ಕನ್ನಡಪ್ರಭ ವಾರ್ತೆ ಬೀದರ್
ಕಸಾಪ ತಾಲೂಕು ಹಾಗೂ ಜಿಲ್ಲಾ ಘಟಕ ಆಯೋಜಿಸಿದ್ದ ಮೈಲೂರಿನ ತಾಯಿ ಕ್ರಿಸ್ಟಿನ್ ಅವರ ಮನೆಯಲ್ಲಿ ನಡೆದ ಮನೆಯಂಗಳದಲ್ಲಿ ಮಾತು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ರಾಜ್ಯ ಸಂಚಾಲಕರಾದ ಶ್ರೀಕಾಂತ ಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಾಯಿ ಕ್ರಿಸ್ಟಿನ್ ಅವರು ಸಂಕಷ್ಟದ ಸುಳಿಯಲ್ಲಿ ಸಿಕ್ಕಂತ ಅನೇಕ ಹೆಣ್ಣು ಮಕ್ಕಳ ಬಾಳು ಬೆಳಗಿದವರು ಎಂದರು.ಸಂವಿಧಾನದ ಬಗ್ಗೆ ಜಾಗೃತಿ ಮಾಡುವಾಗ ತಾವೊಬ್ಬರೆ ನಮ್ಮ ಜೊತೆಗಿದ್ದು ನೂರಾರು ಗ್ರಾಮಗಳಿಗೆ ಸುತ್ತಾಡಿ ಸೇವೆಯೆಂಬುವುದು ಸಾರ್ಥಕ ಜೀವನದ ಸಂತೃಪ್ತಿ ಎಂಬುವುದನ್ನು ತೋರಿಸಿಕೊಟ್ಟ ಮಹಾ ಮಾತೆ. 76 ವರ್ಷದ ಸಿಸ್ಟರ್ ಕ್ರಿಸ್ಟಿನ್, ಮಿಸ್ಕಿಚ್ ಎ.ಸಿ. ಕಾರ್ಮೆಲ್ ನಿಕೇತನ ಸಂಸ್ಥೆ ಕಟ್ಟಿಕೊಂಡು ಜಿಲ್ಲೆಯ ವಿಧವೆಯವರಿಗೆ, ಅಂಗವಿಕಲರಿಗೆ, ನಿರ್ಗತಿಕರ ಬಾಳಿಗೆ ಬೆಳಕಾಗಿ ಉಪಜೀವನಕ್ಕೆ ನಾಂದಿಯಾದವರು ಎಂದರು.
ಪ್ರಾಚಾರ್ಯರಾದ ದೇವೆಂದ್ರ ಹಳ್ಳಿಖೇಡಕರ ಕ್ರಿಸ್ಟಿನ್ ಅವರ ಸೇವಾ ಮನೋಭಾವನೆ ನೋಡಿದರೆ ಅವರು ಜಿಲ್ಲೆಯ ಮದರ್ ತೆರೆಸಾ ಎನ್ನಬಹುದಾಗಿದೆ. ಅಂಗವಿಕಲವೆಂಬುವುದು ಕೀಳರಿಮೆಯಲ್ಲ. ಅಂತಹ ಸಂಕಷ್ಟದ ಮಧ್ಯೆಯು ಅನೇಕ ಜನಹಿತ ಕಾರ್ಯಕ್ರಮಗಳನ್ನು ಮಾಡಿ ಹೆಣ್ಣು ಮಕ್ಕಳಿಗೆ ಸ್ವಾವಲಂಬಿ ಬದುಕಿಗೆ ಪ್ರೇರಣೆ ನೀಡಿದವರು ಸಾಮಾಜಕ್ಕೊಂದು ಮಾದರಿ ಎಂದರು.
ಕಾರ್ಯಕ್ರಮದಲ್ಲಿ ಮೇರಿ ಹಾಗೂ ಕನ್ಯಾಕುಮಾರಿ ತಮ್ಮ ಅನುಭವ ಹಂಚಿಕೊಂಡರು. ತಾಲೂಕು ಕಸಾಪ ಅಧ್ಯಕ್ಷ ಎಂಎಸ್ ಮನೋಹರ ಮಾತನಾಡಿದರು. ಈ ಸಂದರ್ಭದಲ್ಲಿ ಶಂಭುಲಿಂಗ ವಾಲದೊಡ್ಡಿ, ಟಿಎಂ ಮಚ್ಚೆ ಹಾಗೂ ಶಿವಶಂಕರ ಟೋಕರೆ ಇದ್ದರು.