ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕಾರ್ಯಕ್ರಮ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಹಕ್ಕೊತ್ತಾಯಗಳನ್ನು ಒಳಗೊಂಡ ಮನವಿ ಪತ್ರಗಳನ್ನು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಲ್ಲಿಸಿ ತೆರಳಿದ್ದರು. ಆದರೆ ಸ್ವೀಕರಿಸಿದ್ದ ಮನವಿ ಪತ್ರಗಳನ್ನು ವೇದಿಕೆ ಬಳಿಯೇ ಎಸೆಯಲಾಗಿದೆ. ಸಾರ್ವಜನಿಕರು ವೇದಿಕೆ ಬಳಿ ತೆರಳಿ ನೋಡಿದಾಗ ಮನವಿ ಪತ್ರಗಳು ಬೀಸಾಡಿರುವುದು ಗಮನಕ್ಕೆ ಬಂದಿದೆ. ಮನವಿ ಪತ್ರಗಳನ್ನು ಬೀಸಾಡಿರುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಕಾಟಾಚಾರಕ್ಕೆ ಮನವಿ ಪತ್ರಗಳನ್ನು ಸಿಎಂ ಸ್ವೀಕರಿಸಿ ಹೋಗಿದ್ದಾರೆ. ತಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂಬ ಉದ್ದೇಶದಿಂದ ನೀಡುವ ಮನವಿ ಪತ್ರಗಳನ್ನು ನೀಡಿದರೆ ಅದನ್ನು ಅಲ್ಲಿಯೇ ಎಸೆದು ಹೋದರೆ ಹೇಗೆ ಇವರು ಜನರ ಸಮಸ್ಯೆಗಳನ್ನು ಬಗೆಹರಿಸುತ್ತಾರೆ. ಇವರು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಾರೆ, ತಕ್ಷಣ ಸಾರ್ವಜನಿಕರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.ಸಮಾಜವಾದಿ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯ ಅವರ ನಿಜ ಮುಡಾ ಪ್ರಕರಣದಿಂದ ಬಯಲಾಗಿದೆ. ತನಿಖೆ ಮುಗಿಯುವ ವರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಚಾಮರಾಜನಗರ ಜಿಲ್ಲೆಯ ಜನರ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ರೈತ ಸಂಘ ಇವರ ವಿರುದ್ಧ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಕುಮಾರ್, ಕುಂತೂರು ನಂಜುಂಡಸ್ವಾಮಿ, ಹೆಗ್ಗೋಠಾರ ವಿಜಯಕುಮಾರ್ ಇದ್ದರು.