ಕನ್ನಡಪ್ರಭ ವಾರ್ತೆ ವಿಜಯಪುರ
ತಮ್ಮ ಜೀವವನ್ನೂ ಲೆಕ್ಕಿಸದೆ ಮಳೆಯಲ್ಲಿಯೇ ಧಾವಿಸಿ ನಾಯಿ ಮರಿಗಳನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ ಈ ಮಕ್ಕಳ ಧೈರ್ಯವನ್ನು ಎಲ್ಲರೂ ಮೆಚ್ಚಿದ್ದಾರೆ. ಜತೆಗೆ ಮಕ್ಕಳ ಕರುಣೆಯಿಂದಾಗಿ ಐದು ಮುಗ್ಧ ಜೀವಗಳು ಬದುಕುಳಿದಿವೆ. ಮಕ್ಕಳ ಈ ಸಾಹಸ ಕಾರ್ಯದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲರ ಪ್ರಶಂಸೆಗೆ ಪಾತ್ರವಾಗಿವೆ.ಈ ಭೂಮಿ ಮೇಲೆ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕು ಇದೆ. ಕಷ್ಟದಲ್ಲಿರುವ ಪ್ರತಿ ಜೀವಿಯನ್ನು ರಕ್ಷಿಸಿ, ಬದುಕು ಕಲ್ಪಿಸುವುದೇ ನಿಜವಾದ ಮಾನವೀಯತೆ. ಅಂತ ಮಾನವೀಯತೆಯನ್ನು ಮೆರೆದ ಈ ಪುಟ್ಟ ಪುಟಾಣಿಗಳ ಕಾರ್ಯ ಶ್ಲಾಘನೀಯ. ರಾಜ್ಯ ಸಾರಿಗೆ ಬಸ್ಗಳ ಹಿಂಭಾಗದ ಗಾಜುಗಳ ಮೇಲೆ ಪ್ರಾಣಿಗಳ ಮೇಲೆ ಕರುಣೆ ಇರಲಿ ಎನ್ನುವ ಘೋಷವಾಕ್ಯ ಅಕ್ಷರಶಃ ಸತ್ಯವಾಗಿಸಿದವರು ಈ ನಮ್ಮ ಹೆಮ್ಮೆಯ ಪುಟಾಣಿಗಳು.
-ಡಾ.ಅಶ್ವಿನಿ ಹಿರೇಮಠ, ಮೆದುಳು ಆ್ಯಂಡ್ ನರರೋಗ ತಜ್ಞರು, ಜೀವನಜ್ಯೋತಿ ಹೃದಯ ಮತ್ತು ಮೆದುಳಿನ ಕ್ಲಿನಿಕ್ ವಿಜಯಪುರ.