ರೋಟರಿ ಮಿಸ್ಟಿ ಹಿಲ್ಸ್ ನಿಂದ ಅ.5 ರಂದು ಮಕ್ಕಳ ದಸರಾ

KannadaprabhaNewsNetwork |  
Published : Sep 17, 2024, 12:48 AM IST
ಚಿತ್ರ : ಲೋಗೊ  | Kannada Prabha

ಸಾರಾಂಶ

ಕೊಡಗು ಜಿಲ್ಲೆಯ ಮಕ್ಕಳಿಗಾಗಿ ದಸರಾ ಸ್ಪರ್ಧೆಗಳು ಅ. 5ರಂದು ಶನಿವಾರ ಬೆಳಗ್ಗೆ 9.30 ಗಂಟೆಯಿಂದ ಗಾಂಧಿ ಮೈದಾನದಲ್ಲಿ ಆರಂಭವಾಗಲಿದೆ. ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಠ 5 ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಅ. 5 ರಂದು ಶನಿವಾರ ನಗರದ ಗಾಂಧಿ ಮೈದಾನದಲ್ಲಿ 11 ನೇ ವರ್ಷದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಮತ್ತು ಹಾಗೂ ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಮಕ್ಕಳ ದಸರಾ ಸ್ಪರ್ಧೆಗಳು ಅ. 5 ರಂದು ಶನಿವಾರ ಬೆಳಗ್ಗೆ 9.30 ಗಂಟೆಯಿಂದ ಗಾಂಧಿ ಮೈದಾನದಲ್ಲಿ ಪ್ರಾರಂಭವಾಗಲಿದೆ.

ಮಕ್ಕಳ ಸಂತೆ ಮತ್ತು ಮಕ್ಕಳ ಅಂಗಡಿ - ಎಸ್ ಎಸ್ ಎಲ್ ಸಿ ಒಳಗಿನ ವಿದ್ಯಾರ್ಥಿಗಳಿಗಾಗಿ ಆಯೋಜಿತ ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಠ 5 ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಸಂತೆಯಲ್ಲಿ ಗ್ರಾಮೀಣ ಪದಾರ್ಥಗಳ ಮಾರಾಟಕ್ಕೆ ಆದ್ಯತೆ ಇದೆ. ಮಕ್ಕಳ ಅಂಗಡಿಯಲ್ಲಿ ಗರಿಷ್ಟ ಇಬ್ಬರು ಸ್ಪಧಿ೯ಗಳಿಗೆ ಅವಕಾಶವಿದೆ.

ಮಕ್ಕಳ ಮಂಟಪ - 10 ನಿಮಿಷದ ಪ್ರದರ್ಶನಾವಧಿಯುಳ್ಳ ಮಂಟಪ ಸ್ಪರ್ಧೆಯಲ್ಲಿ ಒಂದು ತಂಡದಲ್ಲಿ 6 ಮಕ್ಕಳು ಪಾಲ್ಗೊಳ್ಳಬಹುದು. ಯಾವುದೇ ಕಾರಣಕ್ಕೂ ಮಂಟಪದಲ್ಲಿ ವಿದ್ಯುತ್ ಮತ್ತು ಬೆಂಕಿಯಂಥ ಅಪಾಯಕಾರಿ ವಸ್ತುಗಳನ್ನು ಬಳಸಿ ಪ್ರದರ್ಶನ ನೀಡುವಂತಿಲ್ಲ,

ಛದ್ಮವೇಷ ಸ್ಪರ್ಧೆ - ಎಲ್ ಕೆ.ಜಿ. ಮತ್ತು ಯುಕೆಜಿ ವಿದ್ಯಾರ್ಥಿಗಳ ವಿಭಾಗ, 1 ನೇ ತರಗತಿಯಿಂದ 4 ನೇ ತರಗತಿ, 5 ರಿಂದ 7 ನೇ ತರಗತಿಗಳ ಮಕ್ಕಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಛದ್ಮವೇಶ ಸ್ಪರ್ಧೆಗಳು ನಡೆಯಲಿದ್ದು, ವಸ್ತ್ರಾಲಂಕಾರಕ್ಕೆ ಆದ್ಯತೆಯಿದೆ.

ಕ್ಲೇ ಮಾಡೆಲಿಂಗ್ - 5 ರಿಂದ 7 ನೇ ತರಗತಿ ಹಾಗೂ 8 ರಿಂದ 10 ನೇ ತರಗತಿ ವಿದ್ಯಾಥಿ೯ಗಳಿಗಾಗಿ ಕ್ಲೇ ಮಾಡೆಲಿಂಗ್ ಸ್ಪರ್ಧೆ ಆಯೋಜಿತವಾಗಿದೆ.

ಅ. 5 ರಂದು ಶನಿವಾರ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸ್ಪರ್ಧಿಗಳು ಬೆಳಗ್ಗೆ 9 ಗಂಟೆಗೆ ಸರಿಯಾಗಿ ಹಾಜರಿರಬೇಕು. ಎಲ್ಲ ಸ್ಪರ್ಧೆಗಳು ಬೆಳಗ್ಗೆ 9.30 ಗಂಟೆಯಿಂದ ಪ್ರಾರಂಭವಾಗುತ್ತದೆ.

ಹೆಸರು ನೋಂದಾಯಿಸಲು ಸಂಪರ್ಕ ಸಂಖ್ಯೆಗಳು - ಮಕ್ಕಳ ಸಂತೆ, - ದಿವ್ಯಾ ಚೇತನ್ 9538101863, ಚಂದ್ರಿಕಾರಾಜು - 9986518742, ಮಕ್ಕಳಿಂದ ಅಂಗಡಿ ಸ್ಪರ್ಧೆ - ಶಪಾಲಿ ರೈ - 9741523484, ರಶ್ಮಿ ಪ್ರವೀಣ್ - 9902362038, ಮಕ್ಕಳಿಂದ ಮಂಟಪ - ಸವಿತಾ ಅರುಣ್ - 9480003811, ಪ್ರೀತು 8277050366, ಛದ್ಮವೇಶ ಸ್ಪರ್ಧೆ - ನಮಿತಾರೈ 9448976405, ಶಮ್ಮಿ ಪ್ರಭು 8088570167 ಕ್ಲೇ ಮಾಡೆಲಿಂಗ್ - ಗಾನಾಪ್ರಶಾಂತ್ - 9449713748, ಪಲ್ಲವಿ ಪ್ರಸಾದ್ 9972963151 , ಈ ಎಲ್ಲಾ ಸ್ಪರ್ಧೆಗಳಿಗೆ ಹೆಸರು ನೋಂದಾಯಿಸಲು ಕೊನೇ ದಿನಾಂಕ ಸೆಪ್ಟೆಂಬರ್ 28 ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!