ಕನ್ನಡಪ್ರಭ ವಾರ್ತೆ, ದಾವಣಗೆರೆ
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 11.30ಕ್ಕೆ ಜಯದೇವ ವೃತ್ತದಿಂದ ಕಾಂಗ್ರೆಸ್ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಖಾಲಿ ಚೊಂಬುಗಳನ್ನು ಹಿಡಿದುಕೊಂಡು, ಬಿಜೆಪಿ ಜಿಲ್ಲಾ ಕಚೇರಿವರೆಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆ ಹೊರಟು, ಮುತ್ತಿಗೆ ಹಾಕಲಾಗುವುದು ಎಂದರು.
ಕೇಂದ್ರ ಸರ್ಕಾರವು ಈ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಚುನಾವಣೆ ಪೂರ್ವದಲ್ಲಿ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಸೇರಿದಂತೆ ಬಿಜೆಪಿಯವರು ಸರ್ಕಲ್ಗಳಲ್ಲಿ, ಜನದಟ್ಟಣೆ ಪ್ರದೇಶಗಳಲ್ಲಿ ಜನರಿಗೆ ಕರೆದು ಕರೆದು, ಭಾರತ್ ಅಕ್ಕಿ ಅಂತಾ ಕೊಟ್ಟಿದ್ದರು. ಆದರೆ, ಚುನಾವಣೆ ನಂತರ ಭಾರತ್ ಅಕ್ಕಿ ನೀಡಿಲ್ಲ ಎಂದು ಟೀಕಿಸಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ ನೇತೃತ್ವದಲ್ಲಿ ಪಕ್ಷದ ಜನಪ್ರತಿನಿಧಿಗಳು, ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ವಿದ್ಯಾರ್ಥಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಗುರಿಯಾಗಿಸಿಕೊಂಡು, ದಾಳಿ ಮಾಡುತ್ತಿದೆ. ಈ ಎಲ್ಲಾ ವಿಚಾರವನ್ನು ಮುಂದಿಟ್ಟುಕೊಂಡು, ಕೇಂದ್ರದ ಸೇಡಿನ ರಾಜಕಾರಣದ ವಿರುದ್ಧವೂ ಹೋರಾಟ ನಡೆಯಲಿದೆ ಎಂದರು.
ಪಕ್ಷದ ಮುಖಂಡರಾದ ಕೆ.ಜಿ.ಶಿವಕುಮಾರ, ಅಯೂಬ್ ಪೈಲ್ವಾನ್, ಎಸ್.ಮಲ್ಲಿಕಾರ್ಜುನ, ಎ.ನಾಗರಾಜ, ಅಬ್ದುಲ್ ಜಬ್ಬಾರ್, ಆರೀಫ್ ಖಾನ್, ಮಂಜಮ್ಮ, ಮಂಗಳ, ದಾಕ್ಷಾಯಣಮ್ಮ, ಶುಭಮಂಗಳ, ರಾಜೇಶ್ವರಿ, ಹರೀಶ, ಯುವರಾಜ, ಡೋಲಿ ಚಂದ್ರು ಇತರರು ಇದ್ದರು.