್ವಲ್ ಎಸ್. ಜೈನ್