ಕಾರ್ಮಿಕರ ಖಾಯಮಾತಿಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ

KannadaprabhaNewsNetwork |  
Published : May 31, 2026, 02:30 AM IST
ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿಯ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಮಾಸಿಕ ಕನಿಷ್ಠ ₹36 ಸಾವಿರ ವೇತನ ನಿಗದಿ, ಕಾರ್ಮಿಕ ಸಂಹಿತೆಗಳಿಗೆ ತಿದ್ದುಪಡಿ ಹಾಗೂ ಖಾಯಂಯೇತರ ಕಾರ್ಮಿಕರ ಖಾಯಮಾತಿಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿಯ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮಾಸಿಕ ಕನಿಷ್ಠ ₹36 ಸಾವಿರ ವೇತನ ನಿಗದಿ, ಕಾರ್ಮಿಕ ಸಂಹಿತೆಗಳಿಗೆ ತಿದ್ದುಪಡಿಗೆ ಒತ್ತಾಯಕನ್ನಡಪ್ರಭ ವಾರ್ತೆ ಕಾರವಾರ

ಮಾಸಿಕ ಕನಿಷ್ಠ ₹36 ಸಾವಿರ ವೇತನ ನಿಗದಿ, ಕಾರ್ಮಿಕ ಸಂಹಿತೆಗಳಿಗೆ ತಿದ್ದುಪಡಿ ಹಾಗೂ ಖಾಯಂಯೇತರ ಕಾರ್ಮಿಕರ ಖಾಯಮಾತಿಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿಯ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಮಿತ್ರ ಸಮಾಜದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ರಸ್ತೆಗಳ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡಿತು. ಈ ವೇಳೆ ಸರ್ಕಾರದ ಕಾರ್ಮಿಕ ನೀತಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ನಾಡಿನ ಎಲ್ಲಾ ಕಾರ್ಮಿಕರಿಗೂ ವೈಜ್ಞಾನಿಕ ಆಧಾರದ ಮೇಲೆ ಕನಿಷ್ಠ ವೇತನವನ್ನು ನಿಗದಿಪಡಿಸಿ ಶೀಘ್ರವಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರವು ಮೇ 22ರಂದು ಹೊರಡಿಸಿರುವ ಕನಿಷ್ಠ ವೇತನ ಅಧಿಸೂಚನೆಯನ್ನು ಸಿಐಟಿಯು ಸ್ವಾಗತಿಸುತ್ತದೆ. ಆದರೆ, ಈ ಅಧಿಸೂಚನೆಯು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾನದಂಡಗಳಿಗೆ ಪೂರಕವಾಗಿಲ್ಲ. ಪ್ರಸ್ತುತ ಗಗನಕ್ಕೇರಿರುವ ಬೆಲೆ ಏರಿಕೆ ಹಾಗೂ ಜೀವನ ವೆಚ್ಚಕ್ಕೆ ಅನುಗುಣವಾಗಿ ಕಾರ್ಮಿಕರಿಗೆ ಮಾಸಿಕ ಕನಿಷ್ಠ 36 ಸಾವಿರ ರೂ. ವೇತನ ನಿಗದಿಪಡಿಸಬೇಕು. ಅಲ್ಲದೇ, ಇದನ್ನು 2025ರ ಏಪ್ರಿಲ್ 11ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ತರಬೇಕು " ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಗಾರ್ಮೆಂಟ್ಸ್, ಪ್ಲಾಂಟೇಷನ್, ಬೀಡಿ, ಅಗರಬತ್ತಿ, ಕೈಮಗ್ಗ ಸೇರಿದಂತೆ ಪ್ರಮುಖ 19 ಉದ್ದಿಮೆಗಳಿಗೂ ಈ ವೇತನ ಹೆಚ್ಚಳವನ್ನು ವಿಸ್ತರಿಸಬೇಕು. ಈ ವಲಯಗಳಲ್ಲಿ ಅತಿ ಹೆಚ್ಚು ಮಹಿಳಾ ಕಾರ್ಮಿಕರು ದುಡಿಯುತ್ತಿದ್ದು, ವೇತನ ಹೆಚ್ಚಳದಿಂದ ಅವರಿಗೆ ಹೆಚ್ಚಿನ ಆರ್ಥಿಕ ಪ್ರಯೋಜನವಾಗಲಿದೆ ಹಾಗೂ ಅವರ ಜೀವನಮಟ್ಟ ಸುಧಾರಿಸಲಿದೆ ಎಂದು ಮುಖಂಡರು ವಿವರಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಹಕ್ಕುಗಳನ್ನು ಸಂಪೂರ್ಣವಾಗಿ ಕುಂಠಿತಗೊಳಿಸುವಂತಿವೆ. ಹೀಗಾಗಿ ರಾಜ್ಯ ಸರ್ಕಾರವು ಕಾರ್ಮಿಕರ ಹಿತರಕ್ಷಣೆಗಾಗಿ ಈ ಸಂಹಿತೆಗಳಿಗೆ ರಾಜ್ಯದ ಪರವಾದ ತಿದ್ದುಪಡಿಗಳನ್ನು ತರಬೇಕು. ಜೊತೆಗೆ ಗುತ್ತಿಗೆ, ಹಂಗಾಮಿ, ಟ್ರೈನಿ ಹಾಗೂ ಯೋಜನಾ ಕಾರ್ಮಿಕರಂತಹ ಕಾಯಂ ಹೊರತಾದ ನೌಕರರಿಗೆ ಕಾನೂನುಬದ್ಧ ಉದ್ಯೋಗ ಭದ್ರತೆ ಒದಗಿಸಬೇಕು ಮತ್ತು ಅವರನ್ನು ಕಾಯಂಗೊಳಿಸಲು ಪ್ರತ್ಯೇಕ ಶಾಸನ ರೂಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ಬಳಿಕ, ಸಿಐಟಿಯು ಮುಖಂಡರು ಹಾಗೂ ನೂರಾರು ಕಾರ್ಮಿಕರು ತಮ್ಮ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾನಗಲ್ಲನಲ್ಲಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ
ಡಿ.ಕೆ. ಶಿವಕುಮಾರ ನಾಯಕತ್ವದಲ್ಲಿ ಹೊಸ ಅಧ್ಯಾಯ ಆರಂಭ: ಶಾಸಕ ಮಾನೆ