ಉಡುಪಿ: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ರಾಜ್ಯಾದ್ಯಂತ ನೀಡಿದ ಕರೆಯಂತೆ ರಾಜ್ಯ ಸರ್ಕಾರ ಪ್ರಕಟಿಸಿರುವ ಕಾರ್ಮಿಕ ಸಂಬಂಧಗಳ ಸಂಹಿತೆಯ ಕರುಡು ನಿಯಮಗಳನ್ನು ಆಕ್ಷೇಪಿಸಿ, ಮಂಗಳವಾರ ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘ, ಬೀಡಿ ಮತ್ತು ತಂಬಾಕು ಕಾರ್ಮಿಕರ ಸಂಘ ಮತ್ತು ಸಾಮಾನ್ಯ ಕಾರ್ಮಿಕರ ಸಂಘಗಳು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದವು. ನಂತರ ಕಾರ್ಮಿಕ ಅಧಿಕಾರಿಗಳು ಮತ್ತು ಅಪರ ಜಿಲ್ಲಾಧಿಕಾರಿ ಮೂಲಕ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಮತ್ತು ಕಾರ್ಮಿಕ ಕಾರ್ಯದರ್ಶಿಗೆ ಆಕ್ಷೇಪಣೆ ಸಲ್ಲಿಸಿತು. ಈ ಆಕ್ಷೇಪಣೆಯಲ್ಲಿ ಕೇಂದ್ರ ಸರ್ಕಾರದ ಕಾರ್ಮಿಕ ಸಂಹಿತೆಗಳನ್ನು ರದ್ದು ಪಡಿಸಬೇಕು, ಕಾರ್ಮಿಕರ ಅಧಿಕಾರಗಳನ್ನು ಮೊಟಕುಗೊಳಿಸುವ ಕೇಂದ್ರ ಸರಕಾರದ ಪ್ರಯತ್ನವನ್ನು ರಾಜ್ಯ ಸರ್ಕಾರ ವಿರೋಧಿಸಬೇಕು, ರಾಜ್ಯ ಸರ್ಕಾರ ತನ್ನ ಅಧಿಕಾರವನ್ನು ಚಲಾಯಿಸಿ ಮೂಲ ಸಂಹಿತೆಗಳಿಗೆ ತಿದ್ದುಪಡಿಗಳನ್ನು ತಂದು ನಂತರ ನಿಯಮಾವಳಿ ರೂಪಿಸಬೇಕು, ಕರಡು ನಿಯಮಗಳನ್ನು ಕನ್ನಡದಲ್ಲಿ ಪ್ರಕಟಿಸಿ ನಂತರ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಬೇಕು. ರಾಜ್ಯ ಸರ್ಕಾರ ಕೂಡಲೇ ಕನಿಷ್ಠ ವೇತನ ಆಧಿಸೂಚನೆ ಹೋರಾಡಿಸಬೇಕು ಎಂದು ಆಗ್ರಹಿಸಲಾಗಿದೆ