ಹದಿಹರೆಯದಲ್ಲಿ ಮಕ್ಕಳು ಜಾಗ್ರತೆ ವಹಿಸಬೇಕು: ವೈ.ಎಂ.ಲಲಿತ ಸಲಹೆ

KannadaprabhaNewsNetwork |  
Published : Jun 12, 2026, 01:45 AM IST
 ನರಸಿಂಹರಾಜಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಮೂಡಬಾಗಿಲು ಜ್ಞಾನ ಗಂಗೋತ್ರಿ  ಪ್ರೌಢ ಶಾಲೆಯಲ್ಲಿ ನಡೆದ ಮುಂಗಾರು ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಎಚ್.ಎಸ್.ಕೃಷ್ಣಮೂರ್ತಿ ಉದ್ಘಾಟಿಸಿದರು. | Kannada Prabha

ಸಾರಾಂಶ

ನರಸಿಂಹರಾಜಪುರ ಮಕ್ಕಳು ಹದಿ ಹರೆಯದಲ್ಲಿ ತುಂಬಾ ಜಾಗ್ರತೆ ವಹಿಸಬೇಕು. ಪೋಷಕರು ಸಹ ಹದಿಹರೆಯದ ಮಕ್ಕಳ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಂ.ಲಲಿತ ಸಲಹೆ ನೀಡಿದರು.

- ಮೂಡಬಾಗಿಲು ಜ್ಞಾನ ಗಂಗೋತ್ರಿ ಪ್ರೌಢಶಾಲೆಯಲ್ಲಿ ಮುಂಗಾರು ಸಾಹಿತ್ಯ ಸಂಭ್ರಮ

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ಮಕ್ಕಳು ಹದಿ ಹರೆಯದಲ್ಲಿ ತುಂಬಾ ಜಾಗ್ರತೆ ವಹಿಸಬೇಕು. ಪೋಷಕರು ಸಹ ಹದಿಹರೆಯದ ಮಕ್ಕಳ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಂ.ಲಲಿತ ಸಲಹೆ ನೀಡಿದರು.

ಮಂಗಳವಾರ ಮೂಡಬಾಗಿಲು ಜ್ಞಾನ ಗಂಗೋತ್ರಿ ಪ್ರೌಢ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ಮುಂಗಾರು ಸಾಹಿತ್ಯ ಸಂಭ್ರಮದಲ್ಲಿ ಮಕ್ಕಳಲ್ಲಿ ಮಾನಸಿಕ ಮತ್ತು ದೈಹಿಕ ಆರೋಗ್ಯ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ, ಆಹಾರ ಕ್ರಮ, ಸ್ವಚ್ಛತೆ ಕಲಿಸಬೇಕು.ಮಳೆಗಾಲ, ಬೇಸಿಗೆ ಕಾಲ ಹಾಗೂ ಚಳಿಗಾಲದಲ್ಲಿ ಧರಿಸುವ ಉಡುಪು, ಆಹಾರದ ಬಗ್ಗೆ ತಿಳುವಳಿಕೆ ನೀಡಬೇಕು ಎಂದರು.

ಸಭೆ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಸಾಪ ಅಧ್ಯಕ್ಷ ಪೂರ್ಣೇಶ್ ಮಾತನಾಡಿ, ಮಕ್ಕಳು ತಂದೆ,ತಾಯಿ ಹಾಗೂ ಗುರು ಹಿರಿಯರಿಗೆ ಗೌರವಿಸುವ ಕೆಲಸ ಮಾಡಬೇಕು. ಕನ್ನಡ ಶಾಲೆ ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಸರ್ಕಾರಿ ಶಾಲೆ ಆರಂಭದ ದಿನ ಮಕ್ಕಳನ್ನು ಗೌರವದಿಂದ, ಸಂಭ್ರಮದಿಂದ ಬರಮಾಡಿಕೊಂಡಿರುವುದು ಸಂತಸದ ವಿಷಯ ಎಂದರು. ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಖಜಾಂಚಿ ಬಿ.ಎಸ್.ಆಶೀಶ್ ಕುಮಾರ್ ಮಾತನಾಡಿ ಹದಿಹರೆಯದ ವಯಸ್ಸಿನಲ್ಲಿ ಮಾನಸಿಕ ಹಾಗೂ ದೈಹಿಕ ತಿಳುವಳಿಕೆ ಅಗತ್ಯ.

ಜ್ಞಾನ ಗಂಗೋತ್ರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಶ್ರೀಕಾಂತ್ ಮಾತನಾಡಿ ಶಾಲಾ ಅಭಿವೃದ್ಧಿ ಸಮಿತಿಯಿಂದ ನಮ್ಮ ಶಾಲೆಗೆ ಎಲ್ಲಾ ಮೂಲ ಭೂತ ಸೌಕರ್ಯ ಸಿಗುತ್ತಿದೆ. ಕನ್ನಡದ ವಿಷಯಗಳಲ್ಲಿ ಮಕ್ಕಳು ಉತ್ತಮ ಅಂಕ ಪಡೆಯುತ್ತಿದ್ದಾರೆ ಎಂದರು.

ವಿವೇಕಾನಂದ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಎಚ್.ಎಸ್.ಕೃಷ್ಣಮೂರ್ತಿ ಉದ್ಘಾಟಿಸಿದರು. ಸಹ ಶಿಕ್ಷಕರಾದ ಶಕುಂತಳ, ಶಿವಮೂರ್ತಿ, ಸೋಮಶೇಖರ್, ಎಸ್.ಕೆ.ಪ್ರದೀಪ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆತ್ಮವಿಶ್ವಾಸದಿಂದ ಏನನ್ನಾದರೂ ಸಾಧಿಸಲು ಸಾಧ್ಯ: ದರ್ಶನ್
ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮ ರಸ್ತೆ ನಿರ್ಮಾಣ: ಗುಡ್ಡದ ಮಣ್ಣು ಸಾಗಣೆ ಆರೋಪ