ಚಿನಮಳ್ಳಿ ಬಾಂದಾರು ತಾತ್ಕಾಲಿಕ ರಸ್ತೆ ಕಾಮಗಾರಿ ಆರಂಭ

KannadaprabhaNewsNetwork |  
Published : Oct 27, 2025, 12:00 AM IST
ಫೋಟೋ- ಕಲ್ಲೂರ ಬ್ಯಾರೇಜ | Kannada Prabha

ಸಾರಾಂಶ

ಇತ್ತೀಚೆಗೆ ತಾಲೂಕಿನಲ್ಲಿ ಸುರಿದ ಅಪಾರ ಪ್ರಮಾಣದ ಮಳೆಗೆ ಮತ್ತು ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಭೀಮಾನದಿಗೆ ಬಿಟ್ಟಿರುವುದರಿಂದ ಪ್ರವಾಹಕ್ಕೆ ಚಿನಮಳ್ಳಿ ಮತ್ತು ಜೇವರ್ಗಿ ತಾಲೂಕಿನ ಕಲ್ಲೂರ ಮದ್ಯ ನಿರ್ಮಾಣ ಮಾಡಿರುವ ಬ್ರಿಡ್ಜ್ ಕಂ ಬ್ಯಾರೇಜ್ ಚಿನಮಳ್ಳಿ ಎಡದಂಡೆ ರೈತರ ಜಮೀನು ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಮೂಲಕ ಮಂದೇವಾಲ ಮತ್ತು ನೆಲೋಗಿ ಗ್ರಾಮಕ್ಕೆ‌ ಹೋಗುವ ರಸ್ತೆ ಸಂಪರ್ಕ ಕಡಿತಗೊಂಡಿತ್ತು.

ಕನ್ನಡಪ್ರಭ ವಾರ್ತೆ ಅಫಜಲ್ಪುರ

ಇತ್ತೀಚೆಗೆ ತಾಲೂಕಿನಲ್ಲಿ ಸುರಿದ ಅಪಾರ ಪ್ರಮಾಣದ ಮಳೆಗೆ ಮತ್ತು ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಭೀಮಾನದಿಗೆ ಬಿಟ್ಟಿರುವುದರಿಂದ ಪ್ರವಾಹಕ್ಕೆ ಚಿನಮಳ್ಳಿ ಮತ್ತು ಜೇವರ್ಗಿ ತಾಲೂಕಿನ ಕಲ್ಲೂರ ಮದ್ಯ ನಿರ್ಮಾಣ ಮಾಡಿರುವ ಬ್ರಿಡ್ಜ್ ಕಂ ಬ್ಯಾರೇಜ್ ಚಿನಮಳ್ಳಿ ಎಡದಂಡೆ ರೈತರ ಜಮೀನು ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಮೂಲಕ ಮಂದೇವಾಲ ಮತ್ತು ನೆಲೋಗಿ ಗ್ರಾಮಕ್ಕೆ‌ ಹೋಗುವ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ದಸರಾ ರಜೆ ಮುಗಿಸಿ ವಿದ್ಯಾರ್ಥಿಗಳು ಮರಳಿ ಶಾಲೆಗೆ ಹೋಗಲು ಚಿನಮಳ್ಳಿ ಸೇತುವೆ ಮೂಲಕ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದ ಖಾಸಗಿ ಶಾಲೆಗೆ ಹೋಗಬೇಕಾದರೆ, ಚಿನಮಳ್ಳಿ ಸೇತುವೆ ಮೇಲಿಂದ ನಡೆದುಕೊಂಡು ಹೋಗಬೇಕು. ಈ ರೀತಿ ಮಕ್ಕಳು ಸೇತುವೆ ಮೇಲೆ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಆಯ ತಪ್ಪಿ ಕೆಳಗೆ ಬಿದ್ದರೆ ಜೀವಕ್ಕೆ ಅಪಾಯ ಆಗುವ ಸಾಧ್ಯತೆಯಿದೆ. ಈ ವಿಷಯ ನೋಡಿ ಕನ್ನಡಪ್ರಭ ಪತ್ರಿಕೆಯಲ್ಲಿ ಜೀವ ಕೈಯಲ್ಲಿ ಹಿಡಿದು‌ ಸೇತುವೆ ದಾಟಿದ ಮಕ್ಕಳು ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿ ಮಾಡಿ ಜನಪ್ರತಿನಿಧಿಗಳ ಮತ್ತು ಸಂಬಂದಿಸಿದ ಇಲಾಖೆಯ ಅಧಿಕಾರಿಗಳ ಗಮನ ಸೆಳೆಯಿತು.

ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಶಾಸಕ ಎಂ.ವೈ.ಪಾಟೀಲ ಅವರ ಗಮನಕ್ಕೆ ಬಂದ ತಕ್ಷಣವೇ ಕೆಬಿಜಿಎನ್ಎಲ್ ಅಧಿಕಾರಿಗಳಿಗೆ ಶಾಸಕ ಎಂ ವೈ ಪಾಟೀಲ ಅವರು ನೀವೇನು ಮಾಡ್ತಿರಿ ಗೊತ್ತಿಲ್ಲ, ಕೂಡಲೇ ಇಂದೇ ತಾತ್ಕಾಲಿಕ ಮುರಮ ಹಾಕಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಓಡಾಡಲು ರಸ್ತೆ ಸಂಪರ್ಕ ಕಲ್ಪಿಸಿ ಅನುಕೂಲ ಮಾಡಿಕೊಡಬೇಕು ಎಂದು ಖಡಕ್ ಸಂದೇಶ ನೀಡಿದರು. ಶಾಸಕರ ಆದೇಶಕ್ಕೆ ತಕ್ಷಣವೇ ಎಚ್ಚೆತ್ತುಕೊಂಡ ಕೆಬಿಜಿಎನ್‍ಎಲ್ ಅಧಿಕಾರಿಗಳಾದ ಯು.ಪಿ.ಸೋನಾವಣೆ, ಲಕ್ಷ್ಮಿಕಾಂತ ಬಿರಾದಾರ ಹಾಗೂ ಪಿಎಸ್ಐ ಸಂಗೀತಾ ಶಿಂಧೆ ಸ್ಥಳಕ್ಕೆ ದೌಡಾಯಿಸಿ ಜಮೀನು ಕಳೆದುಕೊಂಡ ರೈತರ ಮನವೊಲಿಸಿ ಗ್ರಾಮಸ್ಥರ ಸಮ್ಮುಖದಲ್ಲಿ ಜೆಸಿಬಿ ಮತ್ತು ಟ್ರ್ಯಾಕ್ಟರ್ ಮೂಲಕ ಮುರಮ್ ರಸ್ತೆ ಕೆಲಸ ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಗ್ರಾಮಸ್ಥರು ಇದ್ದರು.

--------

ಕೆಬಿಜಿಎನ್‍ಎಲ್ ಅಧಿಕಾರಿಗಳ ಜೊತೆಗೆ ಸ್ಥಳಕ್ಕೆ ಭೇಟಿ ನೀಡಿ ಪ್ರವಾಹ ಇಳಿದ ತಕ್ಷಣವೇ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಿ ಎಂದು ಹೇಳಿರುವೆ. ಒಂದು ವಾರದೊಳಗೆ ಸುಮಾರು 20 ಲಕ್ಷ ರುಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಟೆಂಡರ್ ಕರೆಯಲಾಗುತ್ತದೆ. ಅಲ್ಲಿಯವರೆಗೂ ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಓಡಾಡಲು ತಾತ್ಕಾಲಿಕ ಮುರಮ ರಸ್ತೆ ಮಾಡಲು ಸೂಚನೆ ನೀಡಿದ್ದೇನೆ. ಶಾಲಾ ಮಕ್ಕಳು ನಡೆದುಕೊಂಡು ಸೇತುವೆ ದಾಟುವ ಫೋಟೋ ಜೊತೆಗೆ ಮುಂದೆ ಆಗುವ ಅನಾಹುತದ ಬಗ್ಗೆ "ಕನ್ನಡಪ್ರಭ " ಪತ್ರಿಕೆಯಲ್ಲಿ ಸುದ್ದಿ ಬಿತ್ತರಿಸಿ ನಮ್ಮ ಗಮನಕ್ಕೆ ತಂದಿರುವುದು ಶ್ಲಾಘನೀಯ.

ಎಂ.ವೈ.ಪಾಟೀಲ ಶಾಸಕ, ಅಫಜಲ್ಪುರ

PREV

Recommended Stories

ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
ಕೆಆರ್‌ಎಸ್‌ ವರ್ಷದಲ್ಲಿ 3ನೇ ಬಾರಿ ಭರ್ತಿ-ಬೆಂಗಳೂರಿಗಿಲ್ಲ ಜಲ ಸಂಕಷ್ಟ: ಡಿಸಿಎಂ