ವಿವಿಧ ಬೇಡಿಕೆಗೆ ಒತ್ತಾಯಿಸಿ ಸಿಐಟಿಯುನಿಂದ ಬೃಹತ್ ಪ್ರತಿಭಟನೆ

KannadaprabhaNewsNetwork |  
Published : May 31, 2026, 02:45 AM IST
ಫೋಟೋವಿವರ- (30ಎಚ್‌ಪಿಟಿ4) ಹೊಸಪೇಟೆ ನಗರದಲ್ಲಿ ಶನಿವಾರ ಸಿಐಟಿಯುನಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬೃಹತ್‌ ಪ್ರತಿಭಟನೆ ನಡೆಸಿ ಜಿಲ್ಲಾದಿಕಾರಿ ಕಚೇರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು | Kannada Prabha

ಸಾರಾಂಶ

ಕೇಂದ್ರ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ಮಾಡಿರುವ ನಾಲ್ಕು ಕಾರ್ಮಿಕ ಸಂಹಿತೆಗಳಿಂದ ಕಾರ್ಮಿಕರ ಹಕ್ಕುಗಳು ಮೊಕಟುಗೊಳ್ಳಲಿವೆ.

ಹೊಸಪೇಟೆ: ಮಾಸಿಕ ₹36 ಸಾವಿರ ಕನಿಷ್ಠ ವೇತನ ನಿಗದಿ, ಕಾರ್ಮಿಕ ಸಂಹಿತೆಗಳಿಗೆ ತಿದ್ದುಪಡಿ, ಖಾಯಂಯೇತರ ಕಾರ್ಮಿಕರ ಖಾಯಂಗೆ ಶಾಸನಕ್ಕಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಸಿಐಟಿಯುನ ರಾಜ್ಯ ಉಪಾಧ್ಯಕ್ಷ ಆ‌ರ್.ಎಸ್. ಬಸವರಾಜ ಮಾತನಾಡಿ, ರಾಜ್ಯ ಸರ್ಕಾರ ಕನಿಷ್ಠ ವೇತ ನವನ್ನು ಏಪ್ರಿಲ್ 2025 ರಿಂದ ಜಾರಿಗೆ ಬರುವಂತೆ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಬೇಕು. ಅಧಿಸೂಚನೆಯಿಂದ ಹೊರಗಿಟ್ಟಿರುವ 19 ಉದ್ದಿಮೆಗಳನ್ನು ಕನಿಷ್ಠ ವೇತನ ವ್ಯಾಪ್ತಿಗೆ ತಂದು ಅಧಿಸೂಚನೆ ಹೊರಡಿಸಬೇಕು.

ಕೇಂದ್ರ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ಮಾಡಿರುವ ನಾಲ್ಕು ಕಾರ್ಮಿಕ ಸಂಹಿತೆಗಳಿಂದ ಕಾರ್ಮಿಕರ ಹಕ್ಕುಗಳು ಮೊಕಟುಗೊಳ್ಳಲಿವೆ. ಶ್ರಮದ ಶೋಷಣೆ ಹೆಚ್ಚಾಗಲಿದೆ. ಕೈಗಾರಿಕಾ ಸಂಬಂಧಗಳಿಗೆ ದಕ್ಕೆಯಾಗಲಿದೆ. ಇದು ರಾಜ್ಯದ ಅಭಿವೃದ್ಧಿಗೆ ಮಾರಕವಾಗಲಿದೆ. ಇವುಗಳನ್ನು ರಾಜ್ಯ ಸರ್ಕಾರ ಯಥಾರೀತಿ ಜಾರಿ ಮಾಡದೆ, ತಿದ್ದುಪಡಿಗಳನ್ನು ಮಾಡಿ ಜಾರಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಸಿಐಟಿಯು ಮುಖಂಡರಾದ ಆರ್.ಭಾಸ್ಕರ್ ರೆಡ್ಡಿ ಮತ್ತು ಕೆ.ನಾಗರತ್ನಮ್ಮ ಮಾತನಾಡಿ, ಗ್ರಾಮ ಪಂಚಾಯತಿ ನೌಕರರು, ಅಂಗನ ವಾಡಿ ಸಿಬ್ಬಂದಿ, ಬಿಸಿಯೂಟ ಕಾರ್ಮಿಕರು ಹಾಗೂ ಸ್ವಚ್ಚತಾ ಕಾರ್ಮಿಕರಿಗೆ ಕನಿಷ್ಠ ವೇತನ ನಿಗಧಿ ಮಾಡುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡರಾದ ಎಂ. ಗೋಪಾಲ್, ಕೆ.ಎಂ.ಸಂತೋಷ್ ಸಭೆಯಲ್ಲಿ ಮಾತನಾಡಿದರು.

ಸಿಐಟಿಯು ಮುಖಂಡರಾದ ಕೆ.ಎಂ.ಸ್ವಪ್ನ, ನಾಗಭೂಷಣ ರೆಡ್ಡಿ ಸೇರಿದಂತೆ, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸಿಬ್ಬಂದಿ, ಬಿಸಿಯೂಟ ಸಿಬ್ಬಂದಿ, ಕಟ್ಟಡ ಕಾರ್ಮಿಕರು, ಆಟೋ ಚಾಕರು, ಗುತ್ತಿಗೆ ಸ್ವಚ್ಚತಾ ಸಿಬ್ಬಂದಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಹೊಸಪೇಟೆ ನಗರದಲ್ಲಿ ಶನಿವಾರ ಸಿಐಟಿಯುನಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬೃಹತ್‌ ಪ್ರತಿಭಟನೆ ನಡೆಸಿ ಜಿಲ್ಲಾದಿಕಾರಿ ಕಚೇರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಹೊಸಪೇಟೆ ನಗರದಲ್ಲಿ ಶನಿವಾರ ಸಿಐಟಿಯುನಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್‌ ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗದಗ ಜಿಲ್ಲೆಯಲ್ಲಿ ಜಾರಿಯಾಗದ ಹೊಸ ಅಬಕಾರಿ ನೀತಿ
ಜೀವರಕ್ಷಕ, ಪ್ರವಾಸಿ ಮಿತ್ರ ಸಿಬ್ಬಂದಿಗೆ ಸನ್ಮಾನ