ಹಿಂದು ಮಹಾಗಣಪತಿಯ ಚಿತ್ರದುರ್ಗ ಪ್ರವೇಶ ಇಂದು

KannadaprabhaNewsNetwork |  
Published : Sep 04, 2024, 01:55 AM IST
ಚಿತ್ರದುರ್ಗ ಎರಡನೇ ಪುಟದ ಲೀಡ್  | Kannada Prabha

ಸಾರಾಂಶ

ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆ ಕುರಿತು ಬಜರಂಗದಳದ ಪ್ರಬಂಜನ್ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ರಾಜ್ಯವ್ಯಾಪಿ ಪ್ರಸಿದ್ಧಿ ಪಡೆದಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿ ಸೆ.4 ರಂದು ಬುಧವಾರ ಚಿತ್ರದುರ್ಗ ಪುರ ಪ್ರವೇಶ ಮಾಡಲಿದೆ. ಮೆರವಣಿಗೆ ಮೂಲಕ ತಂದು ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ವಿಶ್ವಹಿಂದು ಪರಿಷತ್-ಬಜರಂಗದಳದ ಇದರ ಜವಾಬ್ದಾರಿ ಹೊತ್ತಿದೆ ಎಂದು ದಕ್ಷಿಣ ಪ್ರಾಂತ ಬಜರಂಗದಳದ ಸಂಚಾಲಕ ಪ್ರಬಂಜನ್ ತಿಳಿಸಿದರು.

ಪಂಚಾಚಾರ್ಯ ಕಲ್ಯಾಣ ಮಂಟಪದ ಪಕ್ಕದಲ್ಲಿ ನಿರ್ಮಾಣವಾಗುತ್ತಿರುವ ವರ್ಣರಂಜಿತ ಗಣಪತಿ ಪ್ರತಿಷ್ಠಾಪನಾ ಪೆಂಡಾಲ್‍ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಶಾವತಾರ ಮಾದರಿಯಲ್ಲಿ ಪೆಂಡಾಲ್ ಕೆಲಸ ಆರಂಭಗೊಂಡಿದ್ದು, ಬುಧವಾರ ಗಣಪತಿ ಪುರ ಪ್ರವೇಶ ಮಾಡಲಿದೆ. ಹಿಂದೂ ಮಹಾಗಣಪತಿ ಎಂದರೆ ದೇಶ ಭಕ್ತಿಯನ್ನು ಹೆಚ್ಚಿಸ ಮೂಲ ಉದ್ದೇಶ. ವರ್ಷದಿಂದ ವರ್ಷಕ್ಕೆ ಭಕ್ತಾಧಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ವಿವಿಧ ಕಲಾ ತಂಡ ವಾದ್ಯಗೋಷ್ಠಿಗಳೊಂದಿಗೆ ಹಿಂದು ಮಹಾಗಣಪತಿಯನ್ನು ಮೆರವಣಿಗೆ ಮೂಲಕ ಪೆಂಡಾಲ್‍ಗೆ ತರಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರತಿಷ್ಠಾಪಿಸುವ ಗಣಪತಿಯಲ್ಲಿ ರಾಷ್ಟ್ರೀಯತೆ, ದೇಶಭಕ್ತಿ, ಸಂಸ್ಕೃತಿ ಬಿಂಬಿಸುವುದು ಕಂಡು ಬಂದಲ್ಲಿ ಅಂತಹ 25 ಗಣಪತಿಗಳಿಗೆ ಬಹುಮಾನ ನೀಡಲಾಗುವುದು. ಗಣಪತಿ ವಿಸರ್ಜನಾ ಸಂಬಂಧ ಸೆ.28 ರಂದು ನಡೆಯುವ ಶೋಭಾಯಾತ್ರೆಯನ್ನು ಬಜರಂಗದಳದ ನೀರಜ್ ತೊಗೇರಿಯಾ ಉದ್ಘಾಟಿಸಲಿದ್ದಾರೆ ಎಂದರು.

ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಬಿ.ನಯನ್ ಮಾತನಾಡಿ, 21 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 26 ರಂದು ಕನಕ ವೃತ್ತದಿಂದ ಹೊರಡುವ ಬೈಕ್ ರ್‍ಯಾಲಿ ನಗರದೆಲ್ಲೆಡೆ ಸಂಚರಿಸಲಿದ್ದು, 28 ರಂದು ಮಹಾಗಣಪತಿಯನ್ನು ವಿಸರ್ಜಿಸಲಾಗುವುದು ಎಂದು ತಿಳಿಸಿದರು.

ಉತ್ಸವ ಸಮಿತಿಯ ಮಾರ್ಗದರ್ಶಕ ಹಾಗೂ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದರಿನಾಥ್ ಮಾತನಾಡಿ, ಗರುಡಾರೂಢ ಪ್ರಭಾವಳಿ ಪೀಠ ಸೇರಿ ಈ ಬಾರಿಯ ಗಣಪತಿ 17 ಅಡಿ ಎತ್ತರದಲ್ಲಿದೆ. ಐದು ಎಲ್ಇಡಿ ವ್ಯವಸ್ಥೆಯಿರುತ್ತದೆ. ಪ್ರತಿನಿತ್ಯ ಬೆಳಗ್ಗೆ 11-45 ರಿಂದ 12-15 ರವರೆಗೆ ಸಂಜೆ 7-45 ರಿಂದ 8-15 ರವರೆಗೆ 13ಕ್ಕೂ ಹೆಚ್ಚು ರೀತಿಯ ಮಹಾ ಮಂಗಳಾರತಿ ನಡೆಯಲಿದೆ. ಹಿಂದೂ ಮಹಾಗಣಪತಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಬೆಳೆಯುವುದಕ್ಕೆ ಸಮಸ್ತ ಭಕ್ತರು ಹಾಗೂ ಸಾರ್ವಜನಿಕರು, ದಾನಿಗಳ ಸಹಕಾರವಿದೆ. ಕಾರ್ಕಳ, ಸಾಗರದವರು ಪೆಂಡಾಲ್ ನಿರ್ಮಿಸುತ್ತಿದ್ದು, ಅಂದಾಜು 16 ರಿಂದ 17 ಲಕ್ಷ ರು. ವೆಚ್ಚವಾಗಲಿದೆ. ಎಲ್ಲವನ್ನು ಪಾರದರ್ಶಕವಾಗಿ ನಿಭಾಯಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಐಶ್ವರ್ಯ ಗ್ರೂಪ್ ಆಫ್ ಹೋಟೆಲಿಸಿ ಶರಣ್, ಬಜರಂಗದಳದ ಜಿಲ್ಲಾ ಸಂಯೋಜಕ ಸಂದೀಪ್, ವಿಶ್ವಹಿಂದೂ ಪರಿಷತ್ ನಗರಾಧ್ಯಕ್ಷ ಈ.ಅಶೋಕ್, ಉಪಾಧ್ಯಕ್ಷ ಜಿ.ಎಸ್.ರಂಗಸ್ವಾಮಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ
ರೈತ ಭವನ ಶಿಥಿಲ, ವಾಸಿಸಲು ಜಟಿಲ!