ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶಿವಮೊಗ್ಗ ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ, ಶಿವಮೊಗ್ಗ ಚಿತ್ರಸಮಾಜ ಜಂಟಿಯಾಗಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ದಸರಾ ಚಿತ್ರೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಚಿತ್ರರಂಗದಲ್ಲಿ ಇಂದು ಸಾಕಷ್ಟು ಸಮಸ್ಯೆ-ಸವಾಲುಗಳ ನಡುವೆಯೂ ಹಲವು ತಜ್ಞರು, ಪರಿಣಿತರು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವುದರ ಕಾರಣದಿಂದಾಗಿ ರಾಜ್ಯದಲ್ಲಿ ಚಿತ್ರರಂಗ, ಚಿತ್ರಮಂದಿರಗಳು ಜೀವಂತವಾಗಿವೆ. ಇಲ್ಲದಿದ್ದಲ್ಲಿ ಪಳೆಯುಳಿಕೆಗಳಾಗಿ ನೋಡಬೇಕಾಗಿತ್ತು ಎಂದರು.ರಾಜ್ಯದಲ್ಲಿನ ಚಲನಶೀಲ ಚಿತ್ರರಂಗ ಮತ್ತು ತಂತ್ರಜ್ಞರಿಂದಾಗಿ ಅತ್ಯಾಧುನಿಕ ತಂತ್ರಜ್ಞಾನಾಧಾರಿತವಾದ ಯಂತ್ರೋಪಕರಣಗಳು ಬಳಕೆಯಾಗುತ್ತಿವೆ. ಈ ಮೊದಲು ರಾಜ್ಯದ ಚಲನಚಿತ್ರದ ನಿರ್ಮಾಪಕರು ತಮ್ಮ ಅಗತ್ಯಗಳಿಗಾಗಿ ಮದ್ರಾಸ್ ಹೋಗಬೇಕಾಗಿತ್ತು ಎಂದ ಅವರು, ಚಿತ್ರರಂಗದಲ್ಲಿ ನಿರ್ಮಾಪಕರಾಗಿ, ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ್ದ ಆಕಾಶ್ ಆಡಿಯೋ ಸ್ಥಾಪಿಸಿದ್ದ ಕ್ಷಣಗಳನ್ನು ನೆನಪಿಸಿಕೊಂಡರು.
ದೇವಾಲಯಗಳಲ್ಲಿನ ಗಂಟೆ ಸದ್ದಿಗಿಂತ ಶಾಲೆಗಳಲ್ಲಿ ಮೊಳಗುವ ಗಂಟೆ ಸದ್ದು ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲವಾಗಿ ರೂಪಿಸುತ್ತದೆ. ಶಿಕ್ಷಣವು ವಿದ್ಯಾರ್ಥಿಗಳು ಸಾಮಾಜಿಕವಾಗಿ ಸ್ಥಾನಮಾನ ಹೊಂದಲು ಸಹಕಾರಿಯಾಗಿದೆ ಎಂದು ಹೇಳಿದರು.
ನಟ ಶರಣ್, ನಟಿ ಕಾರುಣ್ಯರಾಮ್ ಉಪಸ್ಥಿತರಿದ್ದು, ಮಾತನಾಡಿದರು. ಸೂಡಾ ಅಧ್ಯಕ್ಷ ಎಸ್.ಎಚ್.ಸುಂದರೇಶ್, ಪಾಲಿಕೆ ಆಯುಕ್ತ ಮಾಯಣ್ಣಗೌಡ, ಮಾಜಿ ನಗರಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ನಾಗರಾಜ ಕಂಕಾರಿ, ವಿಶ್ವಾಸ್, ಕಲಾವಿದರಾದ ಬಿಂಬಶ್ರೀ, ಫಾಲಾಕ್ಷಿ, ಕೃಪಾಕರ, ಅಚ್ಯತ ನಾರಾಯಣ ಮತ್ತಿತರರು ಹಾಜರಿದ್ದರು.
ಹಲವು ಸಮಸ್ಯೆ-ಸವಾಲುಗಳಿಂದಾಗಿ ಬೆಳ್ಳಿತೆರೆ ತನ್ನ ಮಹತ್ವವನ್ನು ಕಳೆದುಕೊಂಡು ಸೊರಗುತ್ತಿರುವುದು ಅತ್ಯಂತ ನೋವಿನ ಸಂಗತಿ. ಕಲೆ ಮತ್ತು ಕಲಾವಿದರನ್ನು ಪೋಷಿಸುವ ಮನಸ್ಸುಗಳ ತುರ್ತು ಅಗತ್ಯವಿದೆ.
ವಿಶ್ವದ ಭೂಪಟದಲ್ಲಿ ಗುರುತಿಸಿಕೊಳ್ಳಬಹುದಾದ ಜಿಲ್ಲೆ ಶಿವಮೊಗ್ಗ. ಕಲೆ, ಸಾಹಿತ್ಯ, ಸಿನಿಮಾ, ರಂಗಭೂಮಿ, ರಾಜಕಾರಣ ಹೀಗೆ ಹಲವು ಕ್ಷೇತ್ರಗಳಿಗೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅಪಾರ.