ದೊಡ್ಡಬಳ್ಳಾಪುರ: ಇಲ್ಲಿನ ದರ್ಗಾ ಜೋಗಿಹಳ್ಳಿಯ ಗಣೇಶ ದೇವಾಲಯ ಸಮೀಪ ಹಳೇ ರಾಜೇಶ್ವರಿ ಟೆಂಟ್ ಸಮೀಪ ಜನವಸತಿ ಪ್ರದೇಶದಲ್ಲಿ ಬಾರ್ ತೆರೆಯಲು ಸಿದ್ದತೆಗಳು ನಡೆದಿರುವ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯರು, ಬುಧವಾರ ಸಂಜೆ ಸ್ಥಳದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ದೊಡ್ಡಬಳ್ಳಾಪುರ: ಇಲ್ಲಿನ ದರ್ಗಾ ಜೋಗಿಹಳ್ಳಿಯ ಗಣೇಶ ದೇವಾಲಯ ಸಮೀಪ ಹಳೇ ರಾಜೇಶ್ವರಿ ಟೆಂಟ್ ಸಮೀಪ ಜನವಸತಿ ಪ್ರದೇಶದಲ್ಲಿ ಬಾರ್ ತೆರೆಯಲು ಸಿದ್ದತೆಗಳು ನಡೆದಿರುವ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯರು, ಬುಧವಾರ ಸಂಜೆ ಸ್ಥಳದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಇದು ಕೊಳಗೇರಿಯ ಸಮೀಪದ ಪ್ರದೇಶ ಹಾಗೂ ಜನವಸತಿ ಪ್ರದೇಶವಾಗಿದ್ದು, ಈ ಸ್ಥಳದಲ್ಲಿ ಬಾರ್ ತೆರೆದರೆ ಸ್ಥಳೀಯರಿಗೆ ಅನೇಕ ರೀತಿಯ ತೊಂದರೆಗಳು ಉಂಟಾಗುವ ಸಾಧ್ಯತೆ ಇದೆ. ಮಹಿಳೆಯರು, ಮಕ್ಕಳು ಸಂಚರಿಸುವುದು ಕಷ್ಟಕರವಾಗಲಿದ್ದು, ಅಕ್ಕಪಕ್ಕದ ಮನೆಗಳಲ್ಲಿ ವಾಸ ಮಾಡುವುದು ಕೂಡ ಸವಾಲಿನ ಕೆಲಸವಾಗುತ್ತದೆ. ಪಿಜಿ ಮಾಡುವುದಾಗಿ ಹೇಳಿ, ಬಳಿಕ ಲಾಡ್ಜಿಂಗ್ ಮತ್ತು ಬೋರ್ಡಿಂಗ್ ಹೆಸರಿನಲ್ಲಿ ರೆಸ್ಟೋರೆಂಟ್ ಆರಂಬಿಸುವ ಕೆಲಸ ನಡೆದಿದೆ. ಈ ಹಿನ್ನಲೆಯಲ್ಲಿ ಕೂಡಲೇ ಬಾರ್ ತೆರೆಯುವ ಪ್ರಯತ್ನ ಕೈಬಿಡಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಆಗಮಿಸಿದ ಆರಕ್ಷಕ ನಿರೀಕ್ಷಕ ಸಾದಿಕ್ ಪಾಷಾ, ಸ್ಥಳ ಪರಿಶೀಲನೆ ನಡೆಸಿ, ನಾಗರಿಕರ ಅಹವಾಲು ಆಲಿಸಿದರು. ಸಾರ್ವಜನಿಕರ ಒತ್ತಾಯದ ಕುರಿತು ಸ್ಥಳದ ಮಾಲೀಕರೊಂದಿಗೆ ಚರ್ಚಿಸಿ ಧನಾತ್ಮಕವಾಗಿ ಸಮಸ್ಯೆಯ ಪರಿಹಾರಕ್ಕೆ ಕ್ರಮ ವಹಿಸುವ ಭರವಸೆ ನೀಡಿದರು.
ನಗರಸಭಾ ಸದಸ್ಯೆ ಪ್ರಭಾ ನಾಗರಾಜ್ ಮಾತನಾಡಿ, ಸ್ಥಳೀಯ ನಾಗರಿಕರ ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ಕಾರಣಕ್ಕೂ ಈ ಸ್ಥಳದಲ್ಲಿ ಬಾರ್ ತೆರೆಯಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.