ತಾಲೂಕಿನ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಸಹಯೋಗದೊಂದಿಗೆ ಈ ಬಾರಿ ಶಾಲಾ ಮಕ್ಕಳಿಗಾಗಿ ವಿಶೇಷವಾಗಿ ಬೇಸಿಗೆ ಶಿಬಿರ ಆಯೋಜಿಸುವ ಮೂಲಕ ಗಮನ ಸೆಳೆಯಲಾಯಿತು.
ಭದ್ರಾವತಿ: ತಾಲೂಕಿನ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಸಹಯೋಗದೊಂದಿಗೆ ಈ ಬಾರಿ ಶಾಲಾ ಮಕ್ಕಳಿಗಾಗಿ ವಿಶೇಷವಾಗಿ ಬೇಸಿಗೆ ಶಿಬಿರ ಆಯೋಜಿಸುವ ಮೂಲಕ ಗಮನ ಸೆಳೆಯಲಾಯಿತು.
ಚಿಣ್ಣರ ಚೆಲುವು ಬೇಸಿಗೆ ಸಡಗರ ಬೇಸಿಗೆ ಶಿಬಿರದ ಅಂಗವಾಗಿ ಶಾಲಾ ಮಕ್ಕಳಿಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ. ಗಂಗಣ್ಣ ಚೆಸ್ ಆಡುವ ಮೂಲಕ ನೆರವೇರಿಸಿದರು. ಚೆಸ್, ಕೇರಂ, ಪೇಂಟಿಂಗ್, ಚರ್ಚಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಪ್ರಭು, ಸಹಾಯಕ ನಿರ್ದೇಶಕ ಎಸ್. ಉಪೇಂದ್ರ, ವ್ಯವಸ್ಥಾಪಕ ಬಾಲರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.