ಧಾರವಾಡ:
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಕ್ಕಳು ಕೇವಲ ಪುಸ್ತಕ ಓದುವಿಕೆಗೆ ಮಾತ್ರ ಸೀಮಿತವಾಗದೇ ಮಕ್ಕಳ ಕಲ್ಪನೆ, ಸೃಜನಶೀಲತೆ, ಭಾಷಾ ಕೌಶಲ್ಯ ಮತ್ತು ಸಂಸ್ಕೃತಿ ಪರಂಪರೆಯ ವೃದ್ಧಿಗೆ ಸಾಹಿತ್ಯವು ಬೇಕು. ಈ ಹಿನ್ನೆಲೆಯಲ್ಲಿ ಸಂಸ್ಥೆ ವತಿಯಿಂದ ಪ್ರತಿ ವರ್ಷ ತನ್ನ ಅಡಿಯ ಶಾಲೆಗಳಲ್ಲಿ ಮಕ್ಕಳ ಸಮ್ಮೇಳನ ಆಯೋಜಿಸುತ್ತಿದ್ದು ಈ ಬಾರಿಯ ಸಮ್ಮೇಳನವನ್ನು ಕರ್ನಾಟಕ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ ಎಂದರು.
ಗುರುವಾರ ಬೆಳಗ್ಗೆ 8ಕ್ಕೆ ಕಡಪಾ ಮೈದಾನದಿಂದ ಜಿಲ್ಲಾಸ್ಪತ್ರೆ ಮಾರ್ಗವಾಗಿ ಮೆರವಣಿಗೆ ನಡೆಯಲಿದೆ. ಕುಂಭಮೇಳ, ಡೊಳ್ಳು ಕುಣಿತ, ಹೆಜ್ಜೆ ಮೇಳ, ಶಿವಶರಣರ ಗಾಯನ, ವಿವಿಧ ವಾದ್ಯ ಹಾಗೂ ಶರಣರ ಛದ್ಮವೇಷಗಳೊಂದಿಗೆ ಘೋಷಣೆಗಳು ಮೊಳಗಲಿವೆ. ಮೆರವಣಿಗೆ ಹಾಗೂ ನಂತರ ನಡೆಯುವ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಡಿ 18 ಶಾಲಾ-ಕಾಲೇಜುಗಳ ಆಯ್ದ ಮಕ್ಕಳು, ಶಿಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಲಿದ್ದಾರೆ. ಹಿರಿಯ ಸಾಹಿತಿ ಶ್ರೀನಿವಾಸ ವಾಡಪ್ಪಿ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನವನ್ನು ಬೆಳಗ್ಗೆ 9.30ಕ್ಕೆ ಹಿರಿಯ ಸಾಹಿತಿ ಜಯಂತ ಕಾಯ್ಕಿಣಿ ಚಾಲನೆ ನೀಡಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಎಂ.ಎನ್. ಜೋಶಿ ಅಧ್ಯಕ್ಷತೆ ವಹಿಸುತ್ತಾರೆ ಎಂದರು.ಮೂರು ಗೋಷ್ಠಿ:
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಎನ್.ಎಸ್. ಕುಲಕರ್ಣಿ, ವಿಶ್ವನಾಥ ದೇಶಪಾಂಡೆ, ವಸಂತ ಮುರ್ಡೇಶ್ವರ, ಜಿ.ಆರ್. ಭಟ್ ಹಾಗೂ ಎನ್.ಎನ್. ಸವಣೂರ ಇದ್ದರು.