ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು, ಯೂನಿಸೆಫ್ ಜತಗೆಗೂಡಿ ವಿಜ್ಞಾನ ಭವನದಲ್ಲಿ ಹದಿಹರೆಯದವರ ಆರೋಗ್ಯ, ಪೌಷ್ಟಿಕತೆ: ಸಾಂಕ್ರಾಮಿಕವಲ್ಲದ ಕಾಯಿಲೆ ಮತ್ತು ರಸ್ತೆ ಸುರಕ್ಷತೆ ಕುರಿತು ರಾಜ್ಯದ ಪತ್ರಕರ್ತರಿಗೆ ಆಯೋಜಿಸಿರುವ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಬದುಕು ಇಂದು ಮುದುಡುತ್ತಿದೆ. ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳು ಬಳಲುತ್ತಿದ್ದಾರೆ. ಅನೇಕ ಮಕ್ಕಳು ಫುಡ್ ಕೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅಲ್ಲಿಯೇ ತಿನ್ನುತ್ತಿದ್ದಾರೆ. ಪೋಷಕರು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಕೆಲಸ ಮಾಡುವುದರಿಂದ ಆರ್ಥಿಕತೆ ವೃದ್ಧಿಯಾಗಬಹುದು. ಆದರೆ ಗಂಭೀರ ಕಾಯಿಲೆಯಿಂದ ಬಳಲುವಂತಾಗಿದೆ. ನಾವು ಸೇವಿಸುವ ಆಹಾರ ಉತ್ಕೃಷ್ಟವಾಗಿರಬೇಕು. ಕೆಲವೊಂದು ಪ್ರಮುಖ ಅಂಶಗಳನ್ನು ಇಟ್ಟುಕೊಂಡು ಸರ್ವೆ ಮಾಡಬೇಕು ಎಂದರು.ಅನೇಕ ಕೆಲಸಗಳ ಕುರಿತು ಯೂನಿಸೆಫ್ ಬೆಳಕು ಚೆಲ್ಲುತ್ತದೆ. ಪತ್ರಿಕೋದ್ಯಮ ಬಾಲಪರಾಧದ ಬಗ್ಗೆಯೂ ಮಾಹಿತಿ ನೀಡುತ್ತಿದೆ. ಧ್ವನಿ ಇಲ್ಲದವರಿಗೆ ಧ್ವನಿಯಾಗಿದೆ. ಯುವ ಸಮೂಹ ರಸ್ತೆ ಅಪಘಾತದ ಮೂಲಕ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದರು.
ಇನ್ನು ವಾಹನ ಅಪಘಾತದಲ್ಲಿ ಸಾಕಷ್ಟು ಮಂದಿ ಮೃತಪಡುತ್ತಿರುವುದೂ ಕೂಡ ಕಳವಳಕಾರಿ ಸಂಗತಿ. ನಮ್ಮಲ್ಲಿ ಶೇ. 50ರಷ್ಟು ಮಂದಿ ವಿದ್ಯಾವಂತರಲ್ಲ. ವಿದ್ಯಾವಂತರು ಈ ಬಗ್ಗೆ ಆಲೋಚಿಸಬೇಕು. ರಸ್ತೆ ದಾಟುವಾಗ ಸುರಕ್ಷತೆ ನಿಯಮ ಪಾಲಿಸುವುದಿಲ್ಲ. ಹೆಲ್ಮೆಟ್ ಧರಿಸದೆ, ಮೊಬೈಲ್ ನಲ್ಲಿ ಮಾತನಾಡಿಕೊಂಡು ವಾಹನ ಚಾಲನೆ ಮಾಡುವುದರಿಂದಲೂ ಸಾಕಷ್ಟು ತೊಂದರೆ ಆಗುತ್ತದೆ ಎಂದರು.
ಅನೇಕ ಸವಾಲು ಎದುರಿಸುತ್ತಿದ್ದಾರೆ. 35ರಷ್ಟು ಐದು ವರ್ಷದೊಳಗಿನ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಜಂಕ್ ಫುಡ್ ಸೇವನೆಯಿಂದ ಹೆಚ್ಚಿನ ಮಕ್ಕಳು ಸ್ಥೂಲಕಾಯದಿಂದ ಬಳಲುತ್ತಿದ್ದಾರೆ. ವ್ಯಾಯಾಮ, ಚಟುವಟಿಕೆ ಇಲ್ಲದ ಜೀವನ ನಡೆಸುತ್ತಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ಮುಂತಾದ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದರು.
ವಿಭಾಗದ ಮುಖ್ಯಸ್ಥೆ ಪ್ರೊ.ಎನ್. ಮಮತಾ ಮಾತನಾಡಿ, ಪತ್ರಿಕೋದ್ಯಮವು ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚು ಗಮನ ಹರಿಸುತ್ತಿದೆ. ವಿದ್ಯುನ್ಮಾನ ಮಾಧ್ಯಮವೂ ಇದರ ಬಗ್ಗೆ ಪ್ರಚುರಪಡಿಸಬೇಕಿದೆ. ಇಂದಿನ ಚರ್ಚಿತ ವಿಷಯಗಳನ್ನು ಕೇಂದ್ರೀಕರಿಸಬೇಕು ಎಂದರು.
ಎರಡು ದಿನಗಳ ಈ ಕಾರ್ಯಾಗಾರದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ಆಯ್ದ ಪತ್ರಕರ್ತರು ಪಾಲ್ಗೊಂಡಿದ್ದಾರೆ.