ಮಂಗಳೂರು ಏರ್‌ಪೋರ್ಟ್‌ಗೆ ಪಿಒಸಿ ಸ್ಥಾನಮಾನ ನೀಡಲು ಕ್ಯಾ. ಚೌಟ ಒತ್ತಾಯ

KannadaprabhaNewsNetwork |  
Published : Dec 12, 2025, 03:15 AM IST
32 | Kannada Prabha

ಸಾರಾಂಶ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ ‘ಪಾಯಿಂಟ್ ಆಫ್ ಕಾಲ್’ ಸ್ಥಾನಮಾನ ನೀಡುವ ಅಗತ್ಯತೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ.

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ ‘ಪಾಯಿಂಟ್ ಆಫ್ ಕಾಲ್’ ಸ್ಥಾನಮಾನ ನೀಡುವ ಅಗತ್ಯತೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ.ಲೋಕಸಭೆಯಲ್ಲಿ ನಿಯಮ 377ರಡಿ ವಿಷಯದ ಬಗ್ಗೆ ಧ್ವನಿಯೆತ್ತಿರುವ ಅವರು, ಮಂಗಳೂರು ಏರ್‌ಪೋರ್ಟ್‌ 2024-25ರ ಅವಧಿಯಲ್ಲಿ 7.15 ಲಕ್ಷ ಅಂತಾರಾಷ್ಟ್ರೀಯ ಪ್ರಯಾಣಿಕರು ಸೇರಿದಂತೆ ಒಟ್ಟು ಸುಮಾರು 23.4 ಲಕ್ಷ ಮಂದಿಯ ಪ್ರಯಾಣವನ್ನು ನಿರ್ವಹಿಸಿದ್ದು, ಆ ಮೂಲಕ ಸುಮಾರು 16,800ಕ್ಕೂ ಹೆಚ್ಚು ವಿಮಾನಗಳ ಹಾರಾಟ ನಡೆಸಿದೆ. ಇದರೊಂದಿಗೆ ವಾರ್ಷಿಕವಾಗಿ ಶೇ.15ಕ್ಕಿಂತ ಹೆಚ್ಚು ಬೆಳವಣಿಗೆಯನ್ನು ದಾಖಲಿಸಿದೆ. ವಿಮಾನ ನಿಲ್ದಾಣಕ್ಕೆ ಪಿಒಸಿ ಸ್ಥಾನಮಾನ ನೀಡುವುದರಿಂದ ಈ ಭಾಗದ ಜನರಿಗೆ ನೇರ ಅಂತಾರಾಷ್ಟ್ರೀಯ ಸಂಪರ್ಕ ಸಾಧ್ಯವಾಗುತ್ತದೆ. ಜತೆಗೆ ವಿಮಾನಯಾನ ಕಾರ್ಯಾಚರಣೆಗಳನ್ನು ಮತ್ತಷ್ಟು ವಿಸ್ತರಿಸುವುದಕ್ಕೆ ಅನುಕೂಲವಾಗುತ್ತದೆ. ಅಲ್ಲದೆ ವಿದೇಶದಲ್ಲಿ ದುಡಿಯುವ ವರ್ಗಕ್ಕೆ ಹಾಗೂ ಅವರ ಕುಟುಂಬಗಳ ಸುಗಮ ಪ್ರಯಾಣ ಸಾಧ್ಯವಾಗುತ್ತದೆ. ಈ ರೀತಿಯ ವಿಮಾನಯಾನ ಸಂಪರ್ಕವು ಸಹಜವಾಗಿಯೇ ಇಲ್ಲಿನ ವ್ಯಾಪಾರ ಮತ್ತು ಹೂಡಿಕೆ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ. ಇದು ಸಾಗರೋತ್ತರ ಉತ್ಪನ್ನಗಳ ರಫ್ತು, ಅಡಿಕೆ, ಗೋಡಂಬಿ ಸಂಸ್ಕರಣೆ ಮತ್ತು ಪೆಟ್ರೋಕೆಮಿಕಲ್ಸ್ ನಂತಹ ಪ್ರಾದೇಶಿಕ ಉದ್ಯಮಗಳಿಗೂ ಬೆಂಬಲ-ಉತ್ತೇಜನ ನೀಡುತ್ತದೆ. ಜೊತೆಗೆ ಮಂಗಳೂರು ವಿಶೇಷ ಆರ್ಥಿಕ ವಲಯದ ಬೆಳವಣಿಗೆಗೂ ಪೂರಕವಾಗಲಿದೆ ಎಂದು ಕ್ಯಾ. ಚೌಟ ಸದನಕ್ಕೆ ಮನವರಿಕೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಾ.ಅಂಬೇಡ್ಕರ್‌ ಭವನ ಅವ್ಯವಸ್ಥೆ ಆಗರ !
ಕಬ್ಬಿಗೆ ಒಟ್ಟು ₹ 5500 ನೀಡಲು ರೈತರ ಬೇಡಿಕೆ