ಪೋಕ್ಸೋ ಪ್ರಕರಣದಿಂದ ಮಕ್ಕಳನ್ನು ರಕ್ಷಿಸಬೇಕು: ವಕೀಲ ಮಹಾಲಿಂಗಸ್ವಾಮಿ

KannadaprabhaNewsNetwork |  
Published : Nov 18, 2024, 12:02 AM IST
ವಕೀಲ ಮಹಾಲಿಂಗಸ್ವಾಮಿ ಅವರು ತಿಳಿಸಿದರು. | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಪೋಕ್ಸೋ ಪ್ರಕರಣಗಳಿಂದ ಮಕ್ಕಳನ್ನು ರಕ್ಷಿಸಿ ಕಾಪಾಡಿಕೊಳ್ಳುವುದು ಎಲ್ಲ ಪೋಷಕರ ಕರ್ತವ್ಯವಾಗಿದೆ ಎಂದು ವಕೀಲ ಮಹಾಲಿಂಗಸ್ವಾಮಿ ತಿಳಿಸಿದರು. ಚಾಮರಾಜನಗರದಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ದಿನಾಚರಣೆ, ಕಾನೂನು ಅರಿವು ಕಾರ್ಯಕ್ರಮ । ಮಕ್ಕಳ ಹಕ್ಕುಗಳ ಅರಿವು ಮೂಡಿಸಿ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಪೋಕ್ಸೋ ಪ್ರಕರಣಗಳಿಂದ ಮಕ್ಕಳನ್ನು ರಕ್ಷಿಸಿ ಕಾಪಾಡಿಕೊಳ್ಳುವುದು ಎಲ್ಲ ಪೋಷಕರ ಕರ್ತವ್ಯವಾಗಿದೆ ಎಂದು ವಕೀಲ ಮಹಾಲಿಂಗಸ್ವಾಮಿ ತಿಳಿಸಿದರು.

ನಗರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಭಾನುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಸರೆ ಚಾರಿಟಬಲ್ ಟ್ರಸ್ಟ್ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯ ಜಂಟಿಯಾಗಿ ಹಮ್ಮಿಕೊಂಡ ಇತ್ತೀಚೆಗೆ ನಡೆದ ಮಕ್ಕಳ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೆಣ್ಣುಮಕ್ಕಳು ಪ್ರೀತಿ, ಪ್ರೇಮಕ್ಕೆ ಮರುಳಾಗಿ ಹೆಚ್ಚು ಪೋಕ್ಸೋ ಪ್ರಕರಣಕ್ಕೆ ಕಾರಣವಾಗುತ್ತಿದೆ. ಮಕ್ಕಳನ್ನು ರಕ್ಷಿಸಿ ಸುರಕ್ಷಿತ ವಾತಾವರಣದಲ್ಲಿ ಬೆಳೆಸಲು ಸಹಾಯ ಮಾಡಲು ಪೋಷಕರು, ಶಿಕ್ಷಕರು ಮತ್ತು ಸಮಾಜ ಸಹಕಾರಿಯಾಗಬೇಕು. ಭಾರತದಲ್ಲಿ ಪ್ರತಿ ವರ್ಷ ನವೆಂಬರ್ ೧೪ರಂದು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಮಕ್ಕಳ ದಿನದ ಅಂಗವಾಗಿ ಮಕ್ಕಳ ಹಕ್ಕುಗಳಾದ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷತೆಯ ಅರಿವು ಮೂಡಿಸುವುದು ಅವಶ್ಯವಾಗಿದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಆಸರೆ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಟಿ.ಜೆ.ಸುರೇಶ್ ಮಾತನಾಡಿ, ಪುಟ್ಟಮಕ್ಕಳ ಜೀವನ ತೆರೆದಿಟ್ಟ ಬಿಳಿಯ ಹಾಳೆಯಂತೆ. ಅದರಲ್ಲಿ ನಮಗೆ ಏನು ಬೇಕೋ ಅದನ್ನೇ ಬರೆದುಕೊಳ್ಳಬಹುದು. ಆ ಹಾಳೆಯಲ್ಲಿ ನಮ್ಮ ಸಂಸ್ಕೃತಿ, ಸಂಬಂಧಗಳ ಮೌಲ್ಯ, ನಡವಳಿಕೆ, ಗೌರವ, ಪ್ರಾಮಾಣಿಕತೆ, ಜವಾಬ್ದಾರಿ, ಆರೋಗ್ಯಕರ ಅಭ್ಯಾಸಗಳು, ಆತ್ಮವಿಶ್ವಾಸ, ದೇಶಭಕ್ತಿ ಎಂಬ ಪಾಠಗಳನ್ನು ಬರೆದು ಒಳ್ಳೆಯ ಸಂಸ್ಕಾರದ ಛಾಯೆಯನ್ನು ಮೂಡಿಸುತ್ತ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವ ಜವಾಬ್ದಾರಿ, ಕರ್ತವ್ಯ ನಮ್ಮ ಮೇಲಿದೆ ಎಂದರು.

ಮಕ್ಕಳ ಹಕ್ಕು ಹಾಗೂ ಶಿಕ್ಷಣದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿ ವರ್ಷ ನವೆಂಬರ್ ೧೪ ರಂದು ಭಾರತದಲ್ಲಿ ಮಕ್ಕಳ ದಿನ ಆಚರಿಸಲಾಗುತ್ತದೆ. ವಿಶ್ವಸಂಸ್ಥೆ ನ.೨೦ಕ್ಕೆ ಮಕ್ಕಳ ದಿನ ಆಚರಿಸಿದರೂ ಭಾರತದಲ್ಲಿ ನವೆಂಬರ್ ೧೪ರಂದೇ ಮಕ್ಕಳ ದಿನ ಆಚರಿಸಲಾಗುತ್ತದೆ. ಮಕ್ಕಳು ಶಿಕ್ಷಣಕ್ಕೆ ಹೆಚ್ಚು ಆದ್ಯತೆ ಕೊಡಬೇಕು. ಪ್ರತಿಯೊಬ್ಬರೂ ಜೀವನದಲ್ಲಿ ಗುರಿಯನ್ನು ಇಟ್ಟುಕೊಳ್ಳಬೇಕು. ತಂದೆ ತಾಯಿಯ ಮಾತನ್ನು ಕೇಳುವ ಮೂಲಕ ಉತ್ತಮ ಜೀವನ ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.

ನಿಲಯ ಪಾಲಕಿ ಮಮತಾ ಮಾತನಾಡಿ, ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಬೇರೆ ಯವುದೇ ಆಮಿಷಕ್ಕೆ ಒಳಗಾಗದೆ ಓದುವ ಅಭ್ಯಾಸ ಮಾಡಿ ನಿಮ್ಮ ತಂದೆ ತಾಯಿಗೆ ಒಳ್ಳೆಯ ಹೆಸರು ಬರುವ ಹಾಗೆ ಜೀವನವನ್ನು ನಡೆಸಿ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಅಶ್ವಿನಿ, ಅವರು ವಿದ್ಯಾರ್ಥಿಗಳು ಸುಸಂಸ್ಕೃತರಾಗಲು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಗುಣಾತ್ಮಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಕಾನೂನಿನ ಸಲಹೆ ಮತ್ತು ಮೊಬೈಲ್ ಬಳಕೆಯನ್ನು ಒಳ್ಳೆಯ ವಿಷಯಕ್ಕೆ ಮಾತ್ರ ಬಳಸಿ ಎಂದರು.

ವಿದ್ಯಾರ್ಥಿನಿಲಯದ ಸುಧಾಮಣಿ, ನಾಗೇಂದ್ರ, ಮಮತಾ, ಸುಚಿತ್ರ, ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು