ಚಂದ್ರಗುತ್ತಿಗೆ ಮೂಲಸೌಕರ್ಯ: ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

KannadaprabhaNewsNetwork |  
Published : Mar 30, 2024, 12:59 AM ISTUpdated : Mar 30, 2024, 12:12 PM IST
ಫೋಟೊ:೨೯ಕೆಪಿಸೊರಬ-೦೪ : ಸೊರಬ ತಾಲೂಕಿನ ಚಂದ್ರಗುತ್ತಿಯ  ಶ್ರೀ ರೇಣುಕಾಂಬಾ ದೇವಿ ಭಕ್ತರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸಲ್ಲಿಸಿದ್ದ ರೂ. ೫೨ ಲಕ್ಷ ರೂ.ಗಳ ಪ್ರಸ್ತಾವನೆಗೆ ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಐತಿಹಾಸಿಕ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ದೇಗುಲದಲ್ಲಿ ಭಕ್ತರಿಗೆ ಶೌಚಾಲಯ ಸೇರಿ ಮೂಲಭೂತ ಸೌಕರ್ಯಗಳಿಗಾಗಿ ಧಾರ್ಮಿಕ ದತ್ತಿ ಇಲಾಖೆಗೆ ಸಲ್ಲಿಸಿದ್ದ ರು. ೫೨ಲಕ್ಷಗಳ ಪ್ರಸ್ತಾವನೆಗೆ ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಸೊರಬ

ಐತಿಹಾಸಿಕ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ದೇಗುಲದಲ್ಲಿ ಭಕ್ತರಿಗೆ ಶೌಚಾಲಯ ಸೇರಿ ಮೂಲಭೂತ ಸೌಕರ್ಯಗಳಿಗಾಗಿ ಧಾರ್ಮಿಕ ದತ್ತಿ ಇಲಾಖೆಗೆ ಸಲ್ಲಿಸಿದ್ದ ರು. ೫೨ಲಕ್ಷಗಳ ಪ್ರಸ್ತಾವನೆಗೆ ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿದರು.

ಶೌಚಾಲಯ ಇಲ್ಲದೆ ರೇಣುಕೆ ಭಕ್ತರ ಮಾನ ಹರಾಜು! ಎಂಬ ಶೀರ್ಷಿಕೆಯಲ್ಲಿ ಜ.೨ರಂದು ಕನ್ನಡಪ್ರಭ ವರದಿ ಮಾಡಿತ್ತು. ವರದಿ ಅನ್ವಯ ಫೆಬ್ರವರಿಯಲ್ಲಿ ರಾಜ್ಯ ಲೋಕಾಯುಕ್ತ ಸ್ಥಳೀಯ ಗ್ರಾ.ಪಂ. ಮತ್ತು ನಾಡಕಚೇರಿಗೆ ಸ್ಪಷ್ಟನೆ ಕೇಳಿ ನೋಟಿಸ್ ಜಾರಿಗೊಳಿಸಿತ್ತು. ಇದರ ಬೆನ್ನಲ್ಲೆ ಧಾರ್ಮಿಕ ದತ್ತಿ ಇಲಾಖೆ ಶೌಚಾಲಯ, ಸ್ನಾನದ ಗೃಹ ಸೇರಿ ಮೂಲಭೂತ ಸಮಸ್ಯೆಗಳಿಗೆ ೫೨ ಲಕ್ಷ ರು.ಗಳ ಪ್ರಸ್ತಾವನೆ ಸಲ್ಲಿಸಿತ್ತು. ಇದರ ಅನ್ವಯ ಧಾರ್ಮಿಕ ದತ್ತಿ ಇಲಾಖೆ ಕೇಂದ್ರ ಸ್ಥಾನಿಕ ಸಹಾಯಕಿ ಕೆ. ಪದ್ಮ ಚಂದ್ರಗುತ್ತಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಹುಣ್ಣಿಮೆ ಮತ್ತು ವಿಶೇಷ ದಿನಗಳಲ್ಲಿ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಾರೆ. ಭಕ್ತರಿಗೆ ಅನುಕೂಲವಾಗುವಂತಹ ವ್ಯವಸ್ಥಿತ ಶೌಚಗೃಹ, ಸ್ನಾನದಗೃಹ, ಕುಡಿಯುವ ನೀರು, ನೆರಳು, ಸೇವಾ ಕೇಂದ್ರಗಳು, ಪಾದರಕ್ಷೆ ಬಿಡುವ ಸ್ಥಳ, ಕೇಶಮುಂಡನೆ, ಮಹಿಳೆಯರಿಗೆ ಬಟ್ಟೆ ಬದಲಿಸಲು ಕೊಠಡಿಗಳು ಸೇರಿ ಇನ್ನು ಅಗತ್ಯ ಮೂಲಭೂತ ಸೌಕರ್ಯಗಳ ಕಲ್ಪಿಸುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖಾ ಅಧಿಕಾರಿಗಳು ಅಂಬೆಯ ದೇವಸ್ಥಾನದ ಸುತ್ತುಮುತ್ತ ಸ್ಥಳ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಕೆ.ಎಸ್. ಮಂಗಳಗೌರಿ, ಎಂ.ಎನ್. ಹರಿಶಂಕರ್, ಭೂಮಾಪಕ ಟಿ. ಹರ್ಷವರ್ಧನ್, ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ತಹಸೀಲ್ದಾರ್ ಪ್ರದೀಪ್, ತಾಲೂಕು ದಂಡಾಧಿಕಾರಿ ಹುಸೇನ್ ಸರಕಾವಸ್, ಚಂದ್ರಗುತ್ತಿ ನಾಡಕಚೇರಿ ಉಪ ತಹಸೀಲ್ದಾರ್ ವಿ.ಎಲ್. ಶಿವಪ್ರಸಾದ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾಕುಮಾರಿ, ಪಂಚಾಯತ್ ರಾಜ್ ಇಲಾಖೆ ಕಿರಿಯ ಅಭಿಯಂತರ ಗಣಪತಿ ನಾಯ್ಕ್, ಗ್ರಾಪಂ ಪಿಡಿಒ ನಾರಾಯಣಮೂರ್ತಿ, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಮಧು ಸೇರಿ ಪುರಾತತ್ವ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ